AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ

ವಿಶ್ವವಿಖ್ಯಾತ ಮೈಸೂರು ದಸರಾಗೆ ಈಗಾಗಲೇ ಸಿದ್ದತೆಗಳು ಶುರುವಾಗಿದೆ. ಇದರ ನಡುವೆ ಈ ವರ್ಷವೂ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದ್ದು, ಇದಕ್ಕೆ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಕೆರಳಿರುವ ದಲಿತ ಸಂಘಟನೆಗಳು, ‘ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ
ಪ್ರತಾಪ ಸಿಂಹ, ದಲಿತ ಸಂಘಟನೆ ಮುಖಂಡರು
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2024 | 4:36 PM

Share

ಚಾಮರಾಜನಗರ, ಸೆ.26: ಮಹಿಷ ದಸರಾ ವಿಚಾರವಾಗಿ ಮಾಜಿ ಸಂಸದ ಪ್ರತಾಪ್‌ ಸಿಂಹ(Prathap Simha) ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಚಾಮರಾಜನಗರ ದಲಿತ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ, ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನು ಮಹಿಷ ದಸರಾ ಅಚರಣೆ ಬಗ್ಗೆ ಅಪಸ್ವರ ಎತ್ತದೆ ಹಾಲಿ ಸಂಸದ ಯಧುವೀರ್ ತಮ್ಮ ಘನತೆ ಉಳಿಸಿಕೊಂಡಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿವೇಚನಾರಹಿತವಾಗಿ ಮಾತನಾಡುತ್ತಿದ್ದಾರೆ. ಮಹಿಷಾಸುರ ಮೈಸೂರಿನ ಅಸ್ಮಿತೆಯ ಸಂಕೇತ ಮತ್ತು ಮೈಸೂರಿನ ಆದಿ ಪುರುಷ. ಈ ಹಿನ್ನಲೆ ಮಹಿಷ ದಸರೆ ಆಚರಣೆಗೆ ಚಾಮರಾಜನಗರ ಜಿಲ್ಲೆಯಿಂದ 5 ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತೇವೆ ಎಂದು ದಲಿತ ಸಂಘಟನೆ ಒಕ್ಕೂಟದ ಮುಖಂಡರ ಹೇಳಿದ್ದಾರೆ.

ಇದನ್ನೂ ಓದಿ:ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಪ್ರತಾಪ್​ ಸಿಂಹ ಹೇಳಿದ್ದೇನು?

ಇದೇ ಸೆ.23 ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಮಾತನಾಡಿದ್ದ ಪ್ರತಾಪ್​ ಸಿಂಹ, ‘ಮಹಿಷ ದಸರಾಗೆ ಚಾಮುಂಡಿಬೆಟ್ಟ ಸೂಕ್ತ ಜಾಗವಲ್ಲ, ಮಹಿಷನ ಮೇಲೆ ನಂಬಿಕೆ ಇದ್ದರೆ ನೀವು ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ. ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ನೀವು ಮಹಿಷ ದಸರಾ ಮಾಡುತ್ತೇವೆ ಅಂದರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ