AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಢನಂಬಿಕೆ: ಮಾಂತ್ರಿಕನ ಮಾತು ಕೇಳಿ ಮನೆಯಲ್ಲಿ ಬಾವಿ ತೋಡಿದ್ರು, ಸಾವಿರಾರು ರೂಪಾಯಿ ಕಳ್ಕೊಂಡು ಊರು ಬಿಟ್ರು

ಅವ್ರಿಬ್ರು ಬಡ ದಂಪತಿ ಬಡತನ ಇದ್ರೂ ಹೇಗೋ ಜೀವನ ನಡೀತಿತ್ತು. ಆದ್ರೆ, ಅವನೊಬ್ಬ ಮಾಂತ್ರಿಕ ಅವರ ತಲೆ ಕೆಡಿಸಿದ್ದ. ಮನೆಯಲ್ಲಿ ನಿಧಿ ಅಡಗಿದೆ ಅಂತೇಳಿದ್ದ ಅವನ ಮಾತು ನಂಬಿದವರು, ಮನೆಯನ್ನೇ ಬಿಡುವಂತಾಗಿದೆ.

ಮೂಢನಂಬಿಕೆ: ಮಾಂತ್ರಿಕನ ಮಾತು ಕೇಳಿ ಮನೆಯಲ್ಲಿ ಬಾವಿ ತೋಡಿದ್ರು, ಸಾವಿರಾರು ರೂಪಾಯಿ ಕಳ್ಕೊಂಡು ಊರು ಬಿಟ್ರು
ಮನೆಯಲ್ಲಿ ಬಾವಿ ತೋಡಿ ಪೂಜೆ ಮಾಡಿರುವ ದಂಪತಿ
TV9 Web
| Edited By: |

Updated on: Sep 21, 2021 | 8:08 AM

Share

ಚಾಮರಾಜನಗರ: ಮೂಢ ನಂಬಿಕೆ ಅನ್ನೋದು ತಲೆಗೆ ಹತ್ತಿಬಿಟ್ರೆ ಏನಾಗುತ್ತೆ ಅನ್ನೋದಕ್ಕೆ ಇದೇ ಸಾಕ್ಷಿ. ಅಂದಹಾಗೇ, ಚಾಮರಾಜನಗರದ ಅಮ್ಮನಪುರ ಗ್ರಾಮದ ಸೋಮಣ್ಣ ಅನ್ನೋರ ಈ ಮನೆಯಲ್ಲಿ ಕೆಲ ದಿನಗಳ ಹಿಂದೆ ಹಾವುಗಳು ಕಾಣಿಸಿಕೊಂಡಿದ್ವು ಇದರಿಂದ, ಹೆದರಿದ ಮನೆವರು ಕೇರಳ ಮೂಲದ ಮಾಂತ್ರಿಕನ ಬಳಿ ಜ್ಯೋತಿಷ್ಯ ಕೇಳಿದ್ದಾರೆ. ಆದ್ರೆ, ಆ ಆಸಾಮಿ, ನಿಮ್ಮ ಮನೆಯಲ್ಲಿ ನಿಧಿಯಿದೆ. ಸರ್ಪಗಳು ನಿಧಿ ಕಾಯುತ್ತಿದೆ ಅಂತ ಪುಂಗಿ ಬಿಟ್ಟಿದ್ದಾನೆ. ಈ ಮಾತನ್ನೇ ನಂಬಿ ವಾರಗಟ್ಟಲೇ ದಂಪತಿ ಪೂಜೆ ಮಾಡಿದ್ದಾರೆ. 10 ದಿನ ಕಾಲ ಅಕ್ಕಪಕ್ಕದವ್ರಿಗೂ ಗೊತ್ತಾಗಂತೆ ಮನೆಯಲ್ಲಿ ಗುಂಡಿ ತೆಗೆದಿದ್ದಾರೆ. ಆದ್ರೆ, 20 ಅಡಿ ಆಳ ತೆಗೆದ್ರೂ, ಮಣ್ಣು ಬಿಟ್ರೆ ಇನ್ನೇನೂ ಸಿಕ್ಕಿಲ್ಲ.

ಇನ್ನು, ಹತ್ತು ದಿನವಾದ್ರೂ ಸೋಮಣ್ಣ ಮನೆಯಿಂದ ಹೊರಬಾರದೆ ಇದದ್ದು, ಸ್ಥಳೀಯರಿಗೆ ಆತಂಕ ಹುಟ್ಟಿಸಿತ್ತು. ನಂತರ, ಪೊಲೀಸರಿಗೆ ವಿಷ್ಯ ಮುಟ್ಟಿಸಿದ್ರು. ಖಾಕಿ ಟೀಂ ಸ್ಥಳಕ್ಕೆ ಬಂದಾಗಲೇ, ನಿಧಿ ವಿಚಾರ ಬಯಲಾಗಿದೆ. ಫೋರ್ ಬೈ ಫೋರ್ ಅಳತೆಯ ಬಾವಿ ತೋಡಿ, ಅಡುಗೆ ಮನೆಗೆ ಮಣ್ಣು ಸುರಿದಿದ್ರು. ಮನೆಯಲ್ಲಿ ಕಾಲಿಡಲು ಸಾಧ್ಯವಾಗದಷ್ಟು ಮಣ್ಣು ಆವರಿಸಿತ್ತು. ಯಾವಾಗ ತಾನು ಮೋಸ ಹೋಗಿದ್ದೀನಿ ಅನ್ನೋದು ಗೊತ್ತಾಯ್ತು, ಸೋಮಣ್ಣ ಊರನ್ನೇ ಬಿಟ್ಟಿದ್ದಾನೆ.. ಇನ್ನು, ಮಂತ್ರವಾದಿಯನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಏನೇ ಹೇಳಿ, ಬಡತನ ಇದ್ರೂ ನೆಮ್ಮದಿಯಾಗಿ ಬದುಕು ದೂಡ್ತಿದ್ರು.. ಆದ್ರೆ, ಮಂತ್ರವಾದಿಯ ಮಾತು ಕೇಳಿ, ಮನೆಯನ್ನೇ ಅಗೆದು ಹಾಕಿದ್ದಾರೆ.. ಮಾಡಿರೋ ಕೆಲಸದಿಂದ ಜನರಿಗೆ ಮುಖ ತೋರಿಸಲಾಗಿದೆ ಊರನ್ನೇ ಬಿಟ್ಟಿದ್ದಾರೆ.

ಇದನ್ನೂ ಓದಿ: ಕೂತ ಜಾಗದಲ್ಲೇ ಲಕ್ಷ ಲಕ್ಷ ಗಳಿಸೋ ಆಮಿಷ, ಟವರ್ ಟ್ರೇಡಿಂಗ್’ ಆ್ಯಪ್ ಮೂಲಕ ಜನರಿಗೆ ಮೋಸ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ