AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar Police: ಚಿನ್ನದ ವ್ಯಾಪಾರಿಗಳೇ ಇವರ ಟಾರ್ಗೆಟ್! ಖತರ್ನಾಕ್ ಕೇರಳ ಗ್ಯಾಂಗ್ ಕೊನೆಗೂ ಅಂದರ್​: ಕಾರ್ಯಾಚರಣೆ ಹೇಗಿತ್ತು?

ಚಿನ್ನದ ವ್ಯಾಪಾರಿಗಳನ್ನೆ ಟಾರ್ಗೆಟ್ ಮಾಡುವ ಈ ಕೇರಳ ಗ್ಯಾಂಗ್ ವ್ಯಾಪಾರಿಗಳು ಹಣ ತೆಗೆದುಕೊಂಡು ಹೋಗುವುದನ್ನ ಕಾದು ಕುಳಿತು ಬಳಿಕ, ಊಟಿ ಹಾಗೂ ಮೈಸೂರು ರಸ್ತೆಗೆ ಕಾರು ಎಂಟ್ರಿಯಾಗ್ತಯಿದ್ದಂತೆ ಹಣ ದೋಚಿ ಎಸ್ಕೇಪ್ ಆಗ್ತಾಯಿದ್ರು.  ಪ್ರಕರಣ ದಾಖಲಿಸಿಕೊಂಡ ಬೇಗೂರು ಪೊಲೀಸರು ಈಗ ಮೊಹಮ್ಮದ್ ತಾಜ್ ಸೇರಿದಂತೆ 11 ಮಂದಿ ಆರೋಪಿಗಳ ಕೈಗೆ ಕೋಳ ತೊಡಿಸಿದೆ.

Chamarajanagar Police: ಚಿನ್ನದ ವ್ಯಾಪಾರಿಗಳೇ ಇವರ ಟಾರ್ಗೆಟ್! ಖತರ್ನಾಕ್ ಕೇರಳ ಗ್ಯಾಂಗ್ ಕೊನೆಗೂ ಅಂದರ್​: ಕಾರ್ಯಾಚರಣೆ ಹೇಗಿತ್ತು?
ಚಿನ್ನದ ವ್ಯಾಪಾರಿಗಳೇ ಟಾರ್ಗೆಟ್, ಖತರ್ನಾಕ್ ಕೇರಳ ಗ್ಯಾಂಗ್ ಕೊನೆಗೂ ಅರೆಸ್ಟ್
ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Oct 27, 2023 | 7:16 PM

Share

ಚಿನ್ನದ ಉದ್ಯಮಿಗಳನ್ನೆ (gold traders) ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಕೇರಳ ಗ್ಯಾಂಗ್ (Dangerous Kerala gang) ಕೊನೆಗೂ ಪೊಲೀಸರ ಕೈಯಲ್ಲಿ ಲಾಕ್ ಆಗಿದೆ. ನಡು ರಸ್ತೆಯಲ್ಲಿ ಹತಿಯಾರ ಹಿಡಿದು ಆರ್ಭಟಿಸುತ್ತಿದ್ದವರು ಈಗ ನ್ಯಾಯಾಂಗ ಬಂಧನದ ಪಾಲಾಗಿದ್ದಾರೆ. ಅಷ್ಟಕ್ಕೂ ಈ ದರೋಡೆ ಗ್ಯಾಂಗ್ ಅಂದರ್ ಆಗಿದದಾದ್ರು ಹೇಗೆ ಅಂತೀರಾ? ಈ ಸ್ಟೋರಿ ನೋಡಿ. ಕಳೆದ ಎರಡು ತಿಂಗಳಿನಿಂದ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್ ಕೇರಳ ಗ್ಯಾಂಗ್ ಕೊನೆಗೂ ಖಾಕಿ ಖೆಡ್ಡಾಗೆ ಬಿದ್ದಿದೆ. ಚಾಮರಾಜನಗರ ಜಿಲ್ಲೆಯ ಬೇಗೂರು ( Beguru Police of Chamarajanagar) ಠಾಣಾ ವ್ಯಾಪ್ತಿಯಲ್ಲಿ ಸಿವಾ ಎಂಬ ಚಿನ್ನದ ವ್ಯಾಪಾರಿಯ ಕಾರನ್ನ ಅಡ್ಡಗಟ್ಟಿ 40 ಲಕ್ಷ ಹಣವನ್ನ ದೋಚಿ ಪರಾರಿಯಾಗಿದ್ರು ಪ್ರಕರಣ ಕೈಗೆತ್ತಿಗೊಂಡ ಬೇಗೂರು ಪೊಲೀಸರು ಈಗ ಬರೋಬ್ಬರಿ 11 ಮಂದಿ ರಾಬರ್​​ಗಳನ್ನು ಬಂಧಿಸಿ 20 ಲಕ್ಷ ರೂಪಾಯಿ ಹಣವನ್ನ ರಿಕವರಿ ಮಾಡಿದ್ದಾರೆ.

ಚಿನ್ನದ ವ್ಯಾಪಾರಿಗಳನ್ನೆ ಟಾರ್ಗೆಟ್ ಮಾಡುವ ಈ ಕೇರಳ ಗ್ಯಾಂಗ್ ವ್ಯಾಪಾರಿಗಳು ಹಣ ತೆಗೆದುಕೊಂಡು ಹೋಗುವುದನ್ನ ಕಾದು ಕುಳಿತು ಬಳಿಕ, ಊಟಿ ಹಾಗೂ ಮೈಸೂರು ರಸ್ತೆಗೆ ಕಾರು ಎಂಟ್ರಿ ಆಗ್ತಯಿದ್ದಂತೆ ಕಾರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳನ್ನ ತೋರಿಸಿ ವ್ಯಾಪಾರಿಗಳ ಬಳಿ ಇರುವ ಹಣವನ್ನ ದೋಚಿ ಎಸ್ಕೇಪ್ ಆಗ್ತಾಯಿದ್ರು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬೇಗೂರು ಪೊಲೀಸರು ಈಗ ಮೊಹಮ್ಮದ್ ತಾಜ್ ಸೇರಿದಂತೆ 11 ಮಂದಿ ಆರೋಪಿಗಳ ಕೈಗೆ ಕೋಳ ತೊಡಿಸಿದೆ.

ಇನ್ನು ಈ ಗ್ಯಾಂಗ್ ಕಥೆ ಇದಾದ್ರೆ ಆಗಸ್ಟ್ ನಲ್ಲೂ ಸಹ ಮಹೇಶ್ ಎಂಬ ಚಿನ್ನದ ವ್ಯಾಪಾರಿಯನ್ನ ಅಡ್ಡಗಟ್ಟಿದ ಕೇರಳ ಗ್ಯಾಂಗ್ ಅವರ ಬಳಿಯಿದ್ದ 5 ಲಕ್ಷ ನಗದನ್ನ ದೋಚಿ ಪರಾರಿಯಾಗಿದ್ರು. ಈ ಪ್ರಕರಣದಲ್ಲೂ 10 ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಈ ಪ್ರಕರಣದ ದೊಡ್ಡ ದುರಂತ ಅಂತ ಹೇಳಿದರೆ ದೂರುದಾರರು ಪೊಲೀಸರಿಗೆ ಸೂಕ್ತ ಮಾಹಿತಿಯನ್ನೇ ನೀಡುತ್ತಿಲ್ಲ. ಹಣದ ಮೂಲದ ಕುರಿತು ಸ್ಪಷ್ಟ ಮಾಹಿತಿ ನೀಡದೆ ಇರುವುದು ಸಹ ಮತ್ತಷ್ಟು ಅನುಮಾನಕ್ಕೆ ಎಡೆಮಾಡಿ ಕೊಡುವಂತಾಗಿದೆ ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ರೈತರ ಪಾಲಿಗೆ ಆದಾಯ ಮೂಲವಾದ ತೆಂಗಿನ ಕಾಯಿ ಚಿಪ್ಪು, ಮಾರುಕಟ್ಟೆಯಲ್ಲಿ ಭಾರೀ ಡಿಮ್ಯಾಂಡ್

ಅದೇನೆ ಹೇಳಿ ಈ ಪ್ರಕರಣವನ್ನ ಪೊಲೀಸರು ಗಂಭೀರವಾಗಿ ಪರಿಗಣಿಸ ಬೇಕಿದೆ. ಚಿನ್ನದ ವ್ಯಾಪಾರಿಗಳನ್ನೇ ರಾಬರಿ ಗ್ಯಾಂಗ್ ಟಾರ್ಗೆಟ್ ಮಾಡ್ತಾಯಿರುವುದಾದ್ರು ಯಾಕೆ ಎಂಬುದರ ಅಸಲಿಯತ್ತು ಬಯಲಿಗೆ ಬರಬೇಕಿದೆ. ಮತ್ತೊಂದೆಡೆ ಟ್ಯಾಕ್ಸ್ ಉಳಿಸುವ ಸಲುವಾಗಿ ವ್ಯಾಪಾರಿಗಳು ಬ್ಲಾಕ್ ಮಾರ್ಕೆಟ್ ನಲ್ಲಿ ಗೋಲ್ಡ್ ಬ್ಯುಸಿನೆಸ್ ಮಾಡ್ತಾಯಿದ್ದಾರಾ? ಇಂತವರ ಮೇಲೆ ರಾಬರ್ಸ್ ಗ್ಯಾಂಗ್ ಕಣ್ಣಿಟ್ಟಿದೆಯಾ ಎಂಬುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು