AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್

ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಇಂದು(ಆ.26) ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ.

ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್
ಡಿ ಕೆ ಶಿವಕುಮಾರ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 26, 2023 | 3:05 PM

Share

ಚಾಮರಾಜನಗರ, ಆ.26: ಭಾರತದಲ್ಲೇ ನಿಮಾರ್ಣವಾಗುತ್ತಿರುವ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಇಂದು(ಆ.26) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಇದು ಖಾಸಗಿ ಕಂಪನಿಯಿಂದ ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಇದಾಗಿದೆ. ಇಲ್ಲಿ ಸೌರವಿದ್ಯುತ್ ಸಂಗ್ರಹಿಸಿ ಬ್ಯಾಟರಿ ತಯಾರಿಕೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗುವ ಯೋಜನೆಯಾಗಿದೆ ಎಂದರು.

ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ

ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ. ಇನ್ನು ಇದೇ ವೇಳೆ ‘ಆರ್​.ಅಶೋಕ್​ಗೆ ಪ್ರೋಟೊಕಾಲ್(ಶಿಷ್ಠಾಚಾರ) ಗೊತ್ತೆಯಿಲ್ಲ. ನಾವು ಕಾಂಗ್ರೆಸ್​ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ. ಪ್ರಧಾನಿ ಮೋದಿಯವರು ಆಗಮಿಸಿದ್ದು ಆರ್. ಅಶೋಕ್​ಗೆ ಗೊತ್ತೆಯಿಲ್ಲ. ಏನೋ ಪ್ರಚಾರಕ್ಕೆ ಮಾತಾಡಬೇಕು ಎಂದು ಮಾದ್ಯಮದವರ ಮುಂದೆ ಮಾತನಾಡಿದ್ದಾರೆ ಅಷ್ಟೇ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ:ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್​: ವಿವಿಧ ಕಾಮಗಾರಿ ವೀಕ್ಷಣೆ, ಕಣ್ಣೀರು ಹಾಕಿದ ಬೀದಿಬದಿ ವ್ಯಾಪರಸ್ಥರು

ಹೊನ್ನಾಳಿ ಮಾಜಿ ಬಿಜೆಪಿ ಶಾಸಕ ಎಂ.ಪಿ ರೇಣುಕಚಾರ್ಯ ಡಿಕೆಶಿ ಭೇಟಿ ವಿಚಾರ ‘ ಅವರದ್ದು ಕೆಲ ಕುಂದು ಕೊರತೆ ಸ್ಥಳೀಯ ಮಟ್ಟದಲ್ಲಿ ಇರುತ್ತೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಿದ್ದೇನೆ ಜೊತೆಗೆ ಡಿಸಿಎಂ ಆಗಿದ್ದೇನೆ. ಹಾಗಾಗಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನಮಗೆ ಅಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಅವರಾಗೆ ಬರುವುದಿದ್ದರೆ ಬರಲಿ ಎಂದರು.

ಇನ್ನು ಇದೇ ವೇಳೆ ಸ್ಥಳೀಯರು ‘ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬದವರಿಗೆ ಕೆಲಸ ಕೊಡಲು ಮನವಿ ಸಲ್ಲಿಸಿದರು. ಜೊತೆಗೆ ಮೇಕೆದಾಟು ಯೋಜನೆ ಶೀಘ್ರ ಆರಂಭಕ್ಕೆ ರೈತರು ಒತ್ತಾಯಿಸಿದರು. ಇವರಿಗೆ ಸಚಿವ ಬೈರತಿ ಸುರೇಶ್, ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಾಥ್ ನೀಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sat, 26 August 23

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!