AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಜನತೆಗೆ ಶುರುವಾಯ್ತು ಡೆಂಗಿ ಟೆನ್ಷನ್: ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆದ ಆರೋಗ್ಯ ಇಲಾಖೆ

Chamarajanagar News: ಮಾರಕ ಡೆಂಗಿ ಖಾಯಿಲೆಗೆ ಗಡಿನಾಡು ಚಾಮರಾಜನಗರ ಜಿಲ್ಲಾ ಜನತೆ ಬೆಚ್ಚಿ ಬಿದ್ದಿದ್ದಾರೆ. ವೈರಲ್ ಫೀವರ್ ನಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖಾ ಸಿಬ್ಬಂದಿ ಫೀಲ್ಡ್​ಗೆ ಇಳಿದು ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರ ಜನತೆಗೆ ಶುರುವಾಯ್ತು ಡೆಂಗಿ ಟೆನ್ಷನ್: ಆಸ್ಪತ್ರೆಗಳಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 04, 2023 | 4:00 PM

Share

ಚಾಮರಾಜನಗರ, ಆಗಸ್ಟ್​ 04: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡಲು ಆರಂಭಿಸಿದ ಪರಿಣಾಮ ಈಗಾಗಲೇ 50 ಡೆಂಗಿ (Dengue) ಪಾಸಿಟಿವ್ ಕೇಸ್​ಗಳು ಪತ್ತೆ ಆಗಿವೆ. ಹೀಗಾಗಿ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ತಗೆದುಕೊಂಡಿದೆ. ಆ ಮೂಲಕ ನಗರದೆಲ್ಲೆಡೆ ಜನರಲ್ಲಿ ಅರಿವು ಮೂಡಿಸಲು ನಗರಸಭೆ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ.

ಚಾಮರಾಜನಗರ ತಾಲ್ಲೂಕು ಒಂದರಲ್ಲಿಯೇ 34 ಪ್ರಕರಣಗಳು ದಾಖಲಾಗಿವೆ. ಈಡೀಸ್ ಸೊಳ್ಳೆಗಳು ಮೊಟ್ಟೆ ಇಡದಂತೆ ಸ್ವಚ್ಛತೆ ಬಗ್ಗೆ ಗಮನ ಹರಿಸುವಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ನಿಂತ ನೀರಿನಲ್ಲಿ ಲಾರ್ವಾ ಪತ್ತೆ ಹಚ್ಚಿ ನಾಶಪಡಿಸಲು ಕ್ರಮಕ್ಕೆ ಮುಂದಾಗಿದೆ.

ಪ್ರತ್ಯೇಕ ಐಸೋಲೇಷನ್ ವಾರ್ಡ್

ಗಡಿಭಾಗದ ಕೇರಳದಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗಿದ್ದು, ಗಡಿ ಭಾಗದ 150 ಹಳ್ಳಿಗಳಲ್ಲಿ ನಿತ್ಯ ಮನೆಮನೆ ಸಮೀಕ್ಷಾ ಕಾರ್ಯ ನಡೆಯಲಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆರೋಗ್ಯ ಇಲಾಖೆ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಮಕ್ಕಳನ್ನು ಭಾದಿಸುತ್ತಿದೆ ವಿಚಿತ್ರ ಚರ್ಮರೋಗ

ಮಾರಕ ಡೆಂಘಿ ಖಾಯಿಲೆಗೆ ಗಡಿನಾಡು ಚಾಮರಾಜನಗರ ಜಿಲ್ಲಾ ಜನತೆ ಬೆಚ್ಚಿ ಬಿದ್ದಿದ್ದಾರೆ. ವೈರಲ್ ಫೀವರ್ ನಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು. ಆರೋಗ್ಯ ಇಲಾಖಾ ಸಿಬ್ಬಂದಿ ಫೀಲ್ಡ್ ಗೆ ಇಳಿದು ಜಾಗೃತಿ ಮೂಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಡೆಂಗಿ ಹಾಗೂ ವೈರಲ್ ಫೀವರ್ ಹೆಚ್ಚಾಗಲು ಕಾರಣವೇನು ಎಂದು ನೋಡುವುದಾದರೆ, ಮನ್ಸೂನ್ ಹಿನ್ನಲೆ ಚಳಿ ಹಾಗೂ ಜಡಿ ಮಳೆಯ ಕಾರಣ ಮನೆ ಮುಂದೆ ಬಿಸಾಡಿರುವ ಸ್ಥಳಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಕಾಲರ, ಮಲೇರಿಯಾ, ಡೆಂಗಿಯಂತಹ ಪ್ರಕರಣಗಳು ದಿನ ನಿತ್ಯ ರಿಪೋರ್ಟ್ ಆಗುತ್ತಲೇ ಇವೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ಟೊಮೆಟೊ ಬೆಳೆ ನಾಶ ಪ್ರಕರಣ: ಸ್ಥಳಕ್ಕೆ ಆಗಮಿಸಿದ ಶ್ವಾನದಳ

ಕಳೆದ ಒಂದು ತಿಂಗಳಿನಲ್ಲೇ ಬರೋಬ್ಬರಿ 50 ಪಾಸಿಟಿವ್ ಕೇಸ್​ ರಿಜಿಸ್ಟರ್ ಆಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಹೊಸತೊಂದು ತಲೆ ನೋವು ಎದುರಾಗಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಪೈಕಿ ಶೇಕಡ 15 ರಿಂದ 20 ಪರ್ಸೆಂಟ್ ವೈರಲ್ ಫೀವರ್ ಪ್ರಕರಣಗಳೇ ಹೆಚ್ಚಾಗಿವೆ.

ಸದ್ಯ ಫೀಲ್ಡಿಗಿಳಿದಿರುವ ಆರೋಗ್ಯ ಇಲಾಖಾ ಸಿಬ್ಬಂದಿ ವೈರಲ್ ಫೀವರ್ ಗುಣ ಲಕ್ಷಣವಿರುವ ಮಾಹಿತಿ ಕಲೆ ಹಾಕಿ ಸ್ಥಳದಲ್ಲೇ ಕೆಲ ಮಾತ್ರೆಗಳನ್ನ ನೀಡುತ್ತಿದ್ದಾರೆ. ಡೆಂಗಿಯಿಂದ ಸೂಕ್ತ ಚಿಕಿತ್ಸೆ ಪಡೆಯಲು ಈಗಾಗಲೇ ಜಿಲ್ಲಾಧಿಕಾರಿ ಶಿಲ್ಪಾನಾಗ್ ಸೂಚಿಸಿದ್ದು. ವೈರಲ್ ಫೀವರ್ ರೋಗಿಗಳಿಗಾಗಿಯೇ ವಿಶೇಷ ವಾರ್ಡ್​ನ ಆಸ್ಪತ್ರೆಗಳಲ್ಲಿ ಮೀಸಲಿಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!