ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಈ ನೀರು ರೈತರ ಜಮೀನುಗಳಿಗಳಿಗಷ್ಟೇ ಅಲ್ಲದೇ ದಾಸನಪುರ,ಹರಳೆ ಗ್ರಾಮದ ಮೂಲಕ ನೇರವಾಗಿ ಕಾವೇರಿ ನದಿಯ ಒಡಲನ್ನು ಸೇರುತ್ತಿದೆ.ಕಾವೇರಿ ಜನರ ಜೀವನಾಡಿಯಾಗಿದ್ದು,ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡಬೇಕಾದ ಜನಪ್ರತಿನಿಧಿಗಳು,ಅಧಿಕಾರಿಗಳ ಬೇಜವಾಬ್ದಾರಿ,ನಿರ್ಲಕ್ಷ್ಯತನದಿಂದ ಕಾವೇರಿ ಮಲಿನವಾಗ್ತಿದ್ದಾಳೆ

ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ
ಕಾವೇರಿ ನೀರನ್ನ ಕುಡಿಯುತ್ತಿರುವ ರಾಜಧಾನಿ ಬೆಂಗಳೂರಿನ ಜನರೇ... ಮಿಸ್ ಮಾಡ್ದೆ ಈ ಸ್ಟೋರಿ ಓದಿ
Follow us
| Updated By: ಸಾಧು ಶ್ರೀನಾಥ್​

Updated on:Nov 21, 2023 | 4:44 PM

ರಾಜಧಾನಿ ಬೆಂಗಳೂರಿನ ಜನರೇ ನೀವು ಕಾವೇರಿ ನೀರನ್ನ ಕುಡಿಯುತ್ತಿದ್ದೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿನ ನೋಡಲೇ ಬೇಕು. ಜೀವ ಜಲ ಕಾವೇರಿ ವಿಷಜಲವಾಗಿ (Contaminated cauvery water) ಹೇಗೆ ಬದಲಾಗುತ್ತಿದೆ ಎಂಬ ಅಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ. ಯುಜಿಡಿ ನೀರನ್ನ ಕಾವೇರಿ ನದಿಗೆ ಬಿಟ್ಟು ಕೋಟ್ಯಾಂತರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವುದು ಟಿವಿ 9 ವರದಿಯಿಂದ ಈಗ ಬಟಾಬಯಲಾಗುತ್ತಿದೆ. ಕರುನಾಡಿನ ಜೀವನಾಡಿ ಎಂದ್ರೆ ಅದು ಕಾವೇರಿ. ಈ ಕಾವೇರಿ ನದಿಯನ್ನು ಕಲುಷಿತಗೊಳಿಸುವ ಕೆಲಸಕ್ಕೆ ಕೊಳ್ಳೇಗಾಲ ನಗರಸಭೆ ( Kollegala, Chamrajnagar) ಮುಂದಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರಭಾಗದಲ್ಲಿರುವ ಒಳಚರಂಡಿ ಮತ್ತು ಕೊಳಚೆ ನೀರು ಶುದ್ದಿಕರಣ ಘಟಕದಲ್ಲಿ ನೀರು ಸರಿಯಾಗಿ ಶುದ್ಧೀಕರಣವಾಗ್ತಿಲ್ಲ. ಈ ಅಶುದ್ದ ನೀರನ್ನೂ ಕುಪ್ಪಂ ಕಾಲುವೆ ಮುಖಾಂತರ ಹರಿಯಬಿಡಲಾಗ್ತಿದೆ.

ಈ ನೀರು ರೈತರ ಜಮೀನುಗಳಿಗಳಿಗಷ್ಟೇ ಅಲ್ಲದೇ ದಾಸನಪುರ,ಹರಳೆ ಗ್ರಾಮದ ಮೂಲಕ ನೇರವಾಗಿ ಕಾವೇರಿ ನದಿಯ ಒಡಲನ್ನು ಸೇರುತ್ತಿದೆ.ಕಾವೇರಿ ಜನರ ಜೀವನಾಡಿಯಾಗಿದ್ದು,ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡಬೇಕಾದ ಜನಪ್ರತಿನಿಧಿಗಳು,ಅಧಿಕಾರಿಗಳ ಬೇಜವಾಬ್ದಾರಿ,ನಿರ್ಲಕ್ಷ್ಯತನದಿಂದ ಕಾವೇರಿ ಮಲಿನವಾಗ್ತಿದ್ದಾಳೆಂದು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

ಇನ್ನು ಈ ಕಾವೇರಿ ನದಿ ಹಲವು ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಆಸರೆಯಾಗಿದೆ.ಪ್ರಮುಖವಾಗಿ ಮಂಡ್ಯ, ರಾಮನಗರ, ಬೆಂಗಳೂರು ಜಿಲ್ಲೆಗಳಿಗೆ ಈ ನೀರನ್ನೂ ಕುಡಿಯುವ ಉದ್ದೇಶದಿಂದ ಬಳಕೆ ಮಾಡಿಕೊಳ್ಳುತ್ತಿದ್ದಾರೆ.ಈಗಾಗ್ಲೇ ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿ ಕುಡಿಯುವ ನೀರಿಗಾಗಿ ನೆರೆ ರಾಜ್ಯ ತಮಿಳುನಾಡು ಜೊತೆಗೆ ಫೈಟ್ ಮಾಡ್ತಿದ್ದೇವೆ.ಇದರ ಗಂಭೀರತೆ ಅರಿಯದ ನಗರಸಭೆ ಅಧಿಕಾರಿಗಳು ಕಲುಷಿತ ನೀರನ್ನು ಕಾವೇರಿ ನದಿಗೆ ಹರಿಬಿಟ್ಟು ಜಾಣ ಕಿವುಡುತನ ಪ್ರದರ್ಶಿಸುತ್ತಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಕಲುಷಿತಗೊಂಡ ಕಾವೇರಿ ನದಿ, ಜನರಿಗೆ ಶುರುವಾಯ್ತು ಚರ್ಮರೋಗ

ಅಲ್ಲದೇ ಸ್ಥಳೀಯವಾಗಿಯೂ ಕೂಡ ಜನರಲ್ಲಿ ಈ ನೀರಿನಿಂದ ಅನಾರೋಗ್ಯ ಸಂಭವಿಸಿದೆ.ಸದ್ಯ ಕಾವೇರಿ ಪಾತ್ರದಲ್ಲಿ ನೀರು ಹರಿಯುತ್ತಿರುವುದರಿಂದ ಅದು ಕಣ್ಣಿಗೆ ಕಾಣ್ತಿಲ್ಲ.ನೀರು ಹರಿಯೋದು ನಿಂತರೆ ಮಲಮೂತ್ರದ ನೀರು ನಿಂತಿರುತ್ತೆ.ಇದರಿಂದ ಜಲಚರ,ಜಾನುವಾರುಗಳಿಗೂ ತೊಂದರೆಯಾಗಿದೆ ಅಂತಾರೆ.

ಒಟ್ನಲ್ಲಿ ಕಾವೇರಿ ನದಿಯ ಪಾವಿತ್ರ್ಯತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಇದನ್ನು ಮರೆತು ನದಿಯ ಒಡಲಿಗೆ ಒಳಚರಂಡಿ, ಮಲಮೂತ್ರದ ನೀರು ಹರಿಯ ಬಿಡುವ ಮೂಲಕ ಶುದ್ಧ ಜೀವಜಲವನ್ನು ಹಾಳು ಮಾಡ್ತಿದ್ದಾರೆ.ಪವಿತ್ರ ಕಾವೇರಿ ನದಿಯನ್ನು ಅಶುಚಿತ್ವಗೊಳಿಸುವುದನ್ನು ನಿಲ್ಲಿಸಿ ಅಂತಾ ಅಧಿಕಾರಿಗಳ ಬಳಿ ಮನವಿ ಮಾಡ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:40 pm, Tue, 21 November 23

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ