AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚ್ಛ್ರಾಯ ಸ್ಥಿತಿ ತಲುಪಿದ ರಾಮ ಜಪ, ಜೈಲಿನಲ್ಲಿ ಕೈದಿಗಳಿಗೂ ಅಯೋಧ್ಯೆ ಮಂತ್ರಾಕ್ಷತೆ, ತುಳಸಿ ಮಾಲೆ

ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಆದ್ರೆ ಜೈಲು ಸೇರಿರುವ ಕೈದಿಗಳಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು ಎಂದು ಮುಖ್ಯ ಅರ್ಚಕರಾದ ಅನಂತ ಪ್ರಸಾದ್ ಹೇಳಿದ್ದಾರೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on:Jan 19, 2024 | 12:40 PM

Share

ಇನ್ನೇನು ಜನವರಿ 22 ಕ್ಕೆ ಕೇವಲ ಬೆರಳೆಣಿಕೆ ದಿನ ಮಾತ್ರ ಬಾಕಿಯಿದೆ. ದೇಶದೆಲ್ಲೆಡೆ ರಾಮನ ಜಪ ಉಚ್ಛ್ರಾಯ ಸ್ಥಿತಿ ತಲುಪಿದೆ. ಐತಿಹಾಸಿಕ ದಿನವನ್ನ ಕಣ್ತುಂಬಿಕೊಳ್ಳಲು ದೇಶದ ಜನ ಕಾತುರದಿಂದ ಕಾಯುತ್ತಿದ್ರೆ ಇತ್ತ ಗಡಿ ನಾಡಲ್ಲಿ ಬಂಧಿಖಾನೆಯಲ್ಲಿ ಅಯೋಧ್ಯೆ ಮಂತ್ರಾಕ್ಷತೆ, ರಾಮನ ಹೊತ್ತಿಗೆ ಹಾಗೂ ತುಳಸಿ ಮಾಲೆ ನೀಡಿ ಕೈದಿಗಳಿಗೆ ರಾಮ ಜಪ ಮಾಡಿಸಲಾಯ್ತು. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕೈಯಲ್ಲಿ ತುಳಸಿ ಮಾಲೆ, ರಾಮನ ಪುಸ್ತಕ ಹಾಗೂ ಮಂತ್ರಾಕ್ಷತೆ ಹಿಡಿದು ಪದ್ಮಾಸನ ಕುಳಿತ ಕೈದಿಗಳು.. ಮತ್ತೊಂದೆಡೆ ರಾಮನ ಜಪ ಮಾಡುತ್ತ ತನ್ಮಯವಾಗಿರುವ ಅಧಿಕಾರಿಗಳು.. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರದ ಬಂಧಿಖಾನೆಯಲ್ಲಿ.

ಹೌದು ನ್ಯಾಯಾಧೀಶರಾದ ಶ್ರೀಧರ್ ನೇತೃತ್ವದಲ್ಲಿ ಜನಾರ್ದನ ದೇವಾಲಯದ ಮುಖ್ಯ ಅರ್ಚಕರಾದ ಅನಂತ್ ಪ್ರಸಾದ್ ಹಾಗೂ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಇಂದು ವಿಚಾರಣಧೀನ ಕೈದಿಗಳಿಗೆ ಅಯೋಧ್ಯೆ ಮಂತ್ರಾಕ್ಷತೆ, ರಾಮನ ಪುಸ್ತಕ ಹಾಗೂ ತುಳಸಿ ಮಾಲೆ ನೀಡಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಿದ್ರು.

ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಜೊತೆಗೆ ಮಂತ್ರಾಕ್ಷತೆ ಸಹ ಸಿಗಲಿದೆ, ಆದ್ರೆ ಒಂದಲ್ಲಾ ಒಂದು ಕಾರಣಕ್ಕೆ ತಪ್ಪು ಮಾಡಿ ಜೈಲು ಸೇರಿರುವ ಇವರಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು. ಇನ್ನು ತುಳಸಿ ಮಾಲೆ, ಮಂತ್ರಾಕ್ಷತೆ ಪಡೆದ ಕೆಲ ಕೈದಿಗಳು ಕೆಲ ಕಾಲ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗವು ಸಹ ನಡೆಯಿತು ಎಂದು ಮುಖ್ಯ ಅರ್ಚಕರಾದ ಅನಂತ ಪ್ರಸಾದ್ ಮಾಹಿತಿ ನೀಡಿದ್ದಾರೆ.

Also Read: ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಅಧಿಕೃತ ಆಹ್ವಾನ, ಜ.21 ರಂದು ಅಯೋಧ್ಯೆ ಪ್ರವಾಸ

ಅದೇನೆ ಹೇಳಿ ದಿನ ಕಳೆದಂತೆ ರಾಮನ ಜಪ ದೇಶದಲ್ಲಿ ಹೆಚ್ಚುತ್ತಲೇ ಇದೆ. ಇತ್ತ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನ ಕಣ್ತುಂಬಿಕೊಳ್ಳಲು ಇಡೀ ದೇಶವೆ ಎದುರು ನೋಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಯಾರು ವಂಚಿತರಾಗಬಾರದೆಂದು ಹಿಂದೂ ಮುಖಂಡರು ಮುಂದಾಗಿದ್ದು ವಿಶೇಷವಾಗಿತ್ತು ಎಂದು ಇದರಲ್ಲಿ ಭಾಗಿಯಾಗಿದ್ದವರು ಅಭಿಪ್ರಾಯಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 19 January 24

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More