AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagara: ಶೀಘ್ರದಲ್ಲಿಯೇ ಮಲೈಮಹದೇಶ್ವರ ಬೆಟ್ಟದ ಮಾದಪ್ಪನಿಗೆ 530 ಕೆ.ಜಿ ತೂಕದ ಬೆಳ್ಳಿ ರಥ

ರಾಜ್ಯದ ಎರಡನೇ ಶ್ರೀಮಂತ ದೇವಾಲಯವಾದ ಮಲೈಮಹದೇಶ್ವರ ಬೆಟ್ಟದ ಮಾದಪ್ಪನಿಗೆ ಬೆಳ್ಳಿ ರಥ ಸೇವೆ ಪ್ರಾರಂಭ ಮಾಡಬೇಕೇಂದು ಭಕ್ತರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಅದಕ್ಕೀಗ ಕಾಲ ಕೂಡಿಬಂದಿದ್ದು, ಇದೀಗ ಭಕ್ತರ ಬೇಡಿಕೆಯಂತೆ ಬೆಳ್ಳಿ ರಥ ನಿರ್ಮಾಣವಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಬೆಳ್ಳಿ ರಥ ಸೇವೆ ಆರಂಭವಾಗಲಿದೆ.

Chamarajanagara: ಶೀಘ್ರದಲ್ಲಿಯೇ ಮಲೈಮಹದೇಶ್ವರ ಬೆಟ್ಟದ ಮಾದಪ್ಪನಿಗೆ 530 ಕೆ.ಜಿ ತೂಕದ ಬೆಳ್ಳಿ ರಥ
ಮಲೈಮಹದೇಶ್ವರ ಬೆಟ್ಟದ ಮಾದಪ್ಪನಿಗೆ ತಯಾರಾಗುತ್ತಿರುವ 530 ಕೆ.ಜಿ ತೂಕದ ಬೆಳ್ಳಿ ರಥ
TV9 Web
| Edited By: |

Updated on: Jan 10, 2023 | 10:03 PM

Share

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೈಮಹದೇಶ್ವರ ಬೆಟ್ಟವು ರಾಜ್ಯದ ಎರಡನೇ ಶ್ರೀಮಂತ ದೇವಾಲಯವಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಲಕ್ಷಾಂತರ ಜನ ಭಕ್ತರಿದ್ದಾರೆ. ದೇವಾಲಯದಲ್ಲಿ ಈಗಾಗಲೇ ಮಾದಪ್ಪನಿಗೆ ಚಿನ್ನದ ರಥದ ಸೇವೆ ಮಾಡಲಾಗುತ್ತಿತ್ತು. ಅದೇ ರೀತಿ ಬೆಳ್ಳಿ ರಥ ಸೇವೆಯನ್ನು ಮಾಡಬೇಕು ಎಂಬುದು ಹಲವು ವರ್ಷಗಳಿಂದ ಭಕ್ತರ ಬೇಡಿಕೆಯಾಗಿದ್ದು ಇದೀಗ ಅದು ನೆರವೇರಿದೆ. ಸುಮಾರು 530 ಕೆ.ಜಿ ತೂಕದ ಬೆಳ್ಳಿಯನ್ನ ಬಳಸಿ ಬೆಳ್ಳಿ ರಥ ನಿರ್ಮಾಣವಾಗಿದ್ದು ಎಲ್ಲವು ಅಂದುಕೊಂಡಂತೆ ಆದರೆ ಇದೇ ತಿಂಗಳ 15 ರಂದು ಬೆಳ್ಳಿ ರಥ ಮಾಡುತ್ತಿರುವ ಶಿಲ್ಪಿಗಳು ದೇವಾಲಯಕ್ಕೆ ರಥವನ್ನು ಹಸ್ತಾಂತರ ಮಾಡಲಿದ್ದಾರೆ.

ಇನ್ನು ಬೆಳ್ಳಿ ರಥ ನಿರ್ಮಾಣ ಮಾಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂಧರ್ಭದಲ್ಲಿ ಪ್ರಾಧಿಕಾರದ ಸಭೆ ನಡೆಸಿ ಇದಕ್ಕೆ ಬೇಕಾದ ಬೆಳ್ಳಿಯನ್ನ ಇಟ್ಟುಕೊಳ್ಳಲು ಅಂದೇ ತೀರ್ಮಾನ ಮಾಡಲಾಗಿತ್ತು. ಅದಷ್ಟೇ ಅಲ್ಲದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಸಂಧರ್ಭದಲ್ಲಿ ಅವರಿಗೆ ಬಂದ ಬೆಳ್ಳಿಯ ಗಿಫ್ಟ್​ಗಳನ್ನು ರಥಕ್ಕೆ ಕೊಡುವುದಾಗಿಯು ತಿಳಿಸಿದ್ದರು. ಕಳೆದ ಒಂದು ವರ್ಷಗಳಿಂದ ಬೆಳ್ಳಿ ರಥ ನಿರ್ಮಾಣ‌ದ ಕೆಲಸವನ್ನ ಶಿಲ್ಪಿಗಳು ದೇವಾಲಯದ ಆವರಣದಲ್ಲೆ‌ ಮಾಡುತ್ತಿದ್ದಾರೆ. ‌ಸದ್ಯ ಈ ಬೆಳ್ಳಿ ರಥಕ್ಕೆ ಬೇಕಾದ ಬೆಳ್ಳಿಯನ್ನ ಭಕ್ತರೆ ನೀಡಿದ್ದಾರೆ. ಹುಂಡಿಗೆ ಕಾಣಿಕೆ ರೂಪದಲ್ಲಿ ಬರುವ ಬೆಳ್ಳಿಯನ್ನು ಬಳಸಿಕೊಂಡು ರಥ ನಿರ್ಮಾಣ ಮಾಡಲಾಗಿದೆಯಂತೆ. ಅಷ್ಟೆ ಅಲ್ಲದೆ ಶಿಲ್ಪಿಗಳಿಗೆ ಸುಮಾರು 20 ಲಕ್ಷ ಹಣ ಕೊಡಬೇಕಿದ್ದು, ಅದನ್ನು ಸಹ ದೇವಾಲಯದ ಭಕ್ತರೆ ಬರಿಸಿದ್ದಾರಂತೆ.

ಇದನ್ನೂ ಓದಿ:Doddamma Thayi Jatre: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಸಂಕ್ರಾಂತಿ ಸಮೀಪಿಸಿದಾಗ ಜಾತ್ರೆಗಳ ಸುಗ್ಗಿಯೋ ಸುಗ್ಗಿ, ಒಂದು ಝಲಕ್ ಇಲ್ಲಿದೆ!

ಒಟ್ಟಾರೆ ಬೆಳ್ಳಿ ರಥದ ಕೆಲಸ ಶೇ.99 ರಷ್ಟು ಮುಕ್ತಾಯವಾಗಿದ್ದು, ಮಲೈ ಮಹದೇಶ್ವರ ಬೆಟ್ಟದಲ್ಲಿ ರಾತ್ರಿ ವೇಳೆ ನಡೆಯುತ್ತಿದ್ದ ಚಿನ್ನದ ರಥದ ಸೇವೆ ಮಾದರಿಯಲ್ಲಿ ಬೆಳಗ್ಗಿನ ವೇಳೆ ಬೆಳ್ಳಿ ರಥದ ಸೇವೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.

ವರದಿ: ದಿಲೀಪ್ ಚೌಡಹಳ್ಳಿ ಟಿವಿ9 ಚಾಮರಾಜನಗರ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ