ಚಾಮರಾಜನಗರ: ಸಿಡಿಮದ್ದು ಸ್ಫೋಟಗೊಂಡು ಹಸುಗಳಿಗೆ ಗಂಭೀರ ಗಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ಮನಕಲಕುವ ಘಟನೆಯೋಂದು ನಡೆದಿದೆ. ಕಿಡಿಗೇಡಿಗಳು ಇಟ್ಟ ಸಿಡಿಮದ್ದು ಸ್ಫೋಟಗೊಂಡು ಎರಡು ಹಸುಗಳು ಗಾಯಗೊಂಡಿವೆ. ಸಿಡಿಮದ್ದು ಇಟ್ಟ ಕಿಡಿಗೇಡಿಗಳ ವಿರುದ್ಧ ಹಸುಗಳ ಒಡತಿ ಅಕ್ಕಮ್ಮ ಹಿಡಿಶಾಪ ಹಾಕಿದ್ದಾರೆ.

ಚಾಮರಾಜನಗರ: ಸಿಡಿಮದ್ದು ಸ್ಫೋಟಗೊಂಡು ಹಸುಗಳಿಗೆ ಗಂಭೀರ ಗಾಯ
ಗಾಯಗೊಂಡಿರುವ ಹಸು
Edited By: ವಿವೇಕ ಬಿರಾದಾರ

Updated on: Aug 20, 2024 | 3:04 PM

ಚಾಮರಾಜನಗರ, ಆಗಸ್ಟ್​ 20: ಸಿಡಿಮದ್ದು ಸ್ಫೋಟಗೊಂಡು ಎರಡು ಹಸುಗಳು (Cows) ಗಂಭೀರವಾಗಿ ಗಾಯಗೊಂಡಿರುವ ಘಟನೆ ಹನೂರು (Hanur) ತಾಲೂಕಿನ ಕೌದಳ್ಳಿ ಗ್ರಾಮದಲ್ಲಿ ನಡೆದಿದೆ. ಕೌದಳ್ಳಿ ಗ್ರಾಮದ ಅಕ್ಕಮ್ಮ ಎಂಬುವರಿಗೆ ಸೇರಿದ ಹಸುಗಳು ಮೇಯಲು ಹುಲ್ಲಿಗೆ ಬಾಯಿ ಹಾಕುತ್ತಿದ್ದಂತೆ ಕಿಡಿಗೇಡಿಗಳು ಇಟ್ಟಿದ್ದ ಸಿಡಿಮದ್ದು ಸ್ಫೋಟಗೊಂಡಿದೆ. ಇದರಿಂದ ಹಸುಗಳ ಮುಖ, ದೇಹದ ಭಾಗಕ್ಕೆ ಗಂಭೀರ ಗಾಯವಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಸಿಡಿಮದ್ದು ಇಟ್ಟ ಕಿಡಿಗೇಡಿಗಳ ವಿರುದ್ಧ ಹಸುಗಳ ಒಡತಿ ಅಕ್ಕಮ್ಮ ಹಿಡಿಶಾಪ ಹಾಕಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಹಿಂದೆ ಕೇರಳದ ಮಲ್ಲಪ್ಪುರಂ ಗ್ರಾಮದಲ್ಲಿ ಇದೇ ರೀತಿಯಾದ ಘಟನೆ ನಡೆದಿತ್ತು. ಹೆಣ್ಣು ಆನೆಯೊಂದು ನದಿ ಪಾತ್ರದಲ್ಲಿ ಆಹಾರ ಅರಸಿ ಮಲ್ಲಪ್ಪುರಂ ಗ್ರಾಮಕ್ಕೆ ಬಂದಿತ್ತು. ಈ ವೇಳ ಸ್ಥಳೀಯರು ತಿನ್ನಲು ಆನೆಗೆ ಸಿಡಿಮದ್ದುಗಳನ್ನು ಇರಿಸಿದ್ದ ಅನಾನಸ್​ ಹಣ್ಣನ್ನು ನೀಡಿದ್ದರು. ಇದನ್ನು ತಿಳಿಯ ಮೂಕ ಜೀವಿ ಆನೆ ಅನಾನಸ್​ ಹಣ್ಣನ್ನು ಬಾಯಿಗೆ ಹಾಕಿಕೊಂಡಿತ್ತು. ತಕ್ಷಣವೇ ಸಿಡಿಮದ್ದು ಸ್ಫೋಟಗೊಂಡಿತ್ತು. ಇದರಿಂದ ಆನೆಯ ಬಾಯಿಯಿಂದ ರಕ್ತ ಹಿರಿಯಿತು. ಇದೇ ನೋವಿನಲ್ಲಿ ಆನೆ 2020ರ ಮೇ 27 ರಂದು ನಿಧನವಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:23 pm, Tue, 20 August 24

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us