AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡಿನಾಡು ಚಾಮರಾಜನಗರ ಜನತೆಗೆ ಶುರುವಾಯ್ತು ಡೆಂಘಿ ಟೆನ್ಷನ್! ಒಂದೇ ತಿಂಗಳಲ್ಲಿ ದಾಖಲಾಯ್ತು ಬರೋಬ್ಬರಿ 50 ಕ್ಕೂ ಹೆಚ್ಚು ಪಾಸಿಟಿವ್ ಕೇಸ್​

ಮಾರಕ ಡೆಂಘಿ ಖಾಯಿಲೆಗೆ ಗಡಿನಾಡು ಚಾಮರಾಜನಗರ ಜಿಲ್ಲೆಯ ಜನತೆ ಬೆಚ್ಚಿ ಬಿದ್ದಿದ್ದಾರೆ. ವೈರಲ್ ಫೀವರ್ ನಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಆರೋಗ್ಯ ಇಲಾಖಾ ಸಿಬ್ಬಂದಿ ಫೀಲ್ಡ್​ಗೆ ಇಳಿದು ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಗಡಿನಾಡು ಚಾಮರಾಜನಗರ ಜನತೆಗೆ ಶುರುವಾಯ್ತು ಡೆಂಘಿ ಟೆನ್ಷನ್! ಒಂದೇ ತಿಂಗಳಲ್ಲಿ ದಾಖಲಾಯ್ತು ಬರೋಬ್ಬರಿ 50 ಕ್ಕೂ ಹೆಚ್ಚು ಪಾಸಿಟಿವ್ ಕೇಸ್​
ಚಾಮರಾಜನಗರ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 27, 2023 | 7:19 AM

Share

ಚಾಮರಾಜನಗರ, ಜು.27: ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ಅರೋಗ್ಯ ಇಲಾಖಾ(Health Department)  ಸಿಬ್ಬಂದಿಗಳು, ಪ್ರತಿಯೊಂದು ಗಲ್ಲಿ ಗಲ್ಲಿ ತಿರುಗಿ ಸರ್ವೆ ನಡೆಸುತ್ತಿರುವ ದಾದಿಯರು. ಈ ಎಲ್ಲಾ ದೃಶ್ಯಗಳು ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ (Chamarajanagar) ದಲ್ಲಿ. ಹೌದು ದಿನದಿಂದ ದಿನಕ್ಕೆ ನಗರದಲ್ಲಿ ಡೆಂಘಿ(Dengue)ಪ್ರಕರಣ ಹೆಚ್ಚಾದ ಹಿನ್ನಲೆ ಆರೋಗ್ಯ ಇಲಾಖಾ ಸಿಬ್ಬಂದಿ ಖುದ್ದು ಫೀಲ್ಡ್​ಗೆ ಇಳಿದಿದ್ದಾರೆ. ನಗರದ ಪ್ರತಿಯೊಂದು ಸ್ಥಳಕ್ಕೂ ತೆರಳಿ ಸ್ವಚ್ಚತೆ ಕುರಿತು ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಿದ್ದು, ಮನೆ ಮುಂದೆ ಬಿಸಾಡಿರುವ ಟೈಯರ್, ಹಳೆ ಪಾತ್ರೆ, ಹೂ ಕುಂಡಗಳನ್ನ ಶುಚಿಗೊಳಿಸುವಂತೆ ನಗರದ ಜನತೆಗೆ ಅರಿವು ಮೂಡಿಸುತ್ತಿದ್ದಾರೆ.

ಒಂದೇ ತಿಂಗಳಲ್ಲಿ ಬರೋಬ್ಬರಿ 50 ಪಾಸಿಟಿವ್ ಕೇಸ್​

ಇದೀಗ ಮಾನ್ಸೂನ್ ಮಳೆಯ ಕಾರಣ ಮನೆ ಮುಂದೆ ಬಿಸಾಡಿರುವ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಕಾಲರಾ, ಮಲೇರಿಯಾ, ಡೆಂಘಿಯಂತಹ ಪ್ರಕರಣಗಳು ದಿನ ನಿತ್ಯ ರಿಪೋರ್ಟ್ ಆಗುತ್ತಲೇ ಇದ್ದು, ಇನ್ನು ಕಳೆದ ಒಂದು ತಿಂಗಳಿನಲ್ಲೇ ಬರೋಬ್ಬರಿ 50 ಪಾಸಿಟಿವ್ ಕೇಸ್ ರಿಜಿಸ್ಟರ್ ಆಗಿದೆ. ಇದರಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಹೊಸತೊಂದು ತಲೆ ನೋವು ಎದುರಾಗಿದೆ. ಇನ್ನು ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಪೈಕಿ ಶೇಕಡ 15 ರಿಂದ 20 ಪರ್ಸೆಂಟ್ ವೈರಲ್ ಫೀವರ್ ಪ್ರಕರಣಗಳು ಹೆಚ್ಚಾಗಿವೆ ಎಂದು ಚಿಮ್ಸ್ ವೈದ್ಯ ಡಾ.ಕೃಷ್ಣಪ್ರಸಾದ್ ಹೇಳಿದ್ದಾರೆ.

ಇದನ್ನೂ ಓದಿ:Fertility Testing: ನಿಗದಿತ ಆರೋಗ್ಯ ತಪಾಸಣೆ ಭಾಗವಾಗಿ ಫಲವತ್ತತೆ ಪರೀಕ್ಷೆ ಏಕೆ ಮಾಡಿಸಬೇಕು?

ಅದೇನೆ ಹೇಳಿ ಸದ್ಯ ಫೀಲ್ಡಿಗಿಳಿದಿರುವ ಆರೋಗ್ಯ ಇಲಾಖಾ ಸಿಬ್ಬಂದಿ, ವೈರಲ್ ಫೀವರ್ ಗುಣ ಲಕ್ಷಣವಿರುವ ಮಾಹಿತಿ ಕಲೆ ಹಾಕಿ ಸ್ಥಳದಲ್ಲೆ ಕೆಲ ಮಾತ್ರೆಗಳನ್ನ ನೀಡುತ್ತಿದ್ದಾರೆ. ಇನ್ನು ಡೆಂಘಿಯಿಂದ ಸೂಕ್ತ ಚಿಕಿತ್ಸೆ ಪಡೆಯಲು ಈಗಾಗಲೇ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದ್ದು. ವೈರಲ್ ಫೀವರ್ ರೋಗಿಗಳಿಗಾಗಿಯೇ ವಿಶೇಷ ವಾರ್ಡ್​ಗಳನ್ನ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More