ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ.

ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Jul 18, 2023 | 12:39 PM

ಚಾಮರಾಜನಗರ: ಸೈಬರ್ ಚೋರರ(Cyber Crime) ಚಿತ್ತ ಈಗ ಚಾಮರಾಜನಗರ ಜಿಲ್ಲೆಯತ್ತ ನೆಟ್ಟಿದೆ. ಏಕೆಂದರೆ ಕಳೆದ 7 ತಿಂಗಳಲ್ಲಿ ಬರೋಬ್ಬರಿ 29 ಎಫ್​ಐಆರ್​ ಕೇಸ್​ಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ಟೀವ್ ಆಗಿರುವವರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡಿ ಈ ಸೈಬರ್ ಚೋರರು ಪಂಗನಾಮ ಹಾಕುತ್ತಾರೆ. ಫಾರಿನ್ ಗಿಫ್ಟ್ ಆಮೀಶವೊಡ್ಡಿ ಲಕ್ಷ ಲಕ್ಷ ಹಣ ಪೀಕುತ್ತಾರೆ. ಅಲ್ಲದೆ ಬೆಂಗಳೂರಿನಲ್ಲೂ ಸೈಬರ್ ಖದೀಮರು ಹೊಸ ಹೊಸ ಮಾರ್ಗದಲ್ಲಿ ಜನರನ್ನು ವಂಚಿಸಲು ನಿಂತಿದ್ದಾರೆ. ಹೀಗಾಗಿ ಪೊಲೀಸರು(Police) ಸಾರ್ವಜನಿಕರನ್ನು ಎಚ್ಚರಿಸಲು ಮುಂದಾಗಿದ್ದಾರೆ.

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ. ಯುವಕ ಯುವತಿಯರನ್ನೆ ಟಾರ್ಗೆಟ್ ಮಾಡಿ ವಂಚನೆ ಮಾಡ್ತಿದ್ದಾರೆ. ಹೀಗಾಗಿ ಸೈಬರ್ ವಂಚನೆಗೆ ಒಳಗಾದವರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೂಚನೆ ನೀಡಿದ್ದಾರೆ. ಘಟನೆ ನಡೆದ 2 ಗಂಟೆಯೊಳಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಲು ತಿಳಿಸಿದ್ದಾರೆ.

ಸೈಬರ್ ಚೋರರಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಓಟಿಪಿ ಹಾಗೂ ಅನಾವಶ್ಯಕ ಲಿಂಕ್ ಬಗ್ಗೆ ಎಚ್ಚರದಿಂದ ಇರಲು ತಿಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಸೈಬರ್ ವಂಚನೆ ಕುರಿತು ಸೂಕ್ತ ಮಾಹಿತಿಯನ್ನ ನೀಡಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಹಾಗೂ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಿ ಸೈಬರ್ ಕ್ರೈಂ ವಂಚನೆ ಕುರಿತು ಖಚಿತ ಮಾಹಿತಿ ನೀಡಲು ಚಿಂತನೆ ನಡೆದಿದೆ.

ಇದನ್ನೂ ಓದಿ: Hassan News: ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಬೆಂಗಳೂರಿನಲ್ಲಿ ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ, ಪೊಲೀಸರಿಂದ ಎಚ್ಚರಿಕೆಯ ಪೋಸ್ಟ್

ಸಾರ್ವಜನಿಕರಿಗೆ ಜಾಗ್ರತೆಯಿಂದ ಇರಲು ಬೆಂಗಳೂರು ಪೊಲೀಸ್ ಇಲಾಖೆ ಸೂಚಿಸಿದೆ. ಫೆಡೆಕ್ಸ್ ಕಂಪನಿ ಎಂದು ಹೇಳಿಕೊಂಡು ಮೊದಲು ಕರೆ ಮಾಡುತ್ತಾರೆ. ನಿಮ್ಮದೊಂದು ಪಾರ್ಸಲ್ ಬಂದಿದೆ. ಆದ್ರೆ ಅದಕ್ಕೆ ಕಾನೂನು ತೊಡಕು ಇದೆ ಎಂದು ತಿಳಿಸುತ್ತಾರೆ. ನಂತ್ರ ಕಾನೂನು ಸಮಸ್ಯೆ ಬರತ್ತೆ ಎದುರಿಸಿ ಎಂದು ಬೆದರಿಕೆ ಹಾಕಿ ಫೋನ್ ಇಡುತ್ತಾರೆ. ಬಳಿಕ ಮುಂಬಯಿ ನಾರ್ಕೊಟಿಕ್ಸ್ ಡಿವಿಜನ್, ಸಿಬಿಐ, ಅಥವಾ ಇಡಿ ಅಧಿಕಾರಿ ಕರೆ ಮಾಡಿ ಮಾತನಾಡುತ್ತಾರೆ. ಅಕೌಂಟ್ ವೆರಿಫಿಕೇಷನ್ ಎಂದು ಹಣ ಹಾಕಲು ಸೂಚಿಸಿ ಮತ್ತೆ ವಾಪಸ್ಸು ಹಣ ಬರುತ್ತೆ ಎಂದು ತಿಳಿಸುತ್ತಾರೆ. ಹೀಗೆ ಸೈಬರ್ ಕ್ರೈಮ್ ನಡೆಯುತ್ತಿದೆ. ಈ ರೀತಿ ಕರೆ ಬಂದ್ರೆ ಸ್ಥಳೀಯ ಪೊಲೀಸ್ ಠಾಣೆ ಅಥವ 1930 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್