Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರ್, ರೇಷನ್ ಕಾರ್ಡ್ ಇಲ್ಲದೆ ಪರದಾಟ: ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತರಾದ ಹಾಡಿ ಸಮುದಾಯ

Chamarajanagar: ಮೂಲಭೂತ ಸೌಕರ್ಯಗಳು ಸಿಗದೆ ಚಾಮರಾಜನಗರದ ಕಾಡಂಚಿನ ಜನರು ಪರದಾಟುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಧಾರ್, ರೇಷನ್ ಕಾರ್ಡ್, ಓಟರ್ ಐಡಿ ಇಲ್ಲದೇ ಹಾಡಿ ಜನರು ಮೂಲ ಸೌಕರ್ಯಗಳು ಸಿಗದೆ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಹಾಡಿ ಜನರು ಮನವಿ ಮಾಡಿದ್ದಾರೆ. 

ಆಧಾರ್, ರೇಷನ್ ಕಾರ್ಡ್ ಇಲ್ಲದೆ ಪರದಾಟ: ಮೂಲಭೂತ ಸೌಕರ್ಯಗಳಿಲ್ಲದೆ ವಂಚಿತರಾದ ಹಾಡಿ ಸಮುದಾಯ
ಹಾಡಿ ಜನರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ

Updated on: Dec 29, 2023 | 4:47 PM

ಚಾಮರಾಜನಗರ, ಡಿಸೆಂಬರ್​ 29: ಸ್ವಾತಂತ್ರ ಬಂದು 75 ವರ್ಷ ಕಳೆದರು ಇನ್ನು ಕಾಡಂಚಿನ ಜನರಿಗೆ ಮೂಲಭೂತ ಸೌಕರ್ಯ (basic amenities) ಸಿಕ್ಕಿಲ್ಲ. ಆಧಾರ್, ರೇಷನ್ ಕಾರ್ಡ್, ಓಟರ್ ಐಡಿ ಇಲ್ಲದೇ ಹಾಡಿ ಜನರು ಪರದಾಡುವಂತಾಗಿದೆ. ದಾಖಲೆಗಳಿಲ್ಲದೆ ಸರ್ಕಾರಿ ಸವಲತ್ತಿನಿಂದ ವಂಚಿತರಾಗಿದ್ದಾರೆ. ದಾಖಲೆಗಳನ್ನು ಒದಗಿಸಿಕೊಡುವಂತೆ ಸರ್ಕಾರಕ್ಕೆ ಹಾಡಿ ಜನರು ಮನವಿ ಮಾಡಿದ್ದಾರೆ.

ಸೋಲಿಗರು, ಜೇನು ಕುರುಬರು, ಬೆಟ್ಟ ಕುರುಬರು ಹಾಗೂ ಇತರೆ ಸೌಲಭ್ಯದಿಂದ ವಂಚಿತರಾಗಿದ್ದಾರೆ. 5 ಸಾವಿರಕ್ಕೂ ಹೆಚ್ಚು ಜನರು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪಡೆದಿಲ್ಲವೆಂಬುದು ಬಹಿರಂಗವಾಗಿದೆ. ಸಾವಿರಕ್ಕೂ ಹೆಚ್ಚು ಕುಟುಂಬ ರೇಷನ್ ಕಾರ್ಡ್​ನಿಂದ ವಂಚಿತವಾಗಿವೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕಾತಿ, ಮೂಲಭೂತ ಸೌಕರ್ಯ! ನಡೆಯುತ್ತಿದೆ ವ್ಯವಸ್ಥಿತ ಸಂಚು

ಆರೋಗ್ಯ, ಅನ್ನಭಾಗ್ಯ, ಸರ್ಕಾರದ ಗ್ಯಾರಂಟಿ ಯೋಜನೆಗೂ ಕೂಡ ಅರ್ಹತೆಯಿಲ್ಲ. ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆಗಳು ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಸದ್ಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 158 ಹಾಡಿಗಳಲ್ಲಿ ಈಗಾಗಲೇ 138 ಹಾಡಿಯಲ್ಲಿ ಸಮೀಕ್ಷೆ ಮಾಡಲಾಗಿದೆ. ಶಿಬಿರ ಆಯೋಜಿಸಿ ರೇಷನ್, ಆಧಾರ್ ಕಾರ್ಡ್ ಮಾಡಿಕೊಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿನೂತ ಪ್ರತಿಭಟನೆ

ಚಾಮರಾಜನಗರ ತಾಲೂಕಿನ ಆಲೂರು ಗ್ರಾಮಕ್ಕೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಇತ್ತೀಚೆಗೆ ಸ್ಥಳೀಯ ನಿವಾಸಿಗಳು ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿನೂತ ಪ್ರತಿಭಟನೆ ಮಾಡಿದ್ದರು. ಆಲೂರು ಗ್ರಾಮದ ಹಲವು ಬಡಾವಣೆಗಳಲ್ಲಿ ರಸ್ತೆಗಳಿಲ್ಲದೆ ಮಳೆ ಬಂದ ವೇಳೆ ತಿರುಗಾಡಲು ಸಾಧ್ಯವಾಗುತ್ತಿಲ್ಲ. ರಸ್ತೆ ನಿರ್ಮಾಣ ಮಾಡುವಂತೆ ಹಲವು ಬಾರಿ ಜನಪ್ರತಿನಿಧಿಗಳನ್ನ ಕೇಳಿದರೆ ಯಾರೊಬ್ಬರು ಸ್ಪಂಧಿಸುತ್ತಿಲ್ಲ. ಹೀಗಾಗಿ ಗ್ರಾಮದ ರಸ್ತೆಗಳು ಕೆಸಲು ಗದ್ದೆಯಾಗಿವೆ ಎಂದು ಭತ್ತದ ಪೈರನ್ನ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಟಿವಿ9 ವರದಿಯ ಬಿಗ್​ ಇಂಪ್ಯಾಕ್ಟ್ : ಅರಣ್ಯ ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಎಲ್ಲಾ 12 ಶಾಲೆಗಳು ಓಪನ್ ಮಾಡುವಂತೆ ಸರ್ಕಾರದ ಸೂಚನೆ

ಕಳೆದ ನಾಲ್ಕು ವರ್ಷಗಳ ಹಿಂದೆ ಗ್ರಾಮದಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಮಾಡಿದ್ದರೂ ಇಲ್ಲಿಯವರೆಗೂ ನೀರು ಕೊಟ್ಟಿಲ್ಲ. ವರ್ಷ ಕಳೆದರೂ ಗ್ರಾಮದ ಚರಂಡಿ ಸ್ವಚ್ಚಗೊಳಿಸುವ ಕಾರ್ಯ ಆಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದರು. ತಕ್ಷಣ ಅಧಿಕಾರಿಗಲು ರಸ್ತೆ ನಿರ್ಮಾಣ ಮಾಡಬೇಕು, ಚರಂಡಿಯಲ್ಲಿ ಹೂಳೆತ್ತಬೇಕು ಮತ್ತು ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಗ್ರಾಮಸ್ಥರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ