AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್

ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಸ್ಥಾಪನೆಗೆ ಇಂದು(ಆ.26) ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ.

ಚಾಮರಾಜನಗರ: ವಿಶ್ವದ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ ಡಿಕೆ ಶಿವಕುಮಾರ್
ಡಿ ಕೆ ಶಿವಕುಮಾರ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 26, 2023 | 3:05 PM

Share

ಚಾಮರಾಜನಗರ, ಆ.26: ಭಾರತದಲ್ಲೇ ನಿಮಾರ್ಣವಾಗುತ್ತಿರುವ ಮೊದಲ ಲಿಯಾನ್ ಬ್ಯಾಟರಿ ಘಟಕ ಸ್ಥಾಪನೆಗೆ ಇಂದು(ಆ.26) ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಇದು ಖಾಸಗಿ ಕಂಪನಿಯಿಂದ ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿದ್ದು, ವಿಶ್ವದ ಮೊದಲ ಕೃತಕ ಬುದ್ದಿ ಮತ್ತೆ (Artificial Intelligence) ಸಂಯೋಜಿತ, ಪರಿಸರ ಸ್ನೇಹಿ ಸ್ಮಾರ್ಟ್ ಬ್ಯಾಟರಿ ಉತ್ಪಾದನಾ ಘಟಕ ಇದಾಗಿದೆ. ಇಲ್ಲಿ ಸೌರವಿದ್ಯುತ್ ಸಂಗ್ರಹಿಸಿ ಬ್ಯಾಟರಿ ತಯಾರಿಕೆ ಮಾಡುವ ಮೂಲಕ ದೇಶಕ್ಕೆ ಮಾದರಿಯಾಗುವ ಯೋಜನೆಯಾಗಿದೆ ಎಂದರು.

ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ

ಇದಕ್ಕೆ ತಲಾ 500 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದ್ದು, ಚಾಮರಾಜನಗರ ಸೇರಿದಂತೆ ರಾಜ್ಯದ ನಾಲ್ಕು ಕಡೆ ಉತ್ಪಾದನಾ ಘಟಕ ನಿರ್ಮಾಣ ಮಾಡಲಾಗಿದೆ. ಇನ್ನು ಇದೇ ವೇಳೆ ‘ಆರ್​.ಅಶೋಕ್​ಗೆ ಪ್ರೋಟೊಕಾಲ್(ಶಿಷ್ಠಾಚಾರ) ಗೊತ್ತೆಯಿಲ್ಲ. ನಾವು ಕಾಂಗ್ರೆಸ್​ನವರು ಎಲ್ಲಾ ರೀತಿಯ ಪ್ರೋಟೊಕಾಲ್ ಪಾಲಿಸುತ್ತೇವೆ. ಪ್ರಧಾನಿ ಮೋದಿಯವರು ಆಗಮಿಸಿದ್ದು ಆರ್. ಅಶೋಕ್​ಗೆ ಗೊತ್ತೆಯಿಲ್ಲ. ಏನೋ ಪ್ರಚಾರಕ್ಕೆ ಮಾತಾಡಬೇಕು ಎಂದು ಮಾದ್ಯಮದವರ ಮುಂದೆ ಮಾತನಾಡಿದ್ದಾರೆ ಅಷ್ಟೇ ಎಂದು ಕಾಲೆಳೆದಿದ್ದಾರೆ.

ಇದನ್ನೂ ಓದಿ:ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್​: ವಿವಿಧ ಕಾಮಗಾರಿ ವೀಕ್ಷಣೆ, ಕಣ್ಣೀರು ಹಾಕಿದ ಬೀದಿಬದಿ ವ್ಯಾಪರಸ್ಥರು

ಹೊನ್ನಾಳಿ ಮಾಜಿ ಬಿಜೆಪಿ ಶಾಸಕ ಎಂ.ಪಿ ರೇಣುಕಚಾರ್ಯ ಡಿಕೆಶಿ ಭೇಟಿ ವಿಚಾರ ‘ ಅವರದ್ದು ಕೆಲ ಕುಂದು ಕೊರತೆ ಸ್ಥಳೀಯ ಮಟ್ಟದಲ್ಲಿ ಇರುತ್ತೆ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಿದ್ದೇನೆ ಜೊತೆಗೆ ಡಿಸಿಎಂ ಆಗಿದ್ದೇನೆ. ಹಾಗಾಗಿ ಭೇಟಿ ಮಾಡಿ ಚರ್ಚಿಸಿದ್ದಾರೆ. ನಮಗೆ ಅಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಅವರಾಗೆ ಬರುವುದಿದ್ದರೆ ಬರಲಿ ಎಂದರು.

ಇನ್ನು ಇದೇ ವೇಳೆ ಸ್ಥಳೀಯರು ‘ಆಕ್ಸಿಜನ್ ದುರಂತದಲ್ಲಿ ಮೃತಪಟ್ಟ ಸಂತ್ರಸ್ತ ಕುಟುಂಬದವರಿಗೆ ಕೆಲಸ ಕೊಡಲು ಮನವಿ ಸಲ್ಲಿಸಿದರು. ಜೊತೆಗೆ ಮೇಕೆದಾಟು ಯೋಜನೆ ಶೀಘ್ರ ಆರಂಭಕ್ಕೆ ರೈತರು ಒತ್ತಾಯಿಸಿದರು. ಇವರಿಗೆ ಸಚಿವ ಬೈರತಿ ಸುರೇಶ್, ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸಾಥ್ ನೀಡಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sat, 26 August 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!