ಚಾಮರಾಜನಗರ: ಹುಲಿ ಸೆರೆಗೆ ಮುಂದಾಗದಿದ್ರೆ ಮತ್ತೊಂದು ದುರಂತ ಸಂಭವಿಸುತ್ತಾ? ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ ಏನು?

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಅಸಲಿಯತ್ತು ಅನಾವರಣಗೊಂಡಿದೆ. ಹುಲಿ ಕೂಂಬಿಂಗ್ ಮಾಡಲು ವಾಹನ ಹಾಗೂ ಡಿಸೇಲ್ ಇಲ್ಲವಂತೆ, ಹುಲಿ ಸೆರೆಗೆ ಒಂದೇ ಬೋನ್​ ಇದೆಯಂತೆ. ರೈತರು ಹುಲಿ ಸೆರೆಗೆ ಮನವಿ ಮಾಡಿದ್ರು ಪ್ರಯೋಜನವಾಗಿಲ್ಲ. ಹೀಗಾಗಿ ಅನ್ಯ ಮಾರ್ಗ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ.

ಚಾಮರಾಜನಗರ: ಹುಲಿ ಸೆರೆಗೆ ಮುಂದಾಗದಿದ್ರೆ ಮತ್ತೊಂದು ದುರಂತ ಸಂಭವಿಸುತ್ತಾ? ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ ಏನು?
ಹುಲಿ (ಸಂಗ್ರಹ ಚಿತ್ರ)
Edited By:

Updated on: Sep 01, 2025 | 9:26 AM

ಚಾಮರಾಜನಗರ, ಸೆಪ್ಟೆಂಬರ್​ 01: ಬಂಡೀಪುರ ಅರಣ್ಯ ಸಿಬ್ಬಂದಿ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅಂತಹದ್ದೆ ಒಂದು ಎಡವಟ್ಟು ಬಯಲಾಗಿದೆ. ಹುಲಿ (tiger) ಕೂಂಬಿಂಗ್ ಮಾಡುವುದಕ್ಕೆ ಅರಣ್ಯ ಇಲಾಖೆ ಬಳಿ ವಾಹನ ಹಾಗೂ ಡಿಸೇಲ್ ಇಲ್ಲವಂತೆ. ಜೊತೆಗೆ ಇಡೀ ಬಂಡೀಪುರಕ್ಕೆ ಹುಲಿ ಸೆರೆಗೆ ಇರುವುದು ಒಂದೇ ಒಂದು ಬೋನಂತೆ. ಇದು ಟಿವಿ9 ಗ್ರೌಂಡ್ ರಿಯಾಲಿಟಿ ಚೆಕ್​​ನಲ್ಲಿ ಬೆಳಕಿಗೆ ಬಂದ ಅರಣ್ಯ ಇಲಾಖೆಯ ವಾಸ್ಥವ ಸ್ಥಿತಿ. ಆ ಮೂಲಕ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ (Bandipur National Park) ಅಸಲಿಯತ್ತು ಅನಾವರಣಗೊಂಡಿದೆ.

ಜಮೀನಿನಲ್ಲಿ ಹುಲಿ ಸಂಚಾರ: ಕ್ಯಾರೇ ಎನ್ನದ ಅರಣ್ಯ ಇಲಾಖೆ 

ಚಾಮರಾಜನಗರ ಜಿಲ್ಲೆಯ ಗುಂಡ್ಲುಟೇಟೆ ತಾಲೂಕಿನ ಕಗ್ಗಲಹುಂಡಿ ಕಾಡಂಚಿನ ಗ್ರಾಮದಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ಜಮೀನಿನಲ್ಲಿ ಹುಲಿ ಸಂಚರಿಸುತ್ತಿದೆ. ಜಮೀನಲ್ಲೇ ಎರಡು ಕಾಡು ಹಂದಿಯನ್ನ ಬೇಟೆಯಾಡಿ ಭಕ್ಷಣೆ ಮಾಡಿದೆ. ಹುಲಿ ಸಂಚಾರದ ವಿಡಿಯೋ ಟಿವಿ9 ಕ್ಯಾಮೆರಾದಲ್ಲಿ ಸೆರೆ ಆಗಿತ್ತು. ಹುಲಿ ಸೆರೆ ಹಿಡಿಯಲು ಮನವಿ ಮಾಡಿದರೂ ಅರಣ್ಯ ಇಲಾಖೆ ಕ್ಯಾರೇ ಅನ್ನುತ್ತಿಲ್ಲ. ಹೀಗಾಗಿ ನಿತ್ಯ ಜೀವ ಕೈಯಲ್ಲಿ ಹಿಡಿದು ರೈತರು ಜಮೀನಿಗೆ ತೆರಳುತ್ತಿದ್ದಾರೆ.

ಅನಿವಾರ್ಯವಾದರೆ ವಿಷ ಹಾಕಲು ಸಿದ್ಧ: ಎಚ್ಚರಿಕೆ ನೀಡಿದ ರೈತರು

ಕಳೆದ ಜುಲೈನಲ್ಲಿ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳಿಗೆ ವಿಷ ಹಾಕಿ ಕೊಲ್ಲಲಾಗಿತ್ತು. ಮಾದರಾಜುನ ಹಸುವನ್ನ ಕೊಂದು ತಿಂದಿದ್ದ ಹುಲಿಗಳಿಗೆ ವಿಷ ಹಾಕಲಾಗಿತ್ತು. ಅನಿವಾರ್ಯವಾದರೆ, ಅಂತಹದೇ ಕೆಲಸ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಇದನ್ನೂ ಓದಿ: ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್​: ಕ್ರಿಮಿನಾಶಕ ಬಳಸಿರುವುದು ವರದಿಯಲ್ಲಿ ದೃಢ

ಈಗಲಾದರೂ ಹುಲಿ ಸೆರೆಗೆ ಕೂಂಬಿಂಗ್ ಮಾಡದಿದ್ದರೆ ಮತ್ತೊಂದು ದುರಂತಕ್ಕೆ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಕಾರಣವಾಗುವ ಸಾಧ್ಯತೆಗಳಿವೆ. ಹಾಗಾಗಿ ಅದಕ್ಕೂ ಮುನ್ನ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡು ರೈತರ ಹಾಗೂ ಜಾನುವಾರುಗಳ ಜೀವ ರಕ್ಷಣೆಗೆ ಮುಂದಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:19 am, Mon, 1 September 25

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us