AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪುತ್ರನಿಗೆ ಎಂಎಲ್​ಸಿ ಟಿಕೆಟ್​ ಪಕ್ಕಾ: ಖುದ್ದು ಸುಳಿವು ನೀಡಿದ ಯತೀಂದ್ರ

ವಿಧಾನಸಭೆಯಿಂದ ವಿಧಾನಪರಿಷತ್ ಪ್ರವೇಶಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಲಾಬಿ ಜೋರಾಗಿದೆ. ಪರಿಷತ್‌ನ 7 ಸ್ಥಾನಕ್ಕೆ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಈ ಆಕಾಂಕ್ಷಿಗಳನ್ನ ಫಿಲ್ಟರ್ ಮಾಡೋದೇ ಕಾಂಗ್ರೆಸ್ ಪಡೆಗೆ ತಲೆನೋವಾಗಿದೆ. ಹೀಗಾಗಿ ಹೈಕಮಾಂಡ್ ಕದ ತಟ್ಟಿದ್ದ ರಾಜ್ಯ ನಾಯಕರು, ದೆಹಲಿ ನಾಯಕರ ಜೊತೆ ಚರ್ಚೆ ನಡೆಸಿ, ಅಂತಿಮವಾಗಿ 65 ಜನರ ಲಿಸ್ಟ್ ರೆಡಿ ಮಾಡಿ ಕೊಟ್ಟಿರುವುದಾಗಿ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಆದ್ರೆ, ಇದರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರಿಗೆ ಎಂಎಲ್​ಸಿ ಟಿಕೆಟ್​ ಫಿಕ್ಸ್ ಆಗಿದೆ. ಈ ಬಗ್ಗೆ ಸ್ವತಃ ಯತೀಂದ್ರ ಸಿದ್ದರಾಮಯ್ಯ ಅವರು ಸ್ಫೋಟಕ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಸಿದ್ದರಾಮಯ್ಯ ಪುತ್ರನಿಗೆ ಎಂಎಲ್​ಸಿ ಟಿಕೆಟ್​ ಪಕ್ಕಾ: ಖುದ್ದು ಸುಳಿವು ನೀಡಿದ ಯತೀಂದ್ರ
ಯತೀಂದ್ರ ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on: May 31, 2024 | 6:58 PM

Share

ಮೈಸೂರು, (ಮೇ 31): ವಿಧಾನಸಭೆಯಿಂದ ವಿಧಾನಪರಿಷತ್​ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಆಡಳಿತರೂಢ ಕಾಂಗ್ರೆಸ್​​ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆದಿದೆ. ಒಟ್ಟು 13 ಸ್ಥಾನಗಳ ಪೈಕಿ ಕಾಂಗ್ರೆಸ್​ ಪಾಲಿನ ಏಳು ಸ್ಥಾನಗಳಿಗೆ ನೂರಾರು ಆಕಾಂಕ್ಷಿಗಳು ಮೇಲ್ಮನೆ ಪ್ರವೇಶಕ್ಕಾಗಿ ಕಸರತ್ತು ನಡೆಸಿದ್ದಾರೆ. ಆದ್ರೆ, ಯಾರನ್ನು ಆಯ್ಕೆ ಮಾಡಬೇಕೆಂದು ಸಿಎಂ, ಡಿಸಿಎ. ಚರ್ಚೆ ಮಾಡಿ ಅಂತಿಮಪಟ್ಟಿಯನ್ನು ಹೈಕಮಾಂಡ್​​ಗೆ ನೀಡಿ ಬಂದಿದ್ದಾರೆ. ಆದ್ರೆ, ಇದರ ಮಧ್ಯೆ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಎಂಎಲ್​ಸಿ ಟಿಕೆಟ್​ ಫಿಕ್ಸ್​ ಆಗಿದೆ. ಈ ಬಗ್ಗೆ ಸ್ವತಃ ಯತೀಂದ್ರ ಸಿದ್ದರಾಮಯ್ಯನವರೇ ಸುಳಿವು ಕೊಟ್ಟಿದ್ದಾರೆ. ನಾನು ಎಂಎಲ್ ಸಿಯಾಗಿ ಶಾಸಕನಾಗಿ ಅನುದಾನ ಹಾಕಿಕೊಡುತ್ತೇನೆ ಎಂದು ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. ಹೈಕಮಾಂಡ್​ ಘೋಷಣೆಗೂ ಮುನ್ನವೇ ಯತೀಂದ್ರ ಎಂಎಲ್​ಸಿ ಟಿಕೆಟ್​ ತಮಗೆ ಸಿಗುವುದು ಖಚಿತ ಎಂದು ಹೇಳಿರುವುದು ಸಂಚಲನಕ್ಕೆ ಕಾರಣವಾಗಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಇಂದು (ಮೇ 31) ಟಿ ನರಸೀಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಆಗಮಿಸಿದ್ದ ಯತೀಂದ್ರ ಅವರಿಗೆ ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿದರು. ಈ ವೇಳೆ ನಾನು ಎಂಎಲ್​ಸಿ ಆಗಿ ಶಾಸಕನಾಗುತ್ತೇನೆ. ಆಗ ಶಾಸಕರ ಅನುದಾನದಲ್ಲಿ ಹಣ ಹಾಕುತ್ತೇನೆ. ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರುವ ಕಾರಣ ಅವರ ಬಳಿ ಮಾತನಾಡಿ ಅವರಿಂದಲೂ ಅನುದಾನ ಕೊಡುಸ್ತೇನೆ ಎಂದು ಭರವಸೆ ನೀಡಿದರು.ಈ ಮೂಲಕ ಪರೋಕ್ಷವಾಗಿ ತಾವು ಎಂಎಲ್​ಸಿ ಆಗುವುದು ಖಚಿತ ಎನ್ನುವ ಸುಳಿವು ನೀಡಿದ್ದಾರೆ.

ಇದನ್ನೂ ಓದಿ: ಪರಿಷತ್​​ನಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್ ಹೋರಾಟ: ಬಿಜೆಪಿ ಒಳಜಗಳ ಶಮನಕ್ಕೆ ಬಿಎಲ್ ಸಂತೋಷ್ ಅಖಾಡಕ್ಕೆ

ಯತೀಂದ್ರ ಪರಿಷತ್​ ಎಂಟ್ರಿ ಖಚಿತಪಡಿಸಿದ ಡಿಕೆಶಿ

ದೆಹಲಿಯಿಂದ ಬಂದ ಬಳಿಕ ನಿನ್ನೆ(ಮೇ 30) ಅಷ್ಟೇ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ದೆಹಲಿಗೆ ಹೋಗಿ ಪಟ್ಟಿ ನೀಡಿ ಬಂದಿದ್ದೇವೆ. 11 ಸ್ಥಾನಕ್ಕೆ 300 ಆಕಾಂಕ್ಷಿಗಳು ಇದ್ದರು. ನಾವು 65 ಮಂದಿಯ ಶಾರ್ಟ್​ಲಿಸ್ಟ್​ ಕೊಟ್ಟು ಬಂದಿದ್ದೇವೆ. ನಮ್ಮ ಅಭಿಪ್ರಾಯವನ್ನು ಹೇಳಿದ್ದೇವೆ. ಯತೀಂದ್ರ ಅವರದ್ದು ಮೊದಲೇ ಕಮಿಟ್ ಮೆಂಟ್ ಇದೆ. ಹಾಗಾಗಿ ಅವರಿಗೆ ಟಿಕೆಟ್ ನೀಡುವುದಕ್ಕೆ ಹೈಕಮಾಂಡ್ ಕೂಡ ಸಮ್ಮತಿ ನೀಡಿದೆ. ಇವರ ಜೊತೆಗೆ ವಿಧಾನಸಭಾ ಟಿಕೆಟ್ ತ್ಯಾಗ ಮಾಡಿದ ಹಿರಿಯರು, ಸೋತವರು ಇದ್ದಾರೆ. ಬೋಸುರಾಜ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದಿದ್ದರು. ಈ ಮೂಲಕ ಯತೀಂದ್ರ ಅವರಿಗೆ ಎಂಎಲ್​ಸಿ ಸ್ಥಾನ ಸಿಗುವುದು ಖಚಿತ ಎನ್ನುವ ಅರ್ಥದಲ್ಲಿ ಹೇಳಿದ್ದರು.

ಪರಿಷತ್‌ ಚುನಾವಣೆಯಲ್ಲಿ 11 ಕ್ಷೇತ್ರಗಳ ಪೈಕಿ ವಿಧಾನಸಭೆಯಲ್ಲಿನ ಸಂಖ್ಯಾಬಲ ಆಧಾರದಲ್ಲಿ ಪಕ್ಷಕ್ಕೆ ಗೆಲ್ಲುವ ಅವಕಾಶವಿರುವ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಲು ಕಸರತ್ತು ನಡೆದಿದೆ. ಮೂಲಗಳ ಪ್ರಕಾರಣ ಯತೀಂದ್ರ ಫೈನಲ್‌ ಆಗಿದ್ದು, ಉಳಿದ ಆರು ಸ್ಥಾನಗಳಿಗೆ ಗೊಂದಲ ಮುಂದುವರಿದಿದೆ.

ಕಾಂಗ್ರೆಸ್‌ ಗೆಲ್ಲಲು ಸಾಧ್ಯವಿರುವ ಏಳು ಮಂದಿಯ ಆಯ್ಕೆ ವಿಚಾರ ಈಗ ಕ್ಲೈಮಾಕ್ಸ್‌ ಹಂತ ಮುಟ್ಟಿದೆ. ಚೆಂಡು ಈಗ ಹೈಕಮಾಂಡ್‌ ಅಂಗಳದಲ್ಲಿದೆ. ಏಕೆಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಲ ವರ್ಗಕ್ಕೆ ಮಾತ್ರ ಒಮ್ಮತದ ಅಭ್ಯರ್ಥಿ ಸೂಚಿಸಿದ್ದು, ಉಳಿದ ವರ್ಗಗಳ ವಿಚಾರದಲ್ಲಿ ಇಬ್ಬರೂ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಜೂನ್ 13 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಅಂತಿಮವಾಗಿ ಹೈಕಮಾಂಡ್​ ಯಾರಿಗೆ ಮಣೆಹಾಕುತ್ತೆ ಎನ್ನುವುದು ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​