AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ.

ಸೈಬರ್ ಕಳ್ಳರ ಹಾವಳಿ: ಸಾರ್ವಜನಿಕರನ್ನು ಎಚ್ಚರಿಸಿದ ಬೆಂಗಳೂರು, ಚಾಮರಾಜನಗರ ಪೊಲೀಸ್ರು
ಸಾಂದರ್ಭಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 18, 2023 | 12:39 PM

Share

ಚಾಮರಾಜನಗರ: ಸೈಬರ್ ಚೋರರ(Cyber Crime) ಚಿತ್ತ ಈಗ ಚಾಮರಾಜನಗರ ಜಿಲ್ಲೆಯತ್ತ ನೆಟ್ಟಿದೆ. ಏಕೆಂದರೆ ಕಳೆದ 7 ತಿಂಗಳಲ್ಲಿ ಬರೋಬ್ಬರಿ 29 ಎಫ್​ಐಆರ್​ ಕೇಸ್​ಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಆಕ್ಟೀವ್ ಆಗಿರುವವರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡಿ ಈ ಸೈಬರ್ ಚೋರರು ಪಂಗನಾಮ ಹಾಕುತ್ತಾರೆ. ಫಾರಿನ್ ಗಿಫ್ಟ್ ಆಮೀಶವೊಡ್ಡಿ ಲಕ್ಷ ಲಕ್ಷ ಹಣ ಪೀಕುತ್ತಾರೆ. ಅಲ್ಲದೆ ಬೆಂಗಳೂರಿನಲ್ಲೂ ಸೈಬರ್ ಖದೀಮರು ಹೊಸ ಹೊಸ ಮಾರ್ಗದಲ್ಲಿ ಜನರನ್ನು ವಂಚಿಸಲು ನಿಂತಿದ್ದಾರೆ. ಹೀಗಾಗಿ ಪೊಲೀಸರು(Police) ಸಾರ್ವಜನಿಕರನ್ನು ಎಚ್ಚರಿಸಲು ಮುಂದಾಗಿದ್ದಾರೆ.

ಚಾಮರಾಜನಗರದಲ್ಲಿ ಸೈಬರ್ ಖದೀಮರು ವಂಚನೆಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಫ್ರೀ ಗಿಫ್ಟ್, 50 ಪರ್ಸೆಂಟ್ ಆಫರ್ ನೀಡುವುದಾಗಿ ನಂಬಿಸಿ ಜನರಿಗೆ ಮೋಸ ಮಾಡಲಾಗುತ್ತಿದೆ. ಯುವಕ ಯುವತಿಯರನ್ನೆ ಟಾರ್ಗೆಟ್ ಮಾಡಿ ವಂಚನೆ ಮಾಡ್ತಿದ್ದಾರೆ. ಹೀಗಾಗಿ ಸೈಬರ್ ವಂಚನೆಗೆ ಒಳಗಾದವರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೂಚನೆ ನೀಡಿದ್ದಾರೆ. ಘಟನೆ ನಡೆದ 2 ಗಂಟೆಯೊಳಗೆ ಪೊಲೀಸ್ ಕಂಟ್ರೋಲ್ ರೂಮ್ ಗೆ ಕರೆ ಮಾಡಲು ತಿಳಿಸಿದ್ದಾರೆ.

ಸೈಬರ್ ಚೋರರಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಓಟಿಪಿ ಹಾಗೂ ಅನಾವಶ್ಯಕ ಲಿಂಕ್ ಬಗ್ಗೆ ಎಚ್ಚರದಿಂದ ಇರಲು ತಿಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಸೈಬರ್ ವಂಚನೆ ಕುರಿತು ಸೂಕ್ತ ಮಾಹಿತಿಯನ್ನ ನೀಡಲು ಪೊಲೀಸ್ ಇಲಾಖೆ ಚಿಂತನೆ ನಡೆಸಿದೆ. ಹಾಗೂ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಿ ಸೈಬರ್ ಕ್ರೈಂ ವಂಚನೆ ಕುರಿತು ಖಚಿತ ಮಾಹಿತಿ ನೀಡಲು ಚಿಂತನೆ ನಡೆದಿದೆ.

ಇದನ್ನೂ ಓದಿ: Hassan News: ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮಗುವನ್ನು ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ಬೆಂಗಳೂರಿನಲ್ಲಿ ಹೊಸ ಮಾದರಿಯ ಸೈಬರ್ ಕ್ರೈಮ್ ಬೆಳಕಿಗೆ, ಪೊಲೀಸರಿಂದ ಎಚ್ಚರಿಕೆಯ ಪೋಸ್ಟ್

ಸಾರ್ವಜನಿಕರಿಗೆ ಜಾಗ್ರತೆಯಿಂದ ಇರಲು ಬೆಂಗಳೂರು ಪೊಲೀಸ್ ಇಲಾಖೆ ಸೂಚಿಸಿದೆ. ಫೆಡೆಕ್ಸ್ ಕಂಪನಿ ಎಂದು ಹೇಳಿಕೊಂಡು ಮೊದಲು ಕರೆ ಮಾಡುತ್ತಾರೆ. ನಿಮ್ಮದೊಂದು ಪಾರ್ಸಲ್ ಬಂದಿದೆ. ಆದ್ರೆ ಅದಕ್ಕೆ ಕಾನೂನು ತೊಡಕು ಇದೆ ಎಂದು ತಿಳಿಸುತ್ತಾರೆ. ನಂತ್ರ ಕಾನೂನು ಸಮಸ್ಯೆ ಬರತ್ತೆ ಎದುರಿಸಿ ಎಂದು ಬೆದರಿಕೆ ಹಾಕಿ ಫೋನ್ ಇಡುತ್ತಾರೆ. ಬಳಿಕ ಮುಂಬಯಿ ನಾರ್ಕೊಟಿಕ್ಸ್ ಡಿವಿಜನ್, ಸಿಬಿಐ, ಅಥವಾ ಇಡಿ ಅಧಿಕಾರಿ ಕರೆ ಮಾಡಿ ಮಾತನಾಡುತ್ತಾರೆ. ಅಕೌಂಟ್ ವೆರಿಫಿಕೇಷನ್ ಎಂದು ಹಣ ಹಾಕಲು ಸೂಚಿಸಿ ಮತ್ತೆ ವಾಪಸ್ಸು ಹಣ ಬರುತ್ತೆ ಎಂದು ತಿಳಿಸುತ್ತಾರೆ. ಹೀಗೆ ಸೈಬರ್ ಕ್ರೈಮ್ ನಡೆಯುತ್ತಿದೆ. ಈ ರೀತಿ ಕರೆ ಬಂದ್ರೆ ಸ್ಥಳೀಯ ಪೊಲೀಸ್ ಠಾಣೆ ಅಥವ 1930 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಬೆಂಗಳೂರು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ