AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಿಂದೆ 12 ಬಾರಿ ಬಂದಿದ್ದೆ, ಈಗ ಇದು 2ನೇ ಸಲ: ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದ ಸಿಎಂ

ಚಾಮರಾಜನಗರದ ಡಾ.ಅಂಬೇಡ್ಕರ್ ಮೈದಾನದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯನ್ನೆ ಅಸ್ತ್ರವಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ. ದಲಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರು ಉಳಿಯುತ್ತಾರೆ. ಆದರೆ, ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೊರಟಿರುವವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.

ಈ ಹಿಂದೆ 12 ಬಾರಿ ಬಂದಿದ್ದೆ, ಈಗ ಇದು 2ನೇ ಸಲ: ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದ ಸಿಎಂ
ಸಿದ್ದರಾಮಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Mar 12, 2024 | 7:00 PM

Share

ಚಾಮರಾಜನಗರ, ಮಾ.12: ಚಾಮರಾಜನಗರಕ್ಕೆ(Chamarajanagar) ಬಂದ್ರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳುತ್ತಾರೆ, ಯಾಕೆ ಚಾಮರಾಜನಗರದವರು ಮನುಷ್ಯರಲ್ವಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಪ್ರಶ್ನಿಸಿದ್ದಾರೆ. ಚಾಮರಾಜನಗರದ ಡಾ.ಅಂಬೇಡ್ಕರ್ ಮೈದಾನದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾನು ಈ ಹಿಂದೆ 12 ಭಾರಿ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೆ. ಈ ಭಾರಿ ಸರ್ಕಾರ ರಚನೆಯಾದ ಬಳಿಕ ಮತ್ತೆ ಎರಡನೇ ಭಾರಿ ಬಂದಿದ್ದೇನೆ. ಇಲ್ಲಿಗೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದಿದ್ದಾರೆ.

ಚಾಮರಾಜನಗರದಲ್ಲಿ ದಲಿತಾಸ್ತ್ರ ಪ್ರಯೋಗಿಸಿದ ಸಿಎಂ ಸಿದ್ದರಾಮಯ್ಯ

ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯನ್ನೆ ಅಸ್ತ್ರವಾಗಿಸಿಕೊಂಡ ಸಿಎಂ ಸಿದ್ದರಾಮಯ್ಯ, ಸಂವಿಧಾನ ಉಳಿದರೆ ನಾವು ಉಳಿಯುತ್ತೇವೆ. ದಲಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರು ಉಳಿಯುತ್ತಾರೆ. ಆದರೆ, ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೊರಟಿರುವವರಿಗೆ ತಕ್ಕ ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಬಿಜೆಪಿಗೆ ಮತ ಹಾಕಬೇಡಿ. ಸಮಾನತೆ ಏನಾದರೂ ಇದ್ದರೆ ಅದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಎನ್ನುವ ಮೂಲಕ ಸಿಎಂ ದಲಿತಾಸ್ತ್ರ ಪ್ರಯೋಗಿಸಿದ್ದಾರೆ.

ಇದನ್ನೂ ಓದಿ:ಟಿಕೆಟ್ ಸಿಗಲಾರದೆಂಬ ಅತಂಕದಲ್ಲಿರುವ ಸಂಸದ ಪ್ರತಾಪ್ ಸಿಂಹರನ್ನು ಲೇವಡಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಇನ್ನು ಚಾಮರಾಜನಗರ ಜಿಲ್ಲೆ ಒಂದು ಸಣ್ಣ ಜಿಲ್ಲೆ. ಆದ್ರೆ, ಇಲ್ಲಿನ ಜನ ಬಹಳ ಕಷ್ಟ ಜೀವಿಗಳು. ಆರ್ಥಿಕವಾಗಿ, ಸಾಮಾಜಿಕವಾಗಿ ಮೇಲೆ ಬರಬೇಕೆಂಬ ತುಡಿತ ಇರುವ ಜನ. ಕಾಂಗ್ರೆಸ್ ಕೂಡ ರಾಜ್ಯದ ಅಸಮಾನತೆ ತೊಲಗಿಸಬೇಕು, ಸಮಾನತೆ ತರಬೇಕೆಂಬ ಆಸೆಯ ಹೊಂದಿದೆ. ಸಂವಿಧಾನದ ಆಶಯ ಕೂಡ ಅದೇ ಆಗಿದೆ. ಆದ್ರೆ, ಸ್ವಾತಂತ್ರ ಬಂದು 70 ವರ್ಷ ಕಳೆದ್ರು ಅಸಮಾನತೆ ತೊಲಗಿಸಲು ಆಗಿಲ್ಲ. ಈ ದೇಶದಲ್ಲಿ ಅಸಮಾನತೆ ಇದೆ ಎಂದರೇ ಅದಕ್ಕೆ ಮನುಸ್ಮೃತಿ, ಜಾತಿ ವ್ಯವಸ್ಥೆ ಕಾರಣ. ಬುದ್ದನ ಕಾಲದಿಂದಲೂ ಇವತ್ತಿನವರೆಗೂ ಪ್ರಯತ್ನ ನಡೆಯುತ್ತಿದೆ. ಆದ್ರೆ, ಸಮಾನತೆ ತರಲು‌ ಆಗಿಲ್ಲ. ಸರ್ವರಿಗೂ ಸಮಪಾಲು, ಸಮಬಾಳು ಕೊಡಬೇಕೆಂಬುದು ನಮ್ಮ ಆಶಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Tue, 12 March 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ