AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ

ವಿಶ್ವವಿಖ್ಯಾತ ಮೈಸೂರು ದಸರಾಗೆ ಈಗಾಗಲೇ ಸಿದ್ದತೆಗಳು ಶುರುವಾಗಿದೆ. ಇದರ ನಡುವೆ ಈ ವರ್ಷವೂ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದ್ದು, ಇದಕ್ಕೆ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಕೆರಳಿರುವ ದಲಿತ ಸಂಘಟನೆಗಳು, ‘ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ
ಪ್ರತಾಪ ಸಿಂಹ, ದಲಿತ ಸಂಘಟನೆ ಮುಖಂಡರು
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 26, 2024 | 4:36 PM

Share

ಚಾಮರಾಜನಗರ, ಸೆ.26: ಮಹಿಷ ದಸರಾ ವಿಚಾರವಾಗಿ ಮಾಜಿ ಸಂಸದ ಪ್ರತಾಪ್‌ ಸಿಂಹ(Prathap Simha) ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಚಾಮರಾಜನಗರ ದಲಿತ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ, ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನು ಮಹಿಷ ದಸರಾ ಅಚರಣೆ ಬಗ್ಗೆ ಅಪಸ್ವರ ಎತ್ತದೆ ಹಾಲಿ ಸಂಸದ ಯಧುವೀರ್ ತಮ್ಮ ಘನತೆ ಉಳಿಸಿಕೊಂಡಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿವೇಚನಾರಹಿತವಾಗಿ ಮಾತನಾಡುತ್ತಿದ್ದಾರೆ. ಮಹಿಷಾಸುರ ಮೈಸೂರಿನ ಅಸ್ಮಿತೆಯ ಸಂಕೇತ ಮತ್ತು ಮೈಸೂರಿನ ಆದಿ ಪುರುಷ. ಈ ಹಿನ್ನಲೆ ಮಹಿಷ ದಸರೆ ಆಚರಣೆಗೆ ಚಾಮರಾಜನಗರ ಜಿಲ್ಲೆಯಿಂದ 5 ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತೇವೆ ಎಂದು ದಲಿತ ಸಂಘಟನೆ ಒಕ್ಕೂಟದ ಮುಖಂಡರ ಹೇಳಿದ್ದಾರೆ.

ಇದನ್ನೂ ಓದಿ:ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಪ್ರತಾಪ್​ ಸಿಂಹ ಹೇಳಿದ್ದೇನು?

ಇದೇ ಸೆ.23 ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಮಾತನಾಡಿದ್ದ ಪ್ರತಾಪ್​ ಸಿಂಹ, ‘ಮಹಿಷ ದಸರಾಗೆ ಚಾಮುಂಡಿಬೆಟ್ಟ ಸೂಕ್ತ ಜಾಗವಲ್ಲ, ಮಹಿಷನ ಮೇಲೆ ನಂಬಿಕೆ ಇದ್ದರೆ ನೀವು ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ. ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ನೀವು ಮಹಿಷ ದಸರಾ ಮಾಡುತ್ತೇವೆ ಅಂದರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?