AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ವೃದ್ಧನ ಕಾಲು ಮುರಿದ ಮಹಿಳೆಯರು: ಚಿಕಿತ್ಸೆ ಫಲಿಸದೇ ಸಾವು

ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ, ಹಸು ಮೇಯಿಸುವ ವಿಚಾರಕ್ಕೆ ಮೂವರು ಮಹಿಳೆಯರಿಂದ ಓರ್ವ ವೃದ್ಧನ ಕಾಲು ಮುರಿದಿದ್ದು, ಆಪರೇಷನ್ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಪೊಲೀಸರು ಕೇವಲ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಕುಟುಂಬಸ್ಥರು ಕೊಲೆ ಪ್ರಕರಣ ದಾಖಲಿಸಲು ಒತ್ತಾಯಿಸಿದ್ದಾರೆ. ಏಪ್ರಿಲ್ 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ವೃದ್ಧನ ಕಾಲು ಮುರಿದ ಮಹಿಳೆಯರು: ಚಿಕಿತ್ಸೆ ಫಲಿಸದೇ ಸಾವು
ಮೃತ ವೃದ್ಧ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 18, 2025 | 2:21 PM

Share

ಚಾಮರಾಜನಗರ, ಮೇ 18: ತಮ್ಮ ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ಮೂವರು ನಾರಿಮಣಿಯರು (Womens) ಓರ್ವ ವೃದ್ಧನ (old man) ಕಾಲು ಮುರಿದು ಹಾಕಿದ್ದಾರೆ. ಇದೀಗ ಆಪರೇಷನ್ ಮಾಡುವ ವೇಳೆ ಚಿಕಿತ್ಸೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ ಏಪ್ರಿಲ್ 22ರಂದು ನಡೆದಿದ್ದ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲಾಗಿ ಕೇವಲ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ ಎಂದು ಮೃತ ವೃದ್ಧನ ಕುಟುಂಬಸ್ಥರಿಂದ ಆರೋಪಿಸಲಾಗಿದೆ.

ಗಡಿ ನಾಡು ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ ಚೆನ್ನಬಸವಯ್ಯ ಎಂಬ ವಯೋ ವೃದ್ಧ ಅಂದು ಸಂಜೆ ತಮ್ಮ ಜಮೀನಿನ ಬಳಿ ತೆರಳಿದ್ದ ವೇಳೆ ಜಮೀನಿನಲ್ಲಿ ಸಂಬಂಧಿಕರು ಹಾಗೂ ಪಕ್ಕದ ಮನೆಯವರಾದ ನಾಗರತ್ನ ತನ್ನ ಹಸುವನ್ನ ಮೇಯಲು ಬಿಟ್ಟಿದ್ದರು. ಇದನ್ನ ನೋಡಿದ ವೃದ್ಧ ಚೆನ್ನಬಸವಯ್ಯ, ಜಮೀನಿನಿಂದ ಹಸುವನ್ನ ಕರೆದುಕೊಂಡು ಹೋಗಿ ಎಂದು ಬುದ್ಧಿ ಮಾತು ಹೇಳಿದ್ದಾರೆ.

ಇದನ್ನೂ ಓದಿ: ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು

ಇದನ್ನೂ ಓದಿ
Image
ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಮತ್ತೆ ಚೈತನ್ಯ:ಸರ್ಕಾರದಿಂದ ರೈತರಿಗೆ ಸವಲತ್ತು
Image
ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: ರಾಸುಗಳ ಮರಣ ಮೃದಂಗ
Image
ರಸ್ತೆ ಇಲ್ಲದ ಈ ಕುಗ್ರಾಮದ ಯುವಕರಿಗೆ ಯಾರೂ ಹುಡುಗಿ ಕೊಡುತ್ತಿಲ್ಲ!
Image
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ವೃದ್ಧನ ಮಾತಿನಿಂದ ಕೆರಳಿದ ನಾಗರತ್ನ, ಚೆನ್ನಬಸವಯ್ಯ ಜೊತೆ ಜಗಳ ಶುರು ಮಾಡಿದ್ದಾರೆ. ಬಳಿಕ ಸುವಾಸಿನಿ ಹಾಗೂ ರೋಹಿಣಿ ಚೆನ್ನಬಸವಯ್ಯರ ಊರುಗೋಲು ಕಿತ್ತುಕೊಂಡು ಆತನ ಕಾಲಿಗೆ ಹೊಡೆದಿದ್ದಾರೆ. ನಾರಿಮಣಿಯರ ಆಟಾಟೋಪಕ್ಕೆ ವೃದ್ಧನ ಕಾಲಿನ ಮೂಳೆಯೇ ಮುರಿದು ಹೋಗಿದೆ.

ಇನ್ನು ಕಳೆದ ಏಪ್ರಿಲ್ 22ಕ್ಕೆ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಚೆನ್ನಬಸವಯ್ಯರನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 26 ರಂದು ಚೆನ್ನಬಸವಯ್ಯರಿಗೆ ಅನಸ್ಥೇಶಿಯಾ ನೀಡಿ ಆಪರೇಷನ್ ಮಾಡುವ ವೇಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆದರೆ ಚಾಮರಾಜನಗರದ ಪೂರ್ವ ಠಾಣಾ ಪೊಲೀಸರು ಕೇವಲ ಗಲಾಟೆ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಸರ್ಕಾರದಿಂದ ಉತ್ತೇಜನ, ರೈತರಿಗೆ ಸಕಲ ಸವಲತ್ತು

ಚೆನ್ನಬಸವಯ್ಯ ಸಾವನ್ನಪ್ಪಿದ ಬಳಿಕ ಕೊಲೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬುದು ಮೃತನ ಕುಟುಂಬಸ್ಥರ ವಾದವಾಗಿದೆ. ಕೇವಲ ಎಫ್​ಐಆರ್ ರಿಜಿಸ್ಟರ್ ಮಾಡ್ಕೊಂಡು ಸುಮ್ಮನೆ ಕುಳಿತಿದ್ದಾರೆ, ಕನಿಷ್ಠ ಪಕ್ಷ ಆರೋಪಿಗಳಾದ ನಾಗರತ್ನ, ರೋಹಿಣಿ ಹಾಗೂ ಸುಹಾಸಿನಿಯನ್ನ ಠಾಣೆಗೆ ಕರೆದು ವಿಚಾರಣೆ ನಡೆಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವಿರುದ್ದ ಕ್ರಮ ಆಗಲೇ ಬೇಕೆಂಬುದು ಮೃತನ ಕುಟುಂಬಸ್ಥರು ಆಹ್ರಗಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​