AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ ‘ಸಾಮಾಜಿಕ ಬಹಿಷ್ಕಾರ’!

ಚಾಮರಾಜನಗರದ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿದೆ. ಅನಾರೋಗ್ಯದ ತಾಯಿಯನ್ನು ನೋಡಲು ತವರಿಗೆ ಹೋದ ಕೆಂಚಮ್ಮ ಎಂಬ ಮಹಿಳೆಗೆ ಗ್ರಾಮದ ಯಜಮಾನರು ಕ್ಷುಲ್ಲಕ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ. ಬಹಿಷ್ಕಾರ ಹಿಂತೆಗೆದುಕೊಳ್ಳಲು ಲಕ್ಷಾಂತರ ರೂಪಾಯಿ ದಂಡ ವಿಧಿಸಿದ್ದು, ಇದರ ಕೆಂಚಮ್ಮ ನ್ಯಾಯಕ್ಕಾಗಿ ದೂರು ನೀಡಿ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ: ಅನಾರೋಗ್ಯ ಪೀಡಿತ ತಾಯಿಯನ್ನು ನೋಡಲು ಹೋದ ಪತ್ನಿಗೆ 'ಸಾಮಾಜಿಕ ಬಹಿಷ್ಕಾರ'!
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Apr 17, 2026 | 4:05 PM

Share

ಚಾಮರಾಜನಗರ, ಏ.17: ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ನೋಡಲು ತವರು ಮನೆಗೆ ಹೋದ ಮಹಿಳೆಗೆ ಗ್ರಾಮದ ಯಜಮಾನರು ಸಾಮಾಜಿಕ ಬಹಿಷ್ಕಾರ ಹಾಕುವ ಮೂಲಕ ಅನಿಷ್ಠ ಪದ್ಧತಿಯನ್ನು ಮುಂದುವರಿಸಿದ್ದಾರೆ.ಇದೀಗ ಈ ಬಗ್ಗೆ ಭಾರೀ ಅಕ್ರೋಶ ವ್ಯಕ್ತವಾಗಿದೆ. ಯರಂಬಾಡಿ ಮೂಲದ ಕೆಂಚಮ್ಮ ಎಂಬುವವರು ಹೂಗ್ಯಂ ಗ್ರಾಮದ ರಾಮು ಎಂಬುವವರನ್ನು ವಿವಾಹವಾಗಿದ್ದರು. ಇತ್ತೀಚೆಗೆ ಕೆಂಚಮ್ಮ ಅವರ ತಾಯಿಗೆ ಆರೋಗ್ಯ ಕೈಕೊಟ್ಟ ಕಾರಣ, ಅವರನ್ನು ಉಪಚರಿಸಲು ಕೆಂಚಮ್ಮ ತವರು ಮನೆಗೆ ತೆರಳಿದ್ದರು.

ತವರು ಮನೆಯಲ್ಲಿ ಒಂದು ತಿಂಗಳಿಗೂ ಅಧಿಕ ಕಾಲ ಉಳಿದುಕೊಂಡಿದ್ದಕ್ಕೆ ಗ್ರಾಮದ ಯಜಮಾನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಂಚಮ್ಮ ವಾಪಸ್ ಬರುವುದು ತಡವಾಯಿತು ಎಂಬ ಕ್ಷುಲ್ಲಕ ಕಾರಣ ನೀಡಿ ಅವರಿಗೆ ಸಾಮಾಜಿಕ ಬಹಿಷ್ಕಾರ ವಿಧಿಸಲಾಗಿದೆ. ಬಹಿಷ್ಕಾರ ಹಿಂತೆಗೆದುಕೊಳ್ಳಬೇಕಾದರೆ ಲಕ್ಷಾಂತರ ರೂಪಾಯಿ ದಂಡ ಪಾವತಿಸಬೇಕು ಎಂದು ಗ್ರಾಮದ ಮುಖಂಡರು ಸೂಚಿಸಿದ್ದಾರೆ ಎನ್ನಲಾಗಿದೆ. ಕೇವಲ ಕೆಂಚಮ್ಮ ಮಾತ್ರವಲ್ಲದೆ, ಗ್ರಾಮದ ಇನ್ನೂ ಮೂರ್ನಾಲ್ಕು ಮಂದಿಗೆ ಇದೇ ರೀತಿ ಬಹಿಷ್ಕಾರ ಹಾಕಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್

ಗ್ರಾಮದ ಯಜಮಾನರ ಈ ಅನ್ಯಾಯದ ವಿರುದ್ಧ ಧ್ವನಿ ಎತ್ತಿರುವ ಕೆಂಚಮ್ಮ, ನ್ಯಾಯಕ್ಕಾಗಿ ರಾಮಾಪುರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಅಲ್ಲದೆ, ಅನಿಷ್ಠ ಪದ್ಧತಿಯ ವಿರುದ್ಧ ಕಾನೂನು ಹೋರಾಟ ನಡೆಸಲು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ
6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ
6 ಮಂದಿ ಸಜೀವ ದಹನ: ಅಪಘಾತ ಅದೆಷ್ಟು ಭಯಾನಕವಾಗಿದೆ ನೋಡಿ
SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್?
SSLC ಪರೀಕ್ಷೆ: ಹಿಂದಿ ಭಾಷೆಗೆ ಸಿಗುತ್ತಾ ಗ್ರೇಸ್ ಮಾರ್ಕ್ಸ್?
ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಹೇಗೆ ದಾಳಿ ಮಾಡಿದ್ರು ನೋಡಿ?
ಲಷ್ಕರ್ ಸಹ-ಸಂಸ್ಥಾಪಕ ಅಮೀರ್ ಹಮ್ಜಾ ಮೇಲೆ ಹೇಗೆ ದಾಳಿ ಮಾಡಿದ್ರು ನೋಡಿ?
ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಕೆಶಿ
ಸತೀಶ್​​ ಜಾರಕಿಹೊಳಿ ಜೊತೆಗಿನ ಮೀಟಿಂಗ್​​ ರಹಸ್ಯ ಬಿಚ್ಚಿಟ್ಟ ಡಿಕೆಶಿ
ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ
ಕಾಲಿಗೆ ಬೀಳಲು ಬಂದ್ರೆ ಹೆದರಿ ಹಿಂದಕ್ಕೆ ಓಡಿದ ಸಿಎಂ ಮಮತಾ ಬ್ಯಾನರ್ಜಿ