AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚ್ಛ್ರಾಯ ಸ್ಥಿತಿ ತಲುಪಿದ ರಾಮ ಜಪ, ಜೈಲಿನಲ್ಲಿ ಕೈದಿಗಳಿಗೂ ಅಯೋಧ್ಯೆ ಮಂತ್ರಾಕ್ಷತೆ, ತುಳಸಿ ಮಾಲೆ

ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಆದ್ರೆ ಜೈಲು ಸೇರಿರುವ ಕೈದಿಗಳಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು ಎಂದು ಮುಖ್ಯ ಅರ್ಚಕರಾದ ಅನಂತ ಪ್ರಸಾದ್ ಹೇಳಿದ್ದಾರೆ.

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jan 19, 2024 | 12:40 PM

Share

ಇನ್ನೇನು ಜನವರಿ 22 ಕ್ಕೆ ಕೇವಲ ಬೆರಳೆಣಿಕೆ ದಿನ ಮಾತ್ರ ಬಾಕಿಯಿದೆ. ದೇಶದೆಲ್ಲೆಡೆ ರಾಮನ ಜಪ ಉಚ್ಛ್ರಾಯ ಸ್ಥಿತಿ ತಲುಪಿದೆ. ಐತಿಹಾಸಿಕ ದಿನವನ್ನ ಕಣ್ತುಂಬಿಕೊಳ್ಳಲು ದೇಶದ ಜನ ಕಾತುರದಿಂದ ಕಾಯುತ್ತಿದ್ರೆ ಇತ್ತ ಗಡಿ ನಾಡಲ್ಲಿ ಬಂಧಿಖಾನೆಯಲ್ಲಿ ಅಯೋಧ್ಯೆ ಮಂತ್ರಾಕ್ಷತೆ, ರಾಮನ ಹೊತ್ತಿಗೆ ಹಾಗೂ ತುಳಸಿ ಮಾಲೆ ನೀಡಿ ಕೈದಿಗಳಿಗೆ ರಾಮ ಜಪ ಮಾಡಿಸಲಾಯ್ತು. ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕೈಯಲ್ಲಿ ತುಳಸಿ ಮಾಲೆ, ರಾಮನ ಪುಸ್ತಕ ಹಾಗೂ ಮಂತ್ರಾಕ್ಷತೆ ಹಿಡಿದು ಪದ್ಮಾಸನ ಕುಳಿತ ಕೈದಿಗಳು.. ಮತ್ತೊಂದೆಡೆ ರಾಮನ ಜಪ ಮಾಡುತ್ತ ತನ್ಮಯವಾಗಿರುವ ಅಧಿಕಾರಿಗಳು.. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಚಾಮರಾಜನಗರದ ಬಂಧಿಖಾನೆಯಲ್ಲಿ.

ಹೌದು ನ್ಯಾಯಾಧೀಶರಾದ ಶ್ರೀಧರ್ ನೇತೃತ್ವದಲ್ಲಿ ಜನಾರ್ದನ ದೇವಾಲಯದ ಮುಖ್ಯ ಅರ್ಚಕರಾದ ಅನಂತ್ ಪ್ರಸಾದ್ ಹಾಗೂ ಕಾನೂನು ಪ್ರಾಧಿಕಾರದ ಕಾರ್ಯದರ್ಶಿ ಇಂದು ವಿಚಾರಣಧೀನ ಕೈದಿಗಳಿಗೆ ಅಯೋಧ್ಯೆ ಮಂತ್ರಾಕ್ಷತೆ, ರಾಮನ ಪುಸ್ತಕ ಹಾಗೂ ತುಳಸಿ ಮಾಲೆ ನೀಡಿ ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಿದ್ರು.

ಹೊರಗಿನವರಿಗೆ ರಾಮನ ಪ್ರಾಣ ಪ್ರತಿಷ್ಠಾಪನೆ ನೋಡುವ ಭಾಗ್ಯ ದೊರೆಯಲಿದೆ. ಜೊತೆಗೆ ಮಂತ್ರಾಕ್ಷತೆ ಸಹ ಸಿಗಲಿದೆ, ಆದ್ರೆ ಒಂದಲ್ಲಾ ಒಂದು ಕಾರಣಕ್ಕೆ ತಪ್ಪು ಮಾಡಿ ಜೈಲು ಸೇರಿರುವ ಇವರಿಗೆ ಈ ತರಹದ ಅವಕಾಶಗಳು ಇರುವುದಿಲ್ಲ. ಹಾಗಾಗಿ ಇಂತಹವರಿಗೂ ಈ ಭಾಗ್ಯ ತಪ್ಪದೆ ಸಿಗಲಿ ಹಾಗೂ ಮಾಡಿದ ತಪ್ಪಿಗೆ ಪ್ರಾಯಶ್ಚಿತ ಪಡೆದು ಜೈಲಿನಿಂದ ಆಚೆ ಬಂದ ಬಳಿಕ ಸನ್ಮಾರ್ಗದಲ್ಲಿ ನಡೆಯಲಿ, ರಾಮನ ಗುಣಗಳನ್ನ ಅನುಸರಿಸಲಿ ಎಂದು ಈ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಯ್ತು. ಇನ್ನು ತುಳಸಿ ಮಾಲೆ, ಮಂತ್ರಾಕ್ಷತೆ ಪಡೆದ ಕೆಲ ಕೈದಿಗಳು ಕೆಲ ಕಾಲ ಭಾವುಕರಾಗಿ ಕಣ್ಣೀರು ಹಾಕಿದ ಪ್ರಸಂಗವು ಸಹ ನಡೆಯಿತು ಎಂದು ಮುಖ್ಯ ಅರ್ಚಕರಾದ ಅನಂತ ಪ್ರಸಾದ್ ಮಾಹಿತಿ ನೀಡಿದ್ದಾರೆ.

Also Read: ಶ್ರೀರಾಮ ಪ್ರಾಣ ಪ್ರತಿಷ್ಠೆಗೆ ಮೈಸೂರು ಒಡೆಯರಿಗೆ ಅಧಿಕೃತ ಆಹ್ವಾನ, ಜ.21 ರಂದು ಅಯೋಧ್ಯೆ ಪ್ರವಾಸ

ಅದೇನೆ ಹೇಳಿ ದಿನ ಕಳೆದಂತೆ ರಾಮನ ಜಪ ದೇಶದಲ್ಲಿ ಹೆಚ್ಚುತ್ತಲೇ ಇದೆ. ಇತ್ತ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನ ಕಣ್ತುಂಬಿಕೊಳ್ಳಲು ಇಡೀ ದೇಶವೆ ಎದುರು ನೋಡುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಯಾರು ವಂಚಿತರಾಗಬಾರದೆಂದು ಹಿಂದೂ ಮುಖಂಡರು ಮುಂದಾಗಿದ್ದು ವಿಶೇಷವಾಗಿತ್ತು ಎಂದು ಇದರಲ್ಲಿ ಭಾಗಿಯಾಗಿದ್ದವರು ಅಭಿಪ್ರಾಯಪಟ್ಟರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:35 pm, Fri, 19 January 24

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ