AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ವೃದ್ಧನ ಕಾಲು ಮುರಿದ ಮಹಿಳೆಯರು: ಚಿಕಿತ್ಸೆ ಫಲಿಸದೇ ಸಾವು

ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ, ಹಸು ಮೇಯಿಸುವ ವಿಚಾರಕ್ಕೆ ಮೂವರು ಮಹಿಳೆಯರಿಂದ ಓರ್ವ ವೃದ್ಧನ ಕಾಲು ಮುರಿದಿದ್ದು, ಆಪರೇಷನ್ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಪೊಲೀಸರು ಕೇವಲ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಕುಟುಂಬಸ್ಥರು ಕೊಲೆ ಪ್ರಕರಣ ದಾಖಲಿಸಲು ಒತ್ತಾಯಿಸಿದ್ದಾರೆ. ಏಪ್ರಿಲ್ 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ವೃದ್ಧನ ಕಾಲು ಮುರಿದ ಮಹಿಳೆಯರು: ಚಿಕಿತ್ಸೆ ಫಲಿಸದೇ ಸಾವು
ಮೃತ ವೃದ್ಧ
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ|

Updated on: May 18, 2025 | 2:21 PM

Share

ಚಾಮರಾಜನಗರ, ಮೇ 18: ತಮ್ಮ ಜಮೀನಿನಲ್ಲಿ ಹಸು ಮೇಯಿಸಬೇಡ ಎಂದಿದ್ದಕ್ಕೆ ಮೂವರು ನಾರಿಮಣಿಯರು (Womens) ಓರ್ವ ವೃದ್ಧನ (old man) ಕಾಲು ಮುರಿದು ಹಾಕಿದ್ದಾರೆ. ಇದೀಗ ಆಪರೇಷನ್ ಮಾಡುವ ವೇಳೆ ಚಿಕಿತ್ಸೆ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ ಏಪ್ರಿಲ್ 22ರಂದು ನಡೆದಿದ್ದ ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಳ್ಳುವ ಬದಲಾಗಿ ಕೇವಲ ಎಫ್​ಐಆರ್​ ದಾಖಲಿಸಿಕೊಂಡಿದ್ದಾರೆ ಎಂದು ಮೃತ ವೃದ್ಧನ ಕುಟುಂಬಸ್ಥರಿಂದ ಆರೋಪಿಸಲಾಗಿದೆ.

ಗಡಿ ನಾಡು ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ ಕೊಡಿಗಾನೆ ಗ್ರಾಮದಲ್ಲಿ ಚೆನ್ನಬಸವಯ್ಯ ಎಂಬ ವಯೋ ವೃದ್ಧ ಅಂದು ಸಂಜೆ ತಮ್ಮ ಜಮೀನಿನ ಬಳಿ ತೆರಳಿದ್ದ ವೇಳೆ ಜಮೀನಿನಲ್ಲಿ ಸಂಬಂಧಿಕರು ಹಾಗೂ ಪಕ್ಕದ ಮನೆಯವರಾದ ನಾಗರತ್ನ ತನ್ನ ಹಸುವನ್ನ ಮೇಯಲು ಬಿಟ್ಟಿದ್ದರು. ಇದನ್ನ ನೋಡಿದ ವೃದ್ಧ ಚೆನ್ನಬಸವಯ್ಯ, ಜಮೀನಿನಿಂದ ಹಸುವನ್ನ ಕರೆದುಕೊಂಡು ಹೋಗಿ ಎಂದು ಬುದ್ಧಿ ಮಾತು ಹೇಳಿದ್ದಾರೆ.

ಇದನ್ನೂ ಓದಿ: ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: 900ಕ್ಕೂ ಹೆಚ್ಚು ರಾಸುಗಳು ಸಾವು

ಇದನ್ನೂ ಓದಿ
Image
ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಮತ್ತೆ ಚೈತನ್ಯ:ಸರ್ಕಾರದಿಂದ ರೈತರಿಗೆ ಸವಲತ್ತು
Image
ಪಶು ಸಂಗೋಪನಾ ಸಚಿವರ ಜಿಲ್ಲೆಯಲ್ಲೇ ಪಶು ವೈದ್ಯರ ಕೊರತೆ: ರಾಸುಗಳ ಮರಣ ಮೃದಂಗ
Image
ರಸ್ತೆ ಇಲ್ಲದ ಈ ಕುಗ್ರಾಮದ ಯುವಕರಿಗೆ ಯಾರೂ ಹುಡುಗಿ ಕೊಡುತ್ತಿಲ್ಲ!
Image
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

ವೃದ್ಧನ ಮಾತಿನಿಂದ ಕೆರಳಿದ ನಾಗರತ್ನ, ಚೆನ್ನಬಸವಯ್ಯ ಜೊತೆ ಜಗಳ ಶುರು ಮಾಡಿದ್ದಾರೆ. ಬಳಿಕ ಸುವಾಸಿನಿ ಹಾಗೂ ರೋಹಿಣಿ ಚೆನ್ನಬಸವಯ್ಯರ ಊರುಗೋಲು ಕಿತ್ತುಕೊಂಡು ಆತನ ಕಾಲಿಗೆ ಹೊಡೆದಿದ್ದಾರೆ. ನಾರಿಮಣಿಯರ ಆಟಾಟೋಪಕ್ಕೆ ವೃದ್ಧನ ಕಾಲಿನ ಮೂಳೆಯೇ ಮುರಿದು ಹೋಗಿದೆ.

ಇನ್ನು ಕಳೆದ ಏಪ್ರಿಲ್ 22ಕ್ಕೆ ಈ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಚೆನ್ನಬಸವಯ್ಯರನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಪ್ರಿಲ್ 26 ರಂದು ಚೆನ್ನಬಸವಯ್ಯರಿಗೆ ಅನಸ್ಥೇಶಿಯಾ ನೀಡಿ ಆಪರೇಷನ್ ಮಾಡುವ ವೇಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಆದರೆ ಚಾಮರಾಜನಗರದ ಪೂರ್ವ ಠಾಣಾ ಪೊಲೀಸರು ಕೇವಲ ಗಲಾಟೆ ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ನೆಲಕಚ್ಚಿದ್ದ ರೇಷ್ಮೆ ಕೃಷಿಗೆ ಸರ್ಕಾರದಿಂದ ಉತ್ತೇಜನ, ರೈತರಿಗೆ ಸಕಲ ಸವಲತ್ತು

ಚೆನ್ನಬಸವಯ್ಯ ಸಾವನ್ನಪ್ಪಿದ ಬಳಿಕ ಕೊಲೆ ಪ್ರಕರಣ ದಾಖಲಿಸಿಕೊಂಡಿಲ್ಲ ಎಂಬುದು ಮೃತನ ಕುಟುಂಬಸ್ಥರ ವಾದವಾಗಿದೆ. ಕೇವಲ ಎಫ್​ಐಆರ್ ರಿಜಿಸ್ಟರ್ ಮಾಡ್ಕೊಂಡು ಸುಮ್ಮನೆ ಕುಳಿತಿದ್ದಾರೆ, ಕನಿಷ್ಠ ಪಕ್ಷ ಆರೋಪಿಗಳಾದ ನಾಗರತ್ನ, ರೋಹಿಣಿ ಹಾಗೂ ಸುಹಾಸಿನಿಯನ್ನ ಠಾಣೆಗೆ ಕರೆದು ವಿಚಾರಣೆ ನಡೆಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ವಿರುದ್ದ ಕ್ರಮ ಆಗಲೇ ಬೇಕೆಂಬುದು ಮೃತನ ಕುಟುಂಬಸ್ಥರು ಆಹ್ರಗಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ