AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ

ಸಿಎಂ ಸರ್ ನಮ್ಮ ಭಾಗದಲ್ಲಿ ಕುಡಿಯುವ ನೀರಿಗೂ ತುಂಬಾ ಸಮಸ್ಯೆಯಿದೆ.ತಂದೆ ತಾಯಿಗಳು ಕೃಷಿಯಲ್ಲಿ ಅನುಭವಿಸ್ತಿರುವ ನೋವನ್ನು ತಡೆಯಲಾಗುತ್ತಿಲ್ಲ.ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗಬೇಕಿದೆ.ಈ ಭಾಗಕ್ಕೆ ನದಿ ಮೂಲಗಳಿಂದ ಶಾಶ್ವತ ನೀರು ಒದಗಿಸಿ ಎಂದು ಮಕ್ಕಳು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.  ಈ ಬಗ್ಗೆ ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ
Student Letter To Cm
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 08, 2025 | 10:35 PM

Share

ಚಾಮರಾಜನಗರ, (ಜುಲೈ 08): ಚಾಮರಾಜನಗರ (Chamarajanagara) ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (siddaramaiah )ಪತ್ರ ಬರೆದು ಗಮನ ಸೆಳೆದಿದ್ದಾರೆ. ತಂದೆ-ತಾಯಿ ನೀರಿಲ್ಲದೇ ದೂರ ಹೋಗಿ ಕೆಲಸ ಮಾಡುತ್ತಾರೆ. ಪ್ರಾಣಿ ಪಕ್ಷಿಗಳಿಗೂ ಕುಡಿಯುವ ನೀರು (drinking water) ಸಿಗುತ್ತಿಲ್ಲ ಎಂದು ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಪತ್ರ ಬರೆದು ತನ್ನ ಪೋಷಕರ ಕಷ್ಟದ ಬಗ್ಗೆ ತಿಳಿಸಿದ್ದಾರೆ. ಇದನ್ನು ನಿಮ್ಮ ಟಿವಿ9 ಸುದ್ದಿ ಪ್ರಸಾರ ಮಾಡುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ.

ಸಿಎಂಗೆ ಬರೆದ ಪತ್ರದಲ್ಲೇನಿದೆ?

“ಇತ್ತೀಚಿನ ದಿನಗಳಲ್ಲಿ ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಕುಸಿದಿದೆ.ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಿಂತಂತಾಗಿದ್ದು, ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ಇತರೆ ಕಡೆಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಸ್ಥಿತಿಯನ್ನು ನೋಡಿದಾಗ ನಮ್ಮ ಮನಸ್ಸು ತೀವ್ರವಾಗಿ ದುಃಖಗೊಂಡಿದೆ,” ಎಂದು ತಿಳಿಸಿದ್ದಾರೆ. ಅಲ್ಲದೇ ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಬೇಕು. ಈ ಮೂಲಕ ಭೂಮಿಯಲ್ಲಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಳೆಗಾಲದಲ್ಲೂ ನೀರಿಗೆ ಹಾಹಾಕಾರ: ನದಿ ತುಂಬಿ ಹರಿಯುತ್ತಿದ್ರೂ ಯಾದಗಿರಿ ಜನಕ್ಕಿಲ್ಲ ಕುಡಿಯುವ ನೀರು

ಇನ್ನೂ ಹನೂರು ಭಾಗದಲ್ಲಿ ನೀರಿನ ಸಮಸ್ಯೆ ಬಗ್ಗೆ ಶಾಸಕ ಮಂಜುನಾಥ್ ಕೂಡ ಒಪ್ಪಿಕೊಂಡಿದ್ದಾರೆ. ಶೇ 40 ರಷ್ಟು ಮಳೆ ಕೊರತೆಯಾಗಿದೆ.ಈಗಾಗಲೇ ಕುಡಿಯುವ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಶಾಶ್ವತ ನೀರಾವರಿಗಾಗಿ ಯೋಜನೆ ರೂಪಿಸಬೇಕಿದೆ. ನಮ್ಮ ಭಾಗದಲ್ಲಿ ಮುಂಗಾರು ಮಳೆಯಾಗುವುದಿಲ್ಲ,ಹಿಂಗಾರು ವೇಳೆ ಮಳೆ ಬೀಳುತ್ತದೆ.ಸದ್ಯ ಮಳೆಯ ಕೊರತೆಯಿಂದ ಅಂತರ್ಜಲ ಮಟ್ಟ ಕೂಡ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.

ಗ್ರಾಮಕ್ಕೆ ಅಧಿಕಾರಿಗಳು ದೌಡು

ಚಾಮರಾಜನಗರ ಜಿಲ್ಲಾ ಪಂಚಾಯಿತಿ ಸಿಇಒ ಮೋನಾರೋತ್ ಹಾಗೂ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಭೇಟಿ ನೀಡಿದ್ದು, ಸಮಸ್ಯೆ ಬಗೆಹರಿಸಲು ಸಿಇಒ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದದಾರೆ. ಇನ್ನು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಿದ ಸಿಇಒ ಮೋನಾರೋತ್, ಕುಡಿಯುವ ನೀರು ಪೂರೈಸಲು ಪ್ರತ್ಯೇಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಜೊತೆಗೆ ನದಿಯಿಂದ ನೀರು ತುಂಬಿಸುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.

ಒಟ್ಟಿನಲ್ಲಿ ಪುಟ್ಟ ಮಕ್ಕಳ ಚಿಂತನೆ ಜನರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಮಕ್ಕಳ ಮನವಿ ಸ್ಪಂದಿಸ್ತಾರಾ? ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ