AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ

ಇಂಡಿಗನತ್ತ ಗ್ರಾಮದ ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ.ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿತ್ತು.

ಚಾಮರಾಜನಗರ: ಗಲಭೆಯಾಗಿದ್ದ ಇಂಡಿಗನತ್ತ ಗ್ರಾಮದ ಮತಗಟ್ಟೆಯಲ್ಲಿ ಸೋಮವಾರ ಮರುಮತದಾನ
ಇಂಡಿಗನತ್ತ ಗ್ರಾಮದ ಮತಗಟ್ಟೆ 146ರಲ್ಲಿ ಶುಕ್ರವಾರ ಮತದಾನದ ವೇಳೆ ನಡೆದಿದ್ದ ಗಲಾಟೆಯಲ್ಲಿ ಮೇಜು, ಕುರ್ಚಿ, ಇವಿಎಂ ಧ್ವಂಸಗೊಂಡಿರುವುದು
ಕಿರಣ್​ ಹನಿಯಡ್ಕ
| Edited By: |

Updated on:Apr 27, 2024 | 4:55 PM

Share

ಚಾಮರಾಜನಗರ, ಏಪ್ರಿಲ್ 27: ಲೋಕಸಭಾ ಚುನಾವಣೆಯ (Lok Sabha Elections) ಕರ್ನಾಟಕದ ಮೊದಲ ಹಂತದ ಮತದಾನದ ವೇಳೆ ಗಲಭೆಗೆ ಸಾಕ್ಷಿಯಾಗಿದ್ದ ಚಾಮರಾಜನಗರ (Chamarajanagar) ಲೋಕಸಭಾ ಕ್ಷೇತ್ರದ ಹನೂರು ತಾಲೂಕಿನ ಇಂಡಿಗನತ್ತ (Indiganatta) ಗ್ರಾಮದ ಒಂದು ಮತಗಟ್ಟೆಯಲ್ಲಿ ಮರುಮತದಾನ ನಡೆಯಲಿದೆ. ಬೂತ್ ನಂಬರ್ 146ರಲ್ಲಿ ಏಪ್ರಿಲ್ 29ರಂದು ಸೋಮವಾರ ಮರು ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದೆ. ಶುಕ್ರವಾರ ಮತದಾನದ ವೇಳೆ ಮತಗಟ್ಟೆ ಬಳಿ ಉಂಟಾದ ಗಲಭೆಯಲ್ಲಿ ಇವಿಎಂ ಧ್ವಂಸಗೊಳಿಸಲಾಗಿತ್ತು.

ಮತದಾನ ಮಾಡುವ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಟೆಯಾಗಿತ್ತು. ಮೂಲ ಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಸಹ ಕೆಲವು ಮಂದಿ ಗ್ರಾಮಸ್ಥರನ್ನು ಅಧಿಕಾರಿಗಳು ಮನವೊಲಿಸಿ ಮತದಾನಕ್ಕೆ ಕರೆತಂದಿದ್ದರು. ಇದರಿಂದ ರೊಚ್ಚಿಗೆದ್ದ ಇನ್ನಿತರ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದರು.

ಮತದಾನದ ವೇಳೆ ನಡೆದಿದ್ದೇನು?

ಮೂಲ ಸೌಕರ್ಯವನ್ನು ಕಲ್ಪಿಸದ ವಿಚಾರವಾಗಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿದ್ದರು. ಯಾರೊಬ್ಬರೂ ಮತದಾನಕ್ಕೆ ಬಾರದೆ ಇರುವುದರಿಂದ ಶೂನ್ಯ ಮತದಾನವಾಗುವ ಆತಂಕ ಅಧಿಕಾರಿಗಳದ್ದಾಗಿತ್ತು. ಹೀಗಾಗಿ ಅಧಿಕಾರಿಗಳು ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಮುಂದಾಗಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಆಗ್ರಹಿಸಿದ್ದರು. ಈ ವೇಳೆ, ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮೇಜು, ಕುರ್ಚಿ, ಇವಿಎಂ ಧ್ವಂಸ ಮಾಡಿದ್ದರು.

ಇದನ್ನೂ ಓದಿ: ಇಂಡಿಗನತ್ತ ಗ್ರಾಮದಲ್ಲಿ ಇವಿಎಂ ಧ್ವಂಸ: ಅಷ್ಟಕ್ಕೂ ಆಗಿದ್ದೇನು? ಕಾರಣ ಬಿಚ್ಚಿಟ್ಟ ಜಿಲ್ಲಾಧಿಕಾರಿ

ನಂತರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಶಿಲ್ಪಾನಾಗ್, ಘಟನೆ ನಡೆದ ತಕ್ಷಣ ಮುಖ್ಯ ಚುನಾವಣಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಎಫ್​ಐಆರ್ ಕಾಪಿ ಸಮೇತ ಈಗಾಗಲೇ ರಿಪೋರ್ಟ್ ಕಳುಹಿಸಲಾಗಿದೆ. ಇಂಡಿಗನತ್ತ ಗ್ರಾಮದಲ್ಲಿ ಬಹುಶಃ ಮರು ಮತದಾನ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Sat, 27 April 24

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!