AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ.

ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 18, 2023 | 12:39 PM

Share

ಚಾಮರಾಜನಗರ: ಸೈಬರ್ ಚೋರರ(Cyber Crime) ಚಿತ್ತ ಈಗ ಚಾಮರಾಜನಗರ ಜಿಲ್ಲೆಯತ್ತ ನೆಟ್ಟಿದೆ. ಏಕೆಂದರೆ ಕಳೆದ 7 ತಿಂಗಳಲ್ಲಿ ಬರೋಬ್ಬರಿ 29 ಎಫ್​ಐಆರ್​ ಕೇಸ್​ಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ಟೀವ್ ಆಗಿರುವವರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡಿ ಈ ಸೈಬರ್ ಚೋರರು ಪಂಗನಾಮ ಹಾಕುತ್ತಾರೆ. ಫಾರಿನ್ ಗಿಫ್ಟ್ ಆಮೀಶವೊಡ್ಡಿ ಲಕ್ಷ ಲಕ್ಷ ಹಣ ಪೀಕುತ್ತಾರೆ. ಅಲ್ಲದೆ ಬೆಂಗಳೂರಿನಲ್ಲೂ ಸೈಬರ್ ಖದೀಮರು ಹೊಸ ಹೊಸ ಮಾರ್ಗದಲ್ಲಿ ಜನರನ್ನು ವಂಚಿಸಲು ನಿಂತಿದ್ದಾರೆ. ಹೀಗಾಗಿ ಪೊಲೀಸರು(Police) ಸಾರ್ವಜನಿಕರನ್ನು ಎಚ್ಚರಿಸಲು ಮುಂದಾಗಿದ್ದಾರೆ.

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ. ಯುವಕ ಯುವತಿಯರನ್ನೆ ಟಾರ್ಗೆಟ್ ಮಾಡಿ ವಂಚನೆ ಮಾಡ್ತಿದ್ದಾರೆ. ಹೀಗಾಗಿ ಸೈಬರ್ ವಂಚನೆಗೆ ಒಳಗಾದವರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೂಚನೆ ನೀಡಿದ್ದಾರೆ. ಘಟನೆ ನಡೆದ 2 ಗಂಟೆಯೊಳಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಲು ತಿಳಿಸಿದ್ದಾರೆ.

ಸೈಬರ್ ಚೋರರಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಓಟಿಪಿ ಹಾಗೂ ಅನಾವಶ್ಯಕ ಲಿಂಕ್ ಬಗ್ಗೆ ಎಚ್ಚರದಿಂದ ಇರಲು ತಿಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಸೈಬರ್ ವಂಚನೆ ಕುರಿತು ಸೂಕ್ತ ಮಾಹಿತಿಯನ್ನ ನೀಡಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಹಾಗೂ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಿ ಸೈಬರ್ ಕ್ರೈಂ ವಂಚನೆ ಕುರಿತು ಖಚಿತ ಮಾಹಿತಿ ನೀಡಲು ಚಿಂತನೆ ನಡೆದಿದೆ.

ಇದನ್ನೂ ಓದಿ: Hassan News: ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಬೆಂಗಳೂರಿನಲ್ಲಿ ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ, ಪೊಲೀಸರಿಂದ ಎಚ್ಚರಿಕೆಯ ಪೋಸ್ಟ್

ಸಾರ್ವಜನಿಕರಿಗೆ ಜಾಗ್ರತೆಯಿಂದ ಇರಲು ಬೆಂಗಳೂರು ಪೊಲೀಸ್ ಇಲಾಖೆ ಸೂಚಿಸಿದೆ. ಫೆಡೆಕ್ಸ್ ಕಂಪನಿ ಎಂದು ಹೇಳಿಕೊಂಡು ಮೊದಲು ಕರೆ ಮಾಡುತ್ತಾರೆ. ನಿಮ್ಮದೊಂದು ಪಾರ್ಸಲ್ ಬಂದಿದೆ. ಆದ್ರೆ ಅದಕ್ಕೆ ಕಾನೂನು ತೊಡಕು ಇದೆ ಎಂದು ತಿಳಿಸುತ್ತಾರೆ. ನಂತ್ರ ಕಾನೂನು ಸಮಸ್ಯೆ ಬರತ್ತೆ ಎದುರಿಸಿ ಎಂದು ಬೆದರಿಕೆ ಹಾಕಿ ಫೋನ್ ಇಡುತ್ತಾರೆ. ಬಳಿಕ ಮುಂಬಯಿ ನಾರ್ಕೊಟಿಕ್ಸ್ ಡಿವಿಜನ್, ಸಿಬಿಐ, ಅಥವಾ ಇಡಿ ಅಧಿಕಾರಿ ಕರೆ ಮಾಡಿ ಮಾತನಾಡುತ್ತಾರೆ. ಅಕೌಂಟ್ ವೆರಿಫಿಕೇಷನ್ ಎಂದು ಹಣ ಹಾಕಲು ಸೂಚಿಸಿ ಮತ್ತೆ ವಾಪಸ್ಸು ಹಣ ಬರುತ್ತೆ ಎಂದು ತಿಳಿಸುತ್ತಾರೆ. ಹೀಗೆ ಸೈಬರ್ ಕ್ರೈಮ್ ನಡೆಯುತ್ತಿದೆ. ಈ ರೀತಿ ಕರೆ ಬಂದ್ರೆ ಸ್ಥಳೀಯ ಪೊಲೀಸ್ ಠಾಣೆ ಅಥವ 1930 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ