AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagara News: ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ 2.93 ಲಕ್ಷ ರೂಪಾಯಿ. ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಭಕ್ತ

ಬೆಂಗಳೂರಿನ ಮೇದರಹಳ್ಳಿಯ ನರಸಿಂಹಮೂರ್ತಿ ಹಣ ಹಿಂದಿರುಗಿಸಿದ ಭಕ್ತ. ಪೊಲೀಸರ ಸಮ್ಮುಖದಲ್ಲಿ ಮಹದೇಶ್ವರ ಬೆಟ್ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜುಗೆ ಹಣವನ್ನು ಹಿಂದಿರುಗಿಸಲಾಗಿದೆ.

Chamarajanagara News: ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ 2.93 ಲಕ್ಷ ರೂಪಾಯಿ. ಹಣ ಹಿಂದಿರುಗಿಸಿ ಪ್ರಾಮಾಣಿಕತೆ ಮೇರೆದ ಭಕ್ತ
ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ ಹಣ ಹಿಂದಿರುಗಿಸಿದ ಭಕ್ತ.
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 31, 2022 | 9:39 AM

Share

ಚಾಮರಾಜನಗರ: ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆ 2.93 ಲಕ್ಷ ರೂಪಾಯಿ ಭಕ್ತನ ಪಾಲಾಗಿತ್ತು. ಸದ್ಯ ಕಣ್ತಪ್ಪಿನಿಂದ ಪ್ರಸಾದದ ಜೊತೆ ಕೊಟ್ಟಿದ್ದ ಹಣವನ್ನು ಭಕ್ತ ಹಿಂದಿರುಗಿಸಿದ್ದಾರೆ. ಬೆಂಗಳೂರಿನ ಮೇದರಹಳ್ಳಿಯ ನರಸಿಂಹಮೂರ್ತಿ ಹಣ ಹಿಂದಿರುಗಿಸಿದ ಭಕ್ತ. ಪೊಲೀಸರ ಸಮ್ಮುಖದಲ್ಲಿ ಮಹದೇಶ್ವರ ಬೆಟ್ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜುಗೆ ಹಣವನ್ನು ಹಿಂದಿರುಗಿಸಲಾಗಿದೆ. ಭಕ್ತ ನರಸಿಂಹ ಮೂರ್ತಿ, ಅಭಿಷೇಕ ಪ್ರಸಾದದ ಟಿಕೆಟ್ ಪಡೆದಿದ್ದು, ಪ್ರಸಾದದ ಚೀಲಗಳನ್ನು ನೀಡುವಾಗ ಹಣವಿದ್ದ ಚೀಲವೊಂದನ್ನು ಸಹ ಆಕಸ್ಮಿಕವಾಗಿ ನೌಕರ ನಾಗಭೂಷಣ ಎತ್ತಿಕೊಟ್ಟಿದ್ದರು. ಸಿಸಿ ಟಿವಿಯಲ್ಲೂ ಈ  ದೃಶ್ಯ ಸೆರೆಯಾಗಿತ್ತು. ಮಲೆಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಈ ಕುರಿತಾಗಿ ಪ್ರತಿಕ್ರಿಯಿಸಿರುವ ಭಕ್ತ ನರಸಿಂಹಮೂರ್ತಿ ಮನೆಯಲ್ಲಿ ಪ್ರಸಾದದ ಜೊತೆ ಹಣವಿರುವುದನ್ನು ನೋಡಿ ಗಾಬರಿಗೊಂಡಿದ್ದೆ. ತಕ್ಷಣ ದೇವಸ್ಥಾನದ ಅಧಿಕಾರಿಗಳನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದೆ ಎಂದು ಭಕ್ತ ನರಸಿಂಹಮೂರ್ತಿ ಹೇಳಿಕೆ ನೀಡಿದರು.

Published On - 8:59 am, Sun, 31 July 22