AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡಿಗರ ದಬ್ಬಾಳಿಕೆಯನ್ನು ನಾವು ಇನ್ಮುಂದೆ ಸಹಿಸಲ್ಲ’: ಟೈಗರ್ ಆಫ್ ಜಸ್ಟೀಸ್ ಸಂಘಟನೆಯ ಅಧ್ಯಕ್ಷನ ಆಡಿಯೋ ವೈರಲ್!

ಚಾಮರಾಜನಗರದ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 'ಟೈಗರ್ ಆಫ್ ಜಸ್ಟೀಸ್' ಸಂಘಟನೆಯ ಅಧ್ಯಕ್ಷ ದಿವ್ಯಾನಂದನ ಪ್ರಚೋದನಾಕಾರಿ ಆಡಿಯೋ ವೈರಲ್ ಆಗಿದೆ. ಕನ್ನಡಿಗರು ಮತ್ತು ತಮಿಳಿಗರ ನಡುವೆ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ಬಯಲಾಗಿದ್ದು, ತನ್ನ ಮೇಲೆ ಪೊಲೀಸರು ಕೇಸ್ ದಾಖಲಿಸಿದರೂ ತಾನು ಲೀಗಲ್ ಆಗಿ ಎದುರಿಸುವುದಾಗಿ ದಿವ್ಯಾನಂದ ಸವಾಲು ಹಾಕಿದ್ದಾನೆ.

'ಕನ್ನಡಿಗರ ದಬ್ಬಾಳಿಕೆಯನ್ನು ನಾವು ಇನ್ಮುಂದೆ ಸಹಿಸಲ್ಲ': ಟೈಗರ್ ಆಫ್ ಜಸ್ಟೀಸ್ ಸಂಘಟನೆಯ ಅಧ್ಯಕ್ಷನ ಆಡಿಯೋ ವೈರಲ್!
ಟೈಗರ್ ಆಫ್ ಜಸ್ಟೀಸ್ ಸಂಘಟನೆಯ ಅಧ್ಯಕ್ಷ ದಿವ್ಯಾನಂದ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 26, 2026 | 8:04 AM

Share

ಮುಖ್ಯಾಂಶಗಳು

  • ಚಾಮರಾಜನಗರ ಎನ್‌ಕೌಂಟರ್ ಬಳಿಕ 'ಟೈಗರ್ ಆಫ್ ಜಸ್ಟೀಸ್' ಆಡಿಯೋ ವೈರಲ್
  • ತಮಿಳು ಸಮುದಾಯವನ್ನು ಪ್ರಚೋದಿಸಿ ಕೋಮು ಗಲಭೆ ಸೃಷ್ಟಿಸಲು ಷಡ್ಯಂತ್ರ
  • ಪೊಲೀಸ್ ಇಲಾಖೆ ತನ್ನ ವಿರುದ್ಧ ಪ್ರಕರಣ ದಾಖಲಿಸಿದರೂ ಲೀಗಲ್ ಆಗಿ ಎದುರಿಸುವುದಾಗಿ ಸವಾಲು

ಚಾಮರಾಜನಗರ, ಆಗಸ್ಟ್ 26: ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅರಣ್ಯಾಧಿಕಾರಿಗಳಿಂದ ನಡೆದ ಮೂವರು ಶಂಕಿತ ಬೇಟೆಗಾರರ ಎನ್‌ಕೌಂಟರ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಜಿಲ್ಲೆಯ ಗಡಿ ಪ್ರದೇಶದಲ್ಲಿ ಜಾತಿ, ಧರ್ಮ ಹಾಗೂ ಭಾಷೆಯ ಹೆಸರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ನಕ್ಸಲ್ ಪ್ರೇರಿತ ‘ಟೈಗರ್ ಆಫ್ ಜಸ್ಟೀಸ್’ ಸಂಘಟನೆ ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಿರುವುದು ಬಯಲಾಗಿದೆ.

ತಮಿಳು ಸಮುದಾಯವನ್ನು ಎತ್ತಿಕಟ್ಟುವ ಯತ್ನ

ಈ ಸಂಘಟನೆಯ ಅಧ್ಯಕ್ಷ ದಿವ್ಯಾನಂದ ಮಾತನಾಡಿದ್ದಾನೆ ಎನ್ನಲಾದ ಪ್ರಚೋದನಾಕಾರಿ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಆಡಿಯೋದಲ್ಲಿ ತಮಿಳು ಸಮುದಾಯವನ್ನು ಎತ್ತಿಕಟ್ಟುವ ಯತ್ನ ನಡೆದಿದ್ದು, “ತಮಿಳಿಗರ ಕೊಲೆಯಾಗಿದೆ, ನಮಗೆ ಇಲ್ಲಿ ತೀವ್ರ ಅನ್ಯಾಯವಾಗುತ್ತಿದೆ. ತಮಿಳುನಾಡಿನಿಂದ ವಲಸೆ ಬಂದ ನಮಗೆ ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ನೀಡದೆ ನಿರ್ಲಕ್ಷ್ಯ ವಹಿಸಿದೆ. ಕನ್ನಡಿಗರ ದಬ್ಬಾಳಿಕೆಯನ್ನು ನಾವು ಇನ್ಮುಂದೆ ಸಹಿಸುವುದಿಲ್ಲ” ಎಂದು ಉಗ್ರವಾಗಿ ಪ್ರಚೋದಿಸಲಾಗಿದೆ.

ರಾಜಕೀಯ ಪಕ್ಷಗಳ ವಿರುದ್ಧವೂ ಧ್ವನಿ

ಅಷ್ಟೇ ಅಲ್ಲದೆ, ಪ್ರಾದೇಶಿಕ ರಾಜಕೀಯ ಪಕ್ಷಗಳ ವಿರುದ್ಧವೂ ಧ್ವನಿ ಎತ್ತಿರುವ ಆಡಿಯೋದಲ್ಲಿ, “ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಹಿಂದೆ ಹೋಗಬೇಡಿ. ನಮಗೆ ನಮ್ಮದೇ ಆದ ಬಲವಾದ ಸಂಘಟನೆ ಬೇಕು. ನಮ್ಮ ಪ್ರದೇಶದಲ್ಲಿ ಬರೋಬ್ಬರಿ 65 ಸಾವಿರ ಮತಗಳಿದ್ದು, ಒಬ್ಬ ತಮಿಳಿಗನನ್ನು ಮುಟ್ಟಿದರೂ ನಾವು ಒಂದೇ ಒಂದು ಮತವನ್ನೂ ಯಾರಿಗೂ ಹಾಕಬಾರದು” ಎಂದು ಬಹಿರಂಗ ಕರೆ ನೀಡಲಾಗಿದೆ. ಚರ್ಚ್‌ಗಳು ತಮ್ಮ ಬೆಂಗಾವಲಾಗಿ ನಿಂತಿವೆ ಎಂದು ಪ್ರತಿಪಾದಿಸಿರುವ ಆತ, ತಮಿಳು ಪಡಿಯಾಚ್ಚಿ ಕ್ರಿಶ್ಚಿಯನ್ನರು ಒಗ್ಗಟ್ಟಾಗಿ ನಿಲ್ಲಬೇಕೆಂದು ಪ್ರಚೋದಿಸಿದ್ದಾನೆ. ಪೊಲೀಸ್ ಇಲಾಖೆ ತನ್ನ ವಿರುದ್ಧ ಪ್ರಕರಣ ದಾಖಲಿಸಿದರೂ ಲೀಗಲ್ ಆಗಿ ಎದುರಿಸುವುದಾಗಿ ಸವಾಲು ಹಾಕಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 am, Wed, 26 August 26

Follow Us
ಇಂದು ಋಗುಪಾಕರ್ಮ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಋಗುಪಾಕರ್ಮ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ದೇಶದಲ್ಲಿ ಹೆಚ್ಚಿದ H1N1 ಭೀತಿ: 'ಆತಂಕ ಬೇಡ' ಎಂದ ಯು.ಟಿ. ಖಾದರ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ