AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ, ಜೈ ಘೋಷದ ನಡುವೆ ಅದ್ದೂರಿಯಾಗಿ ಜರುಗಿದ ಮಲೆ ಮಹದೆಶ್ವರನ ಜಾತ್ರೆ

ಮಲೆ ಮಹದೇಶ್ವರ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೆ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವೆ ಉತ್ಸವ ನಡೆದಿತ್ತು. ಮೂರನೇ ದಿನವಾದ ಮಂಗಳವಾರ ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ, ಜೈ ಘೋಷದ ನಡುವೆ ಅದ್ದೂರಿಯಾಗಿ ಜರುಗಿದ ಮಲೆ ಮಹದೆಶ್ವರನ ಜಾತ್ರೆ
ಮಲೆ ಮಹದೇಶ್ವರ ಬೆಟ್ಟ ಜಾತ್ರೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Nov 15, 2023 | 11:02 AM

Share

ಚಾಮರಾಜನಗರ ನ.15: ಹನೂರು ತಾಲೂಕಿನ ಮಲೆ ಮಹದೆಶ್ವರ ಬೆಟ್ಟ (Male Mahadeshwara Betta) ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ. ಬೆಟ್ಟದಲ್ಲಿ ನೆಲಸಿರುವ ಮಲೆ ಮಾದಪ್ಪ (Male Mahadeshwara) ಲಕ್ಷಾಂತರ ಭಕ್ತರ ಆರಾಧ್ಯ ದೈವ. ಈ ಬೆಟ್ಟದಲ್ಲಿ ವರ್ಷಕ್ಕೆ ಮೂರು ಬಾರಿ ಅಂದರೆ ಶಿವರಾತ್ರಿ, ಯುಗಾದಿ ಹಾಗೂ ದೀಪಾವಾಳಿಯಂದು ರಥೋತ್ಸವ ನಡೆಯುತ್ತದೆ. ಇದೇ ರೀತಿ ಈ ಬಾರಿಯು ಬೆಟ್ಟದಲ್ಲಿ ಮಂಗಳವಾರ ರಥೋತ್ಸವ ಲಕ್ಷಾಂತರ ಭಕ್ತರ ಜಯಘೋಷಗಳ ನಡುವೆ ಸಂಭ್ರಮ ಸಡಗರಗಳೊಂದಿಗೆ ನಡೆಯಿತು. ಲಕ್ಷಾಂತರ ಮಂದಿ ಭಕ್ತರು ಮಾದಪ್ಪನ ರಥೋತ್ಸವ ಕಣ್ತುಂಬಿಕೊಂಡಿದ್ದಾರೆ.

ಇನ್ನು ಉಘೇ ಉಘೇ ಮಾದಪ್ಪ ಎನ್ನುತ್ತಾ ಅಸಂಖ್ಯಾತ ಭಕ್ತರು ಮಾದಪ್ಪನ ತೇರು ಎಳೆದು ತಮ್ಮ ಭಕ್ತಿ ಸಮರ್ಪಿಸಿದರು. ಮಹಿಳೆಯರಂತು ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ ಮೆರೆದರು. ಹುಲಿವಾಹನ, ಬಸವವಾಹನ, ರುದ್ರಾಕ್ಷಿ ಮಂಟಪಗಳು ಮಾದಪ್ಪನ ರಥದೊಂದಿಗೆ ಸಾಗಿ ರಥೋತ್ಸವಕ್ಕೆ ಮೆರಗು ತಂದವು. ಮಾದಪ್ಪನ ಭಕ್ತರು ಉರುಳುಸೇವೆ, ಪಂಜಿನಸೇವೆ, ಮುಡಿಸೇವೆ ಮೂಲಕ ಹರಕೆ ತೀರಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಇದನ್ನೂ ಓದಿ: ಚಾಮರಾಜನಗರದ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ, ಇಲ್ಲಿ ಹಬ್ಬ ಆಚರಿಸುವುದು ಬುಧವಾರ ಮಾತ್ರ

ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದುಬಂದಿತ್ತು. ಕಳೆದ ಮೂರು ದಿನಗಳಿಂದ ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತರಿಗೆ ವಿಶೇಷ ಅನ್ನದಾಸೋಹ ಮಾಡಲಾಗಿತ್ತು. ಮೂರು ದಿನಗಳಿಂದ ಮೂರು ಲಕ್ಷಕ್ಕು ಅಧಿಕ ಲಾಡು ಪ್ರಸಾದ ಮಾರಾಟವಾಗಿದೆ. ಮಾದಪ್ಪನ ಸನ್ನಿದಿಯಲ್ಲಿ ದೀಪಾವಳಿಯ ಮೊದಲನೆ ದಿನ ಎಣ್ಣೆಮಜ್ಜನ ಸೇವೆ ನಡೆದರೆ, ಎರಡನೇ ದಿನ ಹಾಲರುವೆ ಉತ್ಸವ ನಡೆದಿತ್ತು. ಮೂರನೇ ದಿನವಾದ ಮಂಗಳವಾರ ರಥೋತ್ಸವ ನಡೆಯುವುದರೊಂದಿಗೆ ಮೂರು ದಿನಗಳ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ತೆರೆಬಿದ್ದಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More