AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ

ಕಳೆದ 7 ವರ್ಷಗಳಿಂದ ಶಾಲಾ ಶಿಕ್ಷಕಿ ಜೊತೆ ಸ್ನೇಹದಿಂದ ಇದ್ದ ಅಬ್ದುಲ್ ಅಸೀಮ್ ಎನ್ನುವಾತ, ಇದೀಗ ಗೆಳತಿಗೆ ಮದುವೆಯಾಗುತ್ತಿದ್ದಂತೆಯೇ ಹೊಸ ವರಸೆ ತೆಗೆದಿದ್ದಾನೆ. ಶಿಕ್ಷಕಿಯ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ಪತಿಯನ್ನ ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ ಹಾಕಿದ್ದು, ಇದರಿಂದ ಬೇಸತ್ತ ಶಿಕ್ಷಕಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನ ಬಿಟ್ಟು ಬರುವಂತೆ ಶಾಲಾ ಶಿಕ್ಷಕಿಗೆ ಧಮ್ಕಿ
ಅಬ್ದುಲ್ ಅಸೀಮ್
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 19, 2023 | 10:46 AM

Share

ಚಾಮರಾಜನಗರ, (ಸೆಪ್ಟೆಂಬರ್ 19): ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಧಮ್ಕಿ ಹಾಕುವುದಲ್ಲದೇ 10 ಲಕ್ಷ ರೂಪಾಯಿ ಹಣ ನೀಡದೆ ಇದ್ರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್​ ಮೇಲ್(blackmail)​ ಮಾಡಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೆಗಾಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್  ಎನ್ನುವರ ಶಿಕ್ಷಕಿ ಬಳಿ ಹಣಕ್ಕೆ ಡಿಮ್ಯಾಂಡ್​ ಇಟ್ಟಿದ್ದಲ್ಲದೇ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ ಪತಿಯನ್ನು ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಇದರಿಂದ ನೊಂದ ಶಿಕ್ಷಕಿಗೆ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಅಬ್ದುಲ್ ಅಸೀಮ್ ಹಾಗೂ ಮಯೂರ್ ಎಂಬುವವರು ಶಿಕ್ಷಕಿಯ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಪತಿ ಹಾಗೂ ಕುಟುಂಬಸ್ಥರಿಗೆ ಕಳುಹಿಸಿದ್ದಾರೆ. ಅಬ್ಧುಲ್ ಅಸೀಮ್ ಎನ್ನುವಾತ ನೊಂದ ಸಂತ್ರಸ್ಥೆ (ಶಿಕ್ಷಕಿ) ಜೊತೆ ಕಳೆದ 7 ವರ್ಷಗಳಿಂದ ಸ್ನೇಹಿತನಾಗಿದ್ದ. ಆದ್ರೆ, ಶಿಕ್ಷಕಿ ಕಳೆದ 2 ವರ್ಷದ ಹಿಂದೆ ಬೇರೊಬ್ಬನ್ನೊಂದಿಗೆ ವಿವಾಹವಾಗಿದ್ದರು. ವಿವಾಹದ ಬಳಿಕ ಪತಿಯನ್ನ ಬಿಟ್ಟು ನನ್ನ ಜೊತೆ ಬಾ ಎಂದು ದುಂಬಾಲು ಬಿದ್ದಿದ್ದ. ಪತಿಯನ್ನ ಬಿಟ್ಟು ಬರದೆ ಇದ್ದರೆ ನಮ್ಮಿಬ್ಬರ ಖಾಸಗಿ ವಿಡಿಯೋ ಅಪ್ ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಇದನ್ನೂ ಓದಿ: ಕೋಲಾರ: ಒಂಬತ್ತು ಇಂಚು ಜಾಗಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಇನ್ನು ವಿಡಿಯೋ ಸಾಮಾಜಿ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಬಾರದು ಅಂದ್ರೆ 10 ಲಕ್ಷ ರೂ. ಹಣ ನೀಡಬೇಕೆಂದು ಡಿಮ್ಯಾಂಡ್ ಇಟ್ಟಿದ್ದಾನೆ. ಇದರಿಂದ ನೊಂದ ಸಂತ್ರಸ್ಥೆ ಶಿಕ್ಷಕಿ ಚಾಮರಾಜನಗರದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಇತ್ತ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದದಾರೆ.

ಮತ್ತಷ್ಟು ಚಾಮರಾಜನಗರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್