ಚಾಮರಾಜನಗರದ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ, ಇಲ್ಲಿ ಹಬ್ಬ ಆಚರಿಸುವುದು ಬುಧವಾರ ಮಾತ್ರ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು.

ಚಾಮರಾಜನಗರದ 7 ಗ್ರಾಮಗಳಿಗಿಲ್ಲ ದೀಪಾವಳಿಯ ಸಂಭ್ರಮ, ಇಲ್ಲಿ ಹಬ್ಬ ಆಚರಿಸುವುದು ಬುಧವಾರ ಮಾತ್ರ
ದೀಪಾವಳಿ ಆಚರಿಸದ ಗ್ರಾಮ
Edited By: ವಿವೇಕ ಬಿರಾದಾರ

Updated on: Nov 12, 2023 | 3:15 PM

ಚಾಮರಾಜನಗರ ನ.12:  ದೇಶಾದ್ಯಂತ ದೀಪ ಬೆಳಗಿಸಿ ಸಡಗರ ಸಂಭ್ರಮದಿಂದ ದೀಪಾವಳಿ (Deepavali) ಹಬ್ಬವನ್ನು ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರದ (Chamrajnagar) ಏಳು ಗ್ರಾಮಗಳಲ್ಲಿ ದೀಪಾವಳಿಯ ಸಡಗರ ಸಂಭ್ರಮ ಯಾವುದೂ ಕಾಣುತ್ತಿಲ್ಲ. ಇದಕ್ಕೆ ಕಾರಣ ಮಂಗಳವಾರ ಹಬ್ಬ ಬಂದಿರುವುದು. ಹಾಗಾದರೆ ಈ ಗ್ರಾಮಗಳಲ್ಲಿ ದೀಪಾವಳಿ ಹಬ್ಬ ಯಾವಾಗ ಆಚರಿಸುತ್ತಾರೆ ಯಾಕೆ ಬುಧವಾರದ ದಿನ ಹೊರತುಪಡಿಸಿ ಉಳಿದ ದಿನಗಳಲ್ಲಿ ಹಬ್ಬ ಆಚರಿಸಲ್ಲ ಅಂತೀರಾ‌ ಈ ಸ್ಟೋರಿ ನೋಡಿ.

ದೀಪದಿಂದ ದೀಪವನ್ನು ಹಚ್ಚುತ್ತಾ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿ ಮಾಡುವುದೇ ದೀಪಾವಳಿ. ದೇಶಾದ್ಯಂತ ಸಂಭ್ರಮ, ಸಡಗರದಿಂದ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಆದರೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೆಂಡಗಳ್ಳಿ, ವೀರನಪುರ, ಬನ್ನಿತಾಳಪುರ, ಮಾಡ್ರಹಳ್ಳಿ, ನಲ್ಲೂರು, ಮಳವಳ್ಳಿ ಹಾಗೂ ನೇನೆಕಟ್ಟೆ ಗ್ರಾಮಗಳಲ್ಲಿ ದೀಪಾವಳಿ ಹಬ್ಬವನ್ನ ಆಚರಿಸುತ್ತಿಲ್ಲ. ಇದಕ್ಕೆ ಕಾರಣ ದೀಪಾವಳಿಯ ಬಲಿಪಾಡ್ಯಮಿ ಮಂಗಳವಾರ ಬಂದಿರುವುದು.

ಈ 7 ಗ್ರಾಮಗಳಲ್ಲಿ ಹಿಂದಿನ ಕಾಲದಿಂದಲೂ ದೀಪಾವಳಿಯ ಬಲಿಪಾಡ್ಯಮಿ ಬುಧವಾರ ಬಿಟ್ಟು ವಾರದ ಬೇರೆ ಯಾವುದೇ ದಿನಗಳಲ್ಲಿ ಬಂದರು ಆಚರಿಸಿಕೊಂಡು ಬರುತ್ತಿಲ್ಲ. ಬುಧವಾರದಂದು ಹೊಸ ಬಟ್ಟೆ ತೊಟ್ಟು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ. ರಾಸುಗಳಿಗೆ ಸ್ನಾನ ಮಾಡಿಸಿ ಮನೆಯಲ್ಲಿ ಸಿಹಿ ಊಟ ಮಾಡುತ್ತಾರೆ. ಕಳೆದ ಮೂರು ತಲೆಮಾರುಗಳಿಂದ ಈ ಏಳು ಗ್ರಾಮದವರು ಬುಧವಾರವೇ ಹಬ್ಬ ಆಚರಿಸುವ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದಾರೆ. ಅಷ್ಟಕ್ಕೂ ಬುಧವಾರವೇ ಏಕೆ ಹಬ್ಬ ಆಚರಿಸಬೇಕು ಎಂಬ ಪ್ರಶ್ನೆಗೆ ಗ್ರಾಮಸ್ಥರ ಉತ್ತರ ಹೀಗಿದೆ.

ಇದನ್ನೂ ಓದಿ: ದಾವಣಗೆರೆಯ ಈ ಗ್ರಾಮದಲ್ಲಿ ದೀಪಾವಳಿ ಹಬ್ಬ ಆಚರಿಸೋಲ್ಲ, ಕಾರಣವೇನು?

ಬುಧವಾರ ಹೊರತುಪಡಿಸಿ ಬೇರೆ ಯಾವುದೇ ದಿನಗಳಲ್ಲಿ ಹಬ್ಬ ಆಚರಿಸಿದರೇ ಊರಿಗೆ ಕೆಡಕಾಗುತ್ತೆ, ಜಾನುವಾರುಗಳು ಇದ್ದಕ್ಕಿದ್ದಂತೆ ಸಾವನ್ನಪ್ಪುತ್ತವೆ ಎಂಬುವುದು ಗ್ರಾಮಸ್ಥರ ನಂಬಿಕೆ ಇದೆ. ಹೀಗಾಗಿ ದೀಪಾವಳಿ ಹಬ್ಬ ಬುಧವಾರ ಹೊರತುಪಡಿಸಿ ಇನ್ಯಾವುದೇ ದಿನಗಳಲ್ಲಿ ಬಂದರೇ ಈ 7 ಗ್ರಾಮಗಳ ಜನರು ಆಚರಿಸುವುದಿಲ್ಲ. ಬುಧವಾರದಂದು ದೇವಸ್ಥಾನದಿಂದ ತೀರ್ಥ ತಂದು ಹಸುಗಳಿಗೆ ಸಂಪಡಿಸಿ, ಪೂಜೆ ಮಾಡಿ, ಬಳಿಕ ಹಸುಗಳನ್ನು ಊರಿನ ಸುತ್ತ ಒಂದು ಸುತ್ತು ಹಾಕಿಸುತ್ತಾರೆ.

ಒಟ್ಟಾರೆ ಆಧುನಿಕ ಕಾಲದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಆಚಾರ, ವಿಚಾರಗಳು ಮಾತ್ರ ಬದಲಾಗಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಗ್ರಾಮಗಳಲ್ಲಿ ನಡೆಯುತ್ತಿರುವ ಹಬ್ಬದ ಪದ್ಧತಿಗಳೇ ಸಾಕ್ಷಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us