AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ

ಚಾಮರಾಜನಗರದಲ್ಲಿ ಅದಲ್ಲದೆ ಕೆಲ ತಿಂಗಳ ಹಿಂದೆ 5 ಹುಲಿಗಳು ವಿಷಪ್ರಾಶನಕ್ಕೊಳಗಾಗಿ ಸತ್ತಿದ್ದವು. ಇದೀಗ ಮತ್ತೊಮ್ಮೆ ಜಿಲ್ಲೆಯಲ್ಲಿ 5 ಹುಲಿಗಳು ಕಾಣಸಿಕ್ಕಿದ್ದು, ಈ ಹಿನ್ನೆಲೆ ವ್ಯಾಘ್ರ ಸೆರೆಗೆ ಮುಂದಾದ ಅರಣ್ಯ ಇಲಾಖೆಗೆ ಪಶು ವೈದ್ಯರ ಕೊರತೆ ಎದುರಾಗಿದ್ದು, ಸದ್ಯಕ್ಕೆ ಹುಲಿ ಸೆರೆ ಹಿಡಿಯಲು ಇಲಾಖೆ ಹಿಂದೇಟು ಹಾಕುತ್ತಿದೆ.

ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ
ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಇಲಾಖೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Dec 22, 2025 | 9:07 AM

Share

ಚಾಮರಾಜನಗರ, ಡಿಸೆಂಬರ್ 22: ಹಲವು ದಿನಗಳಿಂದ ಚಾಮರಾಜನಗರದಲ್ಲಿ (Chamarajanagar) ಹುಲಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಮುಂದೆ ಎಷ್ಟೇ ಗೋಗರೆದರೂ ಕೊನೆಗೆ ಪ್ರಯೋಜನವಾದಾಗ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಇದೇ ಸಂದರ್ಭದಲ್ಲಿ ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದೀಗ ಮತ್ತೊಮ್ಮೆ ನಂಜೆದೇವಪುರ ಬಳಿ 5 ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಕಾಟಕ್ಕೆ ಬ್ರೇಕ್ ಬೀಳದಾಗಿದೆ. ಈ ಹಿನ್ನೆಲೆ ವ್ಯಾಘ್ರಗಳಿಗೆ ಬಲೆ ಬೀಸಲು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಿಬ್ಬಂದಿ ಮುಂದಾಗಿದ್ದರೂ ಪಶು ವೈದ್ಯರ ಕೊರತೆಯಿಂದಾಗಿ ಕಾರ್ಯಾಚರಣೆ ಸ್ಥಗಿತಗೊಂಡಿದೆ.

ಇರೋದು ಇಬ್ಬರೇ ಪಶು ವೈದ್ಯರು

ಚಾಮರಾಜನಗರ ಜಿಲ್ಲೆಯ ನಂಜೆದೇವಪುರ ಗ್ರಾಮದ ಬಳಿ ಐದು ಹುಲಿಗಳು ಒಂದೇ ಸ್ಥಳದಲ್ಲಿ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದೆ. ಬಿಳಿಗಿರಿ ಟೈಗರ್ ರಿಸರ್ವ್ ವ್ಯಾಪ್ತಿಯ ಈ ಪ್ರದೇಶದಲ್ಲಿ ಹುಲಿಗಳ ಚಲನವಲನವನ್ನು ಅರಣ್ಯ ಇಲಾಖೆ ಈಗಾಗಲೇ ಲೋಕೇಷನ್ ಟ್ರ್ಯಾಕಿಂಗ್ ಮೂಲಕ ಗಮನಿಸುತ್ತಿದೆ. ಆದರೆ ಹುಲಿಗಳನ್ನು ಸೆರೆ ಹಿಡಿಯುವ ಕಾರ್ಯದಲ್ಲಿ ಅರಣ್ಯ ಸಿಬ್ಬಂದಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಕೇವಲ ಇಬ್ಬರು ಪಶುವೈದ್ಯರು ಮಾತ್ರ ಲಭ್ಯವಿರುವುದರಿಂದ ಐದು ಹುಲಿಗಳಿಗೆ ಒಂದೇ ವೇಳೆ ಅರವಳಿಕೆ ಮದ್ದು ನೀಡುವುದು ಅಸಾಧ್ಯ ಎನ್ನಲಾಗುತ್ತಿದೆ. ಇಬ್ಬರು ವೈದ್ಯರು ಎರಡು ಹುಲಿಗಳಿಗೆ ಮಾತ್ರ ಅರವಳಿಕೆ ನೀಡಿದರೆ, ಗುಂಪಿನಲ್ಲಿ ಉಳಿದ ಹುಲಿಗಳು ಪ್ರತಿದಾಳಿ ಮಾಡುವ ಅಪಾಯ ಹೆಚ್ಚಿದ್ದು, ಅರಣ್ಯ ಸಿಬ್ಬಂದಿ ಹಾಗೂ ಗ್ರಾಮಸ್ಥರ ಜೀವಕ್ಕೆ ಭೀತಿ ಉಂಟಾಗುವ ಸಾಧ್ಯತೆ ಇದೆ. ಈ ಕಾರಣದಿಂದ ಹುಲಿಗಳನ್ನು ಸೆರೆ ಹಿಡಿಯದೆ ಪಟಾಕಿ ಸದ್ದು ಮಾಡಿ ಹಾಗೂ ಎರಡು ಆನೆಗಳ ಸಹಾಯದಿಂದ ಕಾಡಿಗೆ ಓಡಿಸುವ ಯೋಜನೆಯನ್ನು ಅರಣ್ಯ ಇಲಾಖೆ ರೂಪಿಸಿದೆ.

ಇದನ್ನೂ ಓದಿ 5 ಹುಲಿಗಳ ಅಂತ್ಯಕ್ರಿಯೆ: ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು

ಹುಲಿ ಸೆರೆಹಿಡಿಯಲೇಬೇಕೆಂದು ಪಟ್ಟು ಹಿಡಿದ ಗ್ರಾಮಸ್ಥರು

ಆದರೆ ಗ್ರಾಮಸ್ಥರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಹುಲಿಗಳನ್ನು ಕಾಡಿಗೆ ಓಡಿಸದೇ ಸೆರೆ ಹಿಡಿಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಬೇರೆ ಜಿಲ್ಲೆಗಳಿಂದ ಹೆಚ್ಚುವರಿ ಪಶುವೈದ್ಯರು ಮತ್ತು ಕನಿಷ್ಠ ಐದು ಆನೆಗಳನ್ನು ಕರೆಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈ ನಡುವೆ ಬಿಳಿಗಿರಿ ಟೈಗರ್ ರಿಸರ್ವ್‌ನ ಡಿಸಿಎಫ್ ಶ್ರೀಪತಿ ಕೇಂದ್ರ ಅರಣ್ಯ ಇಲಾಖೆಯೊಂದಿಗೆ ನಿರಂತರ ಸಭೆ ನಡೆಸುತ್ತಿದ್ದು, ಗ್ರಾಮಸ್ಥರಿಗೆ ತಮ್ಮ ಅಸಹಾಯಕತೆಯನ್ನು ವಿವರಿಸಿ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ. ಐದು ಹುಲಿಗಳು ಒಟ್ಟಾಗಿ ಇರುವುದರಿಂದ ಕೂಂಬಿಂಗ್ ಕಾರ್ಯವೂ ಕಗ್ಗಂಟಾಗಿ ಪರಿಣಮಿಸಿದ್ದು, ಸೆರೆ ಕಾರ್ಯ ಹೇಗೆ ನಡೆಸುವುದು ಎಂಬುದರ ಬಗ್ಗೆ ಅರಣ್ಯ ಸಿಬ್ಬಂದಿ ತಲೆಕೆಡಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ