AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ; ಒಂಟಿ ಸಲಗ ದಾಳಿಗೊಳಗಾಗಿ ರಾತ್ರಿಯಿಡೀ ನರಳಿದ್ದ ಯುವಕ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರ ಆಕ್ರೋಶ

ಹೆಚ್ಚಿನ ಚಿಕಿತ್ಸಾ ವೆಚ್ಚ ಭರಿಸಲಾಗದೆ ನಾಗೇಶ್ ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಮೊದಲು ಹಲವು ಬಾರಿ ಕಾಡಿನಲ್ಲಿ ಬೆಂಕಿ ಬಿದ್ದಾಗ ಆರಿಸಲು ಅರಣ್ಯಾಧಿಕಾರಿಗಳು ನಾಗೇಶ್ ಸಹಾಯ ಪಡೆದಿದ್ದರು, ಆದರೂ ಇದೀಗ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಚಾಮರಾಜನಗರ; ಒಂಟಿ ಸಲಗ ದಾಳಿಗೊಳಗಾಗಿ ರಾತ್ರಿಯಿಡೀ ನರಳಿದ್ದ ಯುವಕ, ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಸ್ಥಳೀಯರ ಆಕ್ರೋಶ
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma|

Updated on: Aug 19, 2023 | 12:22 PM

Share

ಚಾಮರಾಜನಗರ, ಆಗಸ್ಟ್ 19: ರಾಜ್ಯದ ಹಲವೆಡೆ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ದಿನೇ ದಿನೇ ಹೆಚ್ಚುತ್ತಿದ್ದು, ಅನೇಕ ಕಡೆಗಳಲ್ಲಿ ಕಾಡುಪ್ರಾಣಿಗಳ (Elephant Attack) ದಾಳಿಗಳ ಬಗ್ಗೆ ವರದಿಯಾಗುತ್ತಿರುತ್ತವೆ. ಚಾಮರಾಜನಗರ (Chamarajanagar) ಮೇಲುಕಾಮನಹಳ್ಳಿ ಗ್ರಾಮದಲ್ಲಿ ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ತೀವ್ರವಾಗಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯು ಆಗಸ್ಟ್ 13ರಂದೇ ನಡೆದಿದ್ದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ಯುವಕ ನಾಗೇಶ್ ಮೇಲೆ ಒಂಟಿ ಸಲಗ ದಾಳಿ ಮಾಡಿದೆ. ಆನೆ ದಾಳಿಗೆ ಒಳಗಾದ ಯುವಕನ ಬೆನ್ನು ಮೂಳೆ ಪುಡಿ ಪುಡಿಯಾಗಿದ್ದು ಕತ್ತಿನ ಹಿಂಭಾಗಕ್ಕೆ ಭಾರಿ ಹೊಡೆತ ಬಿದ್ದಿದೆ. ತಡರಾತ್ರಿ ಆನೆ ದಾಳಿ ನಡೆದಿದ್ದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಗ್ರಾಮಸ್ಥರು ಬೆಳಿಗ್ಗೆ ನೋಡಿದಾಗ ಆನೆ ದಾಳಿ ನಡೆದ ವಿಷಯ ತಿಳಿದು ಬಂದಿದ್ದು, ರಾತ್ರಿಯಿಡಿ ಯುವಕ ಕಾಡಲ್ಲೇ ನರಳಾಡಿದ್ದ ಎನ್ನಲಾಗಿದೆ. ನಂತರ ಗಾಯಾಳು ನಾಗೇಶ್​ ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಪಾಸಣೆಯ ನಂತರ ವೈದ್ಯರು ಬಲಗಾಲು ಸ್ವಾದೀನ ತಪ್ಪಿದೆ ಮತ್ತು ಗಾಯಾಳಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಚಿಕಿತ್ಸಾ ವೆಚ್ಚ ಭರಿಸಲಾಗದೆ ನಾಗೇಶ್ ತಾಯಿ ಕಂಗಾಲಾಗಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ದೂರು ನೀಡಿದರೂ ಸ್ಪಂದಿಸದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಈ ಮೊದಲು ಹಲವು ಬಾರಿ ಕಾಡಿನಲ್ಲಿ ಬೆಂಕಿ ಬಿದ್ದಾಗ ಆರಿಸಲು ಅರಣ್ಯಾಧಿಕಾರಿಗಳು ನಾಗೇಶ್ ಸಹಾಯ ಪಡೆದಿದ್ದರು, ಆದರೂ ಇದೀಗ ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಘಟನಾ ಸ್ಥಳಕ್ಕೂ ಅರಣ್ಯಾಧಿಕಾರಿಗಳ ಕಚೇರಿಗೂ ಕೇವಲ 500 ಮೀಟರ್ ಅಂತರವಿದೆ. ಆದರೂ ಪ್ರಕರಣ ನಡೆದು ಇಷ್ಟು ದಿನವಾದ್ರೂ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ನಿರ್ಲಕ್ಷವಹಿಸಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಟಿವಿ9 ಕ್ಯಾಮೆರಾ ಕಂಡ ಬಳಿಕ ಶೀಘ್ರವೇ ಹೆಚ್ಚೆತ್ತ ಅರಣ್ಯಾಧಿಕಾರಿಗಳು ಸಂತ್ರಸ್ತನ ಮನೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ಈ ಮೊದಲು ಕೂಡ ಇಂಥದ್ದೇ ಹಲವಾರು ಘಟನೆಗಳು ಚಾಮರಾಜನಗರ ಜಿಲ್ಲೆಯಲ್ಲಿಯೇ ದಾಖಲಾಗಿದೆ. ಈ ಮಧ್ಯೆ ಶುಕ್ರವಾರ ರಾತ್ರಿ ನಡೆದ ಕಾರ್ಯಚರಣೆಯಲ್ಲಿ ಒಂಟಿ ಸಲಗವೊಂದನ್ನು ಸೆರೆ ಹಿಡಿಯಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಬೆಳೆ ನಾಶ ಮಾಡುತ್ತಿದ್ದ ಆನೆಯನ್ನು ಅರಿವಳಿಕೆ ನೀಡಿ ಸೆರೆಹಿಡಿಯಲಾಗಿದೆ. ಕಾಡಾನೆಗಳು ಬೆಳೆ ನಾಶವಾಗುತ್ತಿರುವುದು ಮಾತ್ರವಲ್ಲದೆ, ಕಾಡಿನಂಚಿನ ಜನತೆಯ ಜೀವಕ್ಕೂ ಆಪತ್ತಾಗಿ ಪರಿಣಮಿಸಿವೆ. ಒಂಟಿ ಸಲಗದ ದಾಳಿಯಿಂದ ಸ್ವಲ್ಪ ನಿಟ್ಟುಸಿರು ಬಿಟ್ಟ ಜನತೆ, ಖಾಯಂ ಪರಿಹಾರಕ್ಕೆ ಎದುರು ನೋಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?