AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ

ಕಳೆದ 7 ವರ್ಷಗಳಿಂದ ಶಾಲಾ ಶಿಕ್ಷಕಿ ಜೊತೆ ಸ್ನೇಹದಿಂದ ಇದ್ದ ಅಬ್ದುಲ್ ಅಸೀಮ್ ಎನ್ನುವಾತ, ಇದೀಗ ಗೆಳತಿಗೆ ಮದುವೆಯಾಗುತ್ತಿದ್ದಂತೆಯೇ ಹೊಸ ವರಸೆ ತೆಗೆದಿದ್ದಾನೆ. ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಪತಿಯನ್ನ ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ ಹಾಕಿದ್ದು, ಇದರಿಂದ ಬೇಸತ್ತ ಶಿಕ್ಷಕಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ
ಅಬ್ದುಲ್ ಅಸೀಮ್
ಸೂರಜ್ ಪ್ರಸಾದ್ ಎಸ್.ಎನ್
| Updated By: ರಮೇಶ್ ಬಿ. ಜವಳಗೇರಾ|

Updated on: Sep 19, 2023 | 10:46 AM

Share

ಚಾಮರಾಜನಗರ, (ಸೆಪ್ಟೆಂಬರ್ 19): ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್(blackmail)​ ಮಾಡಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೆಗಾಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್  ಎನ್ನುವರ ಶಿಕ್ಷಕಿ ಬಳಿ ಹಣಕ್ಕೆ ಡಿಮ್ಯಾಂಡ್​ ಇಟ್ಟಿದ್ದಲ್ಲದೇ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಪತಿಯನ್ನು ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಶಿಕ್ಷಕಿಗೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಅಬ್ದುಲ್ ಅಸೀಮ್ ಹಾಗೂ ಮಯೂರ್ ಎಂಬುವವರು ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ. ಅಬ್ಧುಲ್ ಅಸೀಮ್ ಎನ್ನುವಾತ ನೊಂದ ಸಂತ್ರಸ್ಥೆ (ಶಿಕ್ಷಕಿ) ಜೊತೆ ಕಳೆದ 7 ವರ್ಷಗಳಿಂದ ಸ್ನೇಹಿತನಾಗಿದ್ದ. ಆದ್ರೆ, ಶಿಕ್ಷಕಿ ಕಳೆದ 2 ವರ್ಷದ ಹಿಂದೆ ಬೇರೊಬ್ಬನ್ನೊಂದಿಗೆ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿಯನ್ನ ಬಿಟ್ಟು ನನ್ನ ಜೊತೆ ಬಾ ಎಂದು ದುಂಬಾಲು ಬಿದ್ದಿದ್ದ. ಪತಿಯನ್ನ ಬಿಟ್ಟು ಬರದೆ ಇದ್ದರೆ ನಮ್ಮಿಬ್ಬರ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಕೋಲಾರ: ಒಂಬತ್ತು ಇಂಚು ಜಾಗಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಇನ್ನು ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಬಾರದು ಅಂದ್ರೆ 10 ಲಕ್ಷ ರೂ. ಹಣ ನೀಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾನೆ. ಇದರಿಂದ ನೊಂದ ಸಂತ್ರಸ್ಥೆ ಶಿಕ್ಷಕಿ ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದದಾರೆ.

ಮತ್ತಷ್ಟು ಚಾಮರಾಜನಗರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ