ಚಾಮರಾಜನಗರ: ಕೂಂಬಿಂಗ್ ಕಿಂಗ್​​ ಎಷ್ಟೇ ತಡಕಾಡಿದ್ರು ಪತ್ತೆಯಾಗದ ಹುಲಿ, ಅರಣ್ಯಾಧಿಕಾರಿಗಳೊಂದಿಗೆ ವ್ಯಾಘ್ರನ ಕಣ್ಣಾ ಮುಚ್ಚಾಲೆ!

ಕಳೆದ ಒಂದು ತಿಂಗಳಿನಿಂದಲ್ಲೂ‌ ಚಾಮರಾಜನಗರ ಜಿಲ್ಲೆಯಲ್ಲಿ ಹುಲಿಗಳು ಪ್ರತ್ಯೇಕ್ಷಗೊಂಡು ಜನರಲ್ಲಿ ಆತಂಕ ಮೂಡಿಸಿವೆ. ಹುಲಿ ಸೆರೆ ಹಿಡಿಯದಿದ್ದರೆ ಅನ್ಯ ಮಾರ್ಗ ಹಿಡಿಯುವುದಾಗಿ ಇತ್ತೀಚೆಗೆ ರೈತರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅರಣ್ಯಾಧಿಕಾರಿಗಳಿಂದ ಮೂರು ದಿನ ಕೂಂಬಿಂಗ್ ಮಾಡಿದರೂ ಹುಲಿಯ ಒಂದೇ ಒಂದು ಸುಳಿವು ಪತ್ತೆಯಾಗಿಲ್ಲ.

ಚಾಮರಾಜನಗರ: ಕೂಂಬಿಂಗ್ ಕಿಂಗ್​​ ಎಷ್ಟೇ ತಡಕಾಡಿದ್ರು ಪತ್ತೆಯಾಗದ ಹುಲಿ, ಅರಣ್ಯಾಧಿಕಾರಿಗಳೊಂದಿಗೆ ವ್ಯಾಘ್ರನ ಕಣ್ಣಾ ಮುಚ್ಚಾಲೆ!
ಹುಲಿ ಪತ್ತೆಗೆ ಕೂಂಬಿಂಗ್
Edited By:

Updated on: Sep 08, 2025 | 3:03 PM

ಚಾಮರಾಜನಗರ, ಸೆಪ್ಟೆಂಬರ್​ 08: ಆಗಾಗ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿ ಕಣ್ಮರೆಯಾಗುತ್ತಿರುವ ಹುಲಿ (tiger) ಸೆರೆಗೆ ಅರಣ್ಯಾಧಿಕಾರಿಗಳು ಅದೆಷ್ಟೇ ಕೂಂಬಿಂಗ್ (Combing) ನಡೆಸಿದರೂ ಒಂದೇ ಒಂದು ಸುಳಿವು ಪತ್ತೆಯಾಗುತ್ತಿಲ್ಲ. ಇತ್ತ ವ್ಯಾಘ್ರ ಅರಣ್ಯಾಧಿಕಾರಿಗಳ ಜೊತೆ ಕಣ್ಣಾಮುಚ್ಚಾಲೇ ಆಟವಾಡುತ್ತಿದ್ದರೆ, ಅತ್ತ 62 ಮಂದಿ ಅರಣ್ಯ ಸಿಬ್ಬಂದಿ ರೋಸಿ ಹೋಗಿದ್ದಾರೆ.

ಗಡಿ ನಾಡು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನ ಹುಂಡಿ ಗ್ರಾಮದಲ್ಲಿ ಕಳೆದೊಂದು ತಿಂಗಳಿನಿಂದ ಬಿಟ್ಟು ಬಿಡದೇ ಆಗಾಗ ಪ್ರತ್ಯೇಕ್ಷವಾಗಿ, ಕಾಡಂದಿ ಬೇಟೆಯಾಡಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ಹುಲಿಯ ಸೆರೆಗೆ ಈಗ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಸಿಬ್ಬಂದಿ ಮುಂದಾಗಿದ್ದಾರೆ. ಆದರೆ ಬರೋಬ್ಬರಿ 3 ದಿನ ಕಳೆದರೂ ವ್ಯಾಘ್ರನ ಒಂದೇ ಒಂದು ಸುಳಿವು ಸಿಗದೆ ಇರುವುದು ಈಗ ಅರಣ್ಯ ಸಿಬ್ಬಂದಿಗೆ ತಲೆ ನೋವು ತಂದೊಡ್ಡಿದೆ.

ಇದನ್ನೂ ಓದಿ: ಚಾಮರಾಜನಗರ: ಹುಲಿ ಸೆರೆಗೆ ಮುಂದಾಗದಿದ್ರೆ ಮತ್ತೊಂದು ದುರಂತ ಸಂಭವಿಸುತ್ತಾ? ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ ಏನು?

ಇದನ್ನೂ ಓದಿ
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಕೂಂಬಿಂಗ್ ಕಿಂಗ್ ಎಂದೇ ಖ್ಯಾತಿಯ ರಾಮಾಪುರ ಆನೆ ಬಿಡಾರದ ಕಪ್ತಾನ ರೋಹಿತ್​​,​ ಮದ್ದಯ್ಯನಹುಂಡಿ, ಬೇರಂಬಾಡಿ, ಚೆನ್ನಮಲ್ಲಿಪುರ ವ್ಯಾಪ್ತಿಯಲ್ಲಿ ಆನೆಯ ಸಹಾಯದೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಜೊತೆಗೆ ಡ್ರೋನ್ ಕೂಡ ಬಳಕೆ ಮಾಡಲಾಗಿದೆ. ಕೆರೆ ಬಳಿ ರೈತರಿಗೆ ಹುಲಿ ಕಾಣಿಸಿಕೊಂಡ ಹಿನ್ನೆಲೆ ಅರಣ್ಯ ಇಲಾಖೆಗೆ ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರು. ಇದರಿಂದ ಎಸಿಎಫ್ ಸುರೇಶ್ ನೇತೃತ್ವದಲ್ಲಿ ಕೂಂಬಿಂಗ್​ ಆರಂಭಿಸಲಾಯಿತಾದರೂ ಇದೀಗ ಯಾವುದೇ ಪ್ರಯೋಜನಕ್ಕೆ ಬಂದಿಲ್ಲ.

ಚೆನ್ನಮಲ್ಲಿಪುರ, ಬೇರಂಬಾಡಿ ಭಾಗದಲ್ಲಿ ಹುಲಿಯ ಹೆಜ್ಜೆ ಗುರುತು ಕಂಡುಬಂದಿದ್ದು, ಇದನ್ನು ಆಧರಿಸಿ ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಹಾಗೂ ಡಿಆರ್​​ಎಫ್​ ರವಿ, ಗುಂಡ್ಲುಪೇಟೆ ಡಿಆರ್​​ಎಫ್ ಶಿವಕುಮಾರ್, ಎಸ್​​ಟಿಪಿಎಫ್​​ಆರ್​​ಎಫ್​ಓ ವೈರಮುಡಿ ಸೇರಿದಂತೆ ಒಟ್ಟು 62 ಮಂದಿ ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ‌.

ಇದನ್ನೂ ಓದಿ: ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಒಟ್ಟಿನಲ್ಲಿ ಕಳೆದ ಒಂದು ತಿಂಗಳಿನಿಂದಲ್ಲೂ‌ ಕಾಡು ಬಿಟ್ಟು ಗ್ರಾಮಗಳತ್ತ ಓಡಾಟ ನಡೆಸುತ್ತಿರುವ ಹುಲಿಯನ್ನು ಆದಷ್ಟು ಬೇಗ ಸೆರೆ ಹಿಡಿಯುವ ಯಾವುದೇ ಅನಾಹುತವಾಗದಿದ್ದರೆ ಸಾಕು ಎಂಬುದು ನಮ್ಮ ಆಶಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us