ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ

ವಿಶ್ವವಿಖ್ಯಾತ ಮೈಸೂರು ದಸರಾಗೆ ಈಗಾಗಲೇ ಸಿದ್ದತೆಗಳು ಶುರುವಾಗಿದೆ. ಇದರ ನಡುವೆ ಈ ವರ್ಷವೂ ಮಹಿಷ ದಸರಾ ಆಚರಣೆ ಮುನ್ನಲೆಗೆ ಬಂದಿದ್ದು, ಇದಕ್ಕೆ ಮಾಜಿ ಸಂಸದ ಪ್ರತಾಪ್​ ಸಿಂಹ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಕೆರಳಿರುವ ದಲಿತ ಸಂಘಟನೆಗಳು, ‘ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನರ ಮಧ್ಯೆ ಬೆಂಕಿ ಹಚ್ಚುವ ಪ್ರತಾಪ ಸಿಂಹರನ್ನ ಬಂಧಿಸಿ: ದಲಿತ ಸಂಘಟನೆ ಆಗ್ರಹ
ಪ್ರತಾಪ ಸಿಂಹ, ದಲಿತ ಸಂಘಟನೆ ಮುಖಂಡರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 26, 2024 | 4:36 PM

ಚಾಮರಾಜನಗರ, ಸೆ.26: ಮಹಿಷ ದಸರಾ ವಿಚಾರವಾಗಿ ಮಾಜಿ ಸಂಸದ ಪ್ರತಾಪ್‌ ಸಿಂಹ(Prathap Simha) ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಚಾಮರಾಜನಗರ ದಲಿತ ಸಂಘಟನೆ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆ ಮೂಲಕ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ, ಸಮಾಜದ ಶಾಂತಿ ಭಂಗ ಮಾಡುತ್ತಿರುವ ಪ್ರತಾಪ್‌ ಸಿಂಹರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.

ಇನ್ನು ಮಹಿಷ ದಸರಾ ಅಚರಣೆ ಬಗ್ಗೆ ಅಪಸ್ವರ ಎತ್ತದೆ ಹಾಲಿ ಸಂಸದ ಯಧುವೀರ್ ತಮ್ಮ ಘನತೆ ಉಳಿಸಿಕೊಂಡಿದ್ದಾರೆ. ಆದರೆ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿವೇಚನಾರಹಿತವಾಗಿ ಮಾತನಾಡುತ್ತಿದ್ದಾರೆ. ಮಹಿಷಾಸುರ ಮೈಸೂರಿನ ಅಸ್ಮಿತೆಯ ಸಂಕೇತ ಮತ್ತು ಮೈಸೂರಿನ ಆದಿ ಪುರುಷ. ಈ ಹಿನ್ನಲೆ ಮಹಿಷ ದಸರೆ ಆಚರಣೆಗೆ ಚಾಮರಾಜನಗರ ಜಿಲ್ಲೆಯಿಂದ 5 ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತೇವೆ ಎಂದು ದಲಿತ ಸಂಘಟನೆ ಒಕ್ಕೂಟದ ಮುಖಂಡರ ಹೇಳಿದ್ದಾರೆ.

ಇದನ್ನೂ ಓದಿ:ಮಹಿಷ ದಸರಾ ಆಚರಣೆಗೆ ಮುಂದಾಗಿರೋರಿಗೆ ಪ್ರತಾಪ್ ಸಿಂಹ ಓಪನ್ ಚಾಲೆಂಜ್!

ಪ್ರತಾಪ್​ ಸಿಂಹ ಹೇಳಿದ್ದೇನು?

ಇದೇ ಸೆ.23 ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಮಾತನಾಡಿದ್ದ ಪ್ರತಾಪ್​ ಸಿಂಹ, ‘ಮಹಿಷ ದಸರಾಗೆ ಚಾಮುಂಡಿಬೆಟ್ಟ ಸೂಕ್ತ ಜಾಗವಲ್ಲ, ಮಹಿಷನ ಮೇಲೆ ನಂಬಿಕೆ ಇದ್ದರೆ ನೀವು ಮನೆಯಲ್ಲೇ ಪೂಜೆ ಮಾಡಿಕೊಳ್ಳಿ. ಮಹಿಷಾಸುರ, ಕಂಸ, ರಾವಣ ಯಾರನ್ನಾದರೂ ಮನೆಯಲ್ಲಿ ಆರಾಧಿಸಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ಭಕ್ತರು ಅವಕಾಶ ಮಾಡಿಕೊಡಲ್ಲ. ಮನೆಗಳಲ್ಲಿ ಬೇಕಾದರೆ ಮಹಿಷನ ಫೋಟೋವನ್ನು ಇಟ್ಟುಕೊಳ್ಳಿ. ಮಹಿಷನ ರೀತಿ ಮಗು ಹುಟ್ಟಲಿ ಎಂದು ಪೂಜೆ ಮಾಡಿಕೊಳ್ಳಿ. ಆದರೆ, ಚಾಮುಂಡಿ ಬೆಟ್ಟದಲ್ಲಿ ನೀವು ಮಹಿಷ ದಸರಾ ಮಾಡುತ್ತೇವೆ ಅಂದರೆ ಚಾಮುಂಡಿ ಭಕ್ತರು ಅಂದೇ ಚಾಮುಂಡಿ ಬೆಟ್ಟ ಚಲೋ ಮಾಡುತ್ತೇವೆ. ಮಹಿಷ ಭಕ್ತರ ಕೈಮೇಲಾಗುತ್ತಾ, ಚಾಮುಂಡಿ ಭಕ್ತರ ಕೈಮೇಲಾಗುತ್ತಾ ನೋಡೋಣ ಎಂದು ಓಪನ್ ಚಾಲೆಂಜ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ