AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ಒಂದೇ ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ ಹುಲಿ

ಕಾಡಂಚಿನ ಗ್ರಾಮಗಳಲ್ಲಿ ಮಾನವ ಮತ್ತು ವನ್ಯಜೀವಿಗಳ ಮಧ್ಯೆ ಸಂಘರ್ಷ ನಿಲ್ಲುತ್ತಿಲ್ಲ. ಚಾಮರಾಜನಗರದ ಹುಲಿ ಸಂರಕ್ಷಿತ ಪ್ರದೇಶದಲ್ಲಂತೂ ಇದು ತುಸು ಹೆಚ್ಚಾಗಿ ಕಂಡು ಬರುತ್ತಿದೆ. ಒಂದೇ ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಇಬ್ಬರನ್ನು ಹುಲಿ ತಿಂದು ಹಾಕಿದೆ. ಗುಂಡ್ಲುಪೇಟೆ ದೇಶಿಪುರ ಗ್ರಾಮದಲ್ಲಿ ದನಗಳು ಹಾಗೂ ಕುರಿಗಳನ್ನು ಮೇಯಸುತ್ತಿದ್ದ ಮಹಿಳೆ ಹುಲಿ ದಾಳಿಗೆ ಬಲಿಯಾಗಿದ್ದಾರೆ.

ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ಒಂದೇ ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ ಹುಲಿ
ಹುಲಿ (ಸಾಂದರ್ಭಿಕ ಚಿತ್ರ)
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jun 20, 2025 | 6:38 AM

Share

ಚಾಮರಾಜನಗರ, ಜೂನ್ 20: ಚಾಮರಾಜನಗರದ ಗುಂಡ್ಲುಪೇಟೆಯ ದೇಶಿಪುರ (Deshipura) ಎಂಬ ಕಾಡಂಚಿನ ಗ್ರಾಮದಲ್ಲಿ ಹುಲಿ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ದನ ಮೇಯಿಸಲು ತೆರಳಿದ್ದ ಮಧ್ಯವಯಸ್ಕ ಪುಟ್ಟಮ್ಮ ವ್ಯಾಘ್ರ ದಾಳಿಗೆ (Tiger Attack) ಆಹಾರವಾಗಿದ್ದಾರೆ. ಗುರುವಾರ ಸಂಜೆ ದನಕರುಗಳು ಹಾಗೂ ಕುರಿಗಳ ಹಿಂಡನ್ನು ಮೇಯಿಸುತ್ತಿರುವಾಗಲೇ ಹಠಾತ್‌ ಆಗಿ ಹುಲಿ ದಾಳಿ ಮಾಡಿದೆ. ಪುಟ್ಟಮ್ಮನನ್ನು ಕೊಂದ ಹುಲಿ, ನಂತರ ಸ್ವಲ್ಪ ದೂರ ಎಳೆದೊಯ್ದಿತ್ತು. ಹೊಟ್ಟೆ ಬಗೆದು ತಿನ್ನುತ್ತಿರುವಾಗಲೇ, ಜನ ನೋಡಿ ಬೆಚ್ಚಿದ್ದಿದ್ದಾರೆ. ನಾಲ್ಕೈದು ಮಂದಿ ಬೊಬ್ಬೆ ಹೊಡೆದಿದ್ದಾರೆ, ಚೀರಾಡಿದ್ದಾರೆ. ಆಗ ಹುಲಿ ಪುಟ್ಟಮ್ಮ ಮೃತದೇಹ ಬಿಟ್ಟು ಸ್ಥಳದಿಂದ ಕಾಲ್ಕಿತ್ತಿದೆ.

ಈ ಘಟನೆ ನಡೆದು ಎರಡ್ಮೂರು ಗಂಟೆ ಕಳೆದರೂ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್‌ನ ಯಾವೊಬ್ಬ ಅಧಿಕಾರಿಯೂ ಸ್ಥಳದತ್ತ ಸುಳಿದಿಲ್ಲ ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಯಿತು.

4 ದಿನದ ಹಿಂದಷ್ಟೇ ಮಹಿಳೆ ಕೊಂದು ಹಾಕಿದ್ದ ಹುಲಿ

ಅತ್ತ ಯಳಂದೂರಿನ ಬಿಳಿಗಿರಿರಂಗನ ಬೆಟ್ಟ ವ್ಯಾಪ್ತಿಯ ರಾಮಯ್ಯನಪೋಡು ಬಳಿ 4 ದಿನದ ಹಿಂದೆ ರಂಗಮ್ಮ ಎಂಬ ವೃದ್ಧೆಯನ್ನ ಹುಲಿ ಕೊಂದಿತ್ತು. ಆ ಘಟನೆಯ ಕಹಿ ನೆನೆಪು ಮಾಸುವ ಮುನ್ನವೇ ಈಗ ಪುಟ್ಟಮ್ಮ ಹುಲಿ ದಾಳಿಗೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ
Image
ಮಡಿಕೇರಿಯಲ್ಲಿ ಬರೋಬ್ಬರಿ 9 ಪೊಲೀಸರ ಮನೆಗಳಲ್ಲೇ ಕಳ್ಳತನ!
Image
ನೀಟ್ ಪರೀಕ್ಷೆಯಲ್ಲಿ ಕರ್ನಾಟಕದ ವಿದ್ಯಾರ್ಥಿನಿಗೆ ಅನ್ಯಾಯ: ಅಕ್ರಮದ ವಾಸನೆ!
Image
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕ ವಿನೂತನ ಪ್ರಯೋಗ
Image
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಮೂತ್ರ ವಿಸರ್ಜನೆ ಮಾಡುತ್ತಿದ್ದಾಗಲೇ ವ್ಯಕ್ತಿ ಮೇಲೆ ಹುಲಿ ದಾಳಿ

ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಗೆ ಬಂದಿದ್ದ ವ್ಯಕ್ತಿ ಮೇಲೆ ಹುಲಿ ದಾಳಿ ಮಾಡಿದ ಘಟನೆ ಚಾಮರಾಜನಗರ ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ರಾಮಯ್ಯನ ಪೋಡಿ ಎಂಬಲ್ಲಿ ಜೂನ್ 10 ರಂದು ನಡೆದಿತ್ತು. ಗಾಯಗೊಂಡಿದ್ದ ರವಿ ಅವರನ್ನು ಚಾಮರಾಜನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಪ್ರಕರಣ ಹೆಚ್ಚುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಮತ್ತೊಂದೆಡೆ, ಕ್ರಂಚ್ ಹಾಗೂ ಸೋಲಾರ್ ಫೆನ್ಸಿಂಗ್ ಅಳವಡಿಸಲು ಬಂಡೀಪುರ ಸಿಎಫ್ ಪ್ರಭಾಕರನ್ ಅವರಿಗೆ ಕಾಡಂಚಿನ ಜನ ಸಾಕಷ್ಟು ಮನವಿ ಮಾಡಿದಾರೆ. ಆದರೆ, ಪ್ರಭಾಕರನ್‌ ಈ ಬಗ್ಗೆ ನಿರ್ಲಕ್ಷ್ಯ ತೋರಿದಾರೆ ಎಂದು ಕಾಡಂಚಿನ ಜನ ಕಿಡಿಕಾರುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ