AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗ

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗವಾಗಿದೆ.

ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗ
ಚಾಮುಲ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
TV9 Web
| Edited By: |

Updated on:Jun 14, 2022 | 10:42 PM

Share

ಚಾಮರಾಜನಗರ: ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್) ಆಡಳಿತ ಮಂಡಳಿ ಚುನಾವಣೆ ಮುಗಿದಿದ್ದು ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ 4, ಬಿಜೆಪಿ 2, ಪಕ್ಷೇತರ 2, ಜೆಡಿಎಸ್ 1 ಸ್ಥಾನ ಪಡೆದಿದೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಶಾಸಕ ನಿರಂಜನ್ ಕುಮಾರ್ಗೆ ಮುಖಭಂಗವಾಗಿದೆ. ಬಂಡಾಯ ಬಿಜೆಪಿ ಅಭ್ಯರ್ಥಿ ಸುನಿಲ್, ಕಾಂಗ್ರೆಸ್ನ ನಂಜುಂಡ ಪ್ರಸಾದ್ಗೆ ಜಯ ಸಿಕ್ಕಿದೆ. ಮಹಿಳಾ ಕ್ಷೇತ್ರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಪುತ್ರಿ ಶೀಲಾಗೆ ಗೆಲುವಾಗಿದೆ.

ಸಹಕಾರಿ ಕ್ಷೇತ್ರದ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ನಡೆಯದಿದ್ದರು ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನ ಕಣಕ್ಕಿಳಿಸುವುದರಿಂದ ಇತ್ತೀಚೆಗೆ ಈ ಚುನಾವಣೆಗಳು ಸಾಕಷ್ಟು ಜಿದ್ದಾ ಜಿದ್ದಾನಿಂದ ನಡೆಯುತ್ತವೆ. ಸದ್ಯ ಮೈಸೂರು ಜಿಲ್ಲಾ ಹಾಲು ಒಕ್ಕೂಟದಿಂದ ಬೇರ್ಪಟ್ಟ ಬಳಿಕ ಎರಡನೇ ಬಾರಿಗೆ ನಡೆದ ಚುನಾವಣೆ ಇದಾಗಿದೆ. ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಹನೂರು ತಾಲ್ಲೂಕುಗಳ ತಲಾ ಎರಡು, ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ತಲಾ ಒಂದು ಸಾಮಾನ್ಯ ಸ್ಥಾನಗಳಿಗೆ ಹಾಗೂ ಒಂದು ಮಹಿಳಾ ಮೀಸಲು ಸ್ಥಾನ ಸೇರಿ ಒಟ್ಟು ಒಂಬತ್ತು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿತ್ತು.‌ 9 ಸ್ಥಾನಗಳಲ್ಲಿ 4 ಸ್ಥಾನಗಳನ್ನ ಕಾಂಗ್ರೆಸ್ ಗೆದ್ದರೆ, 2 ಸ್ಥಾನ‌ ಬಿಜೆಪಿ, 2 ಸ್ಥಾನ ಪಕ್ಷೇತರರು ಹಾಗೂ ಒಂದು ಸ್ಥಾನವನ್ನ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆದ್ದುಕೊಂಡಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮಮತಾ ಬ್ಯಾನರ್ಜಿ ಕರೆದಿರುವ ಸಭೆಯಲ್ಲಿ ಹೆಚ್.ಡಿ. ದೇವೆಗೌಡ ಮತ್ತು ಹೆಚ್​​. ಡಿ ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ

ಸದ್ಯ ಈ ಚುನಾವಣೆ ತಮ್ಮ ಬೆಂಬಲಿತ ಅಭ್ಯರ್ಥಿಯನ್ನ ಗೆಲ್ಲಿಸಿಕೊಂಡು ಬರಲು ಕ್ಷೇತ್ರದ ಶಾಸಕರುಗಳು ಸಾಕಷ್ಟು ಜಿದ್ದಾಜಿದ್ದಿನ ಪೈಪೋಟಿ ನಡೆಸಿದ್ರು. ಅದರಲ್ಲು ಚಾಮರಾಜನಗರ ಕ್ಷೇತ್ರ ಶಾಸಕ ಪುಟ್ಟರಂಗಶೆಟ್ಟಿ ತಮ್ಮ ಪುತ್ರಿಯನ್ನ ಮಹಿಳಾ ಮೀಸಲು ಸ್ಥಾನದಿಂದ ಕಣಕ್ಕಿಳಿಸಿದ್ದರು. ಇದರಲ್ಲಿ ಶಾಸಕರು ತಮ್ಮ ಪುತ್ರಿ ಶೀಲಾರನ್ನ‌ ಗೆಲ್ಲಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ‌. ಇನ್ನು ಗುಂಡ್ಲುಪೇಟೆ ಕ್ಷೇತ್ರದ ಬಿಜೆಪಿ ಶಾಸಕ ನಿರಂಜನ್ ಕುಮಾರ್ ಗೆ ಈ ಚುನಾವಣೆ ಸಾಕಷ್ಟು ಪ್ರತಿಷ್ಟೆಯಾಗಿತ್ತು. ತಮ್ಮ ರಾಜಕೀಯ ಎದುರಾಳಿಯಾಗಿದ್ದ ಮಾಜಿ ಸಚಿವ ದಿ.ಹೆಚ್.ಎಸ್.ಮಹದೇವ ಪ್ರಸಾದ್ ಸಹೋದರ ನಂಜುಂಡ ಪ್ರಸಾದ್ ಅಭ್ಯರ್ಥಿಯಾಗಿದ್ದರು. ಜೊತೆಗೆ ಬಿಜೆಪಿ ಬಂಡಾಯವಾಗಿ ಮೂಡುಗೂರು ಸುನೀಲ್ ಕಣದಲ್ಲಿದ್ದರು. ಇಬ್ಬರನ್ನು ಶತಾಯಗತಾಯ ಸೋಲಿಸಿ ಕ್ಷೇತ್ರದಲ್ಲಿ ಮತ್ತಷ್ಟು ಹಿಡಿತ ಸಾಧಿಸುವ ಪ್ಲಾನ್ ಮಾಡಿದ್ರು. ಆದ್ರೆ ಶಾಸಕರ ಲೆಕ್ಕಾಚಾರ ಚುನಾವಣೆಯಲ್ಲಿ ಉಲ್ಟಾ ಆಗಿದ್ದು ನಂಜುಂಡ ಪ್ರಸಾದ್ ಹಾಗೂ ಸುನೀಲ್ ಇಬ್ಬರು‌ ಗೆಲುವು ಸಾಧಿಸಿದ್ದಾರೆ.

ವರದಿ: ದಿಲೀಪ್ ಚೌಡಹಳ್ಳಿ, ಟಿವಿ9 ಚಾಮರಾಜನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಾಮರಾಜನಗರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:34 pm, Tue, 14 June 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್