AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಟೊಮೆಟೊ ಬೆಳೆ ನಾಶ ಪ್ರಕರಣ: ಸ್ಥಳಕ್ಕೆ ಆಗಮಿಸಿದ ಶ್ವಾನದಳ

ರೈತ ಕಷ್ಟಪಟ್ಟು ಬೆಳೆದ ಟೊಮೆಟೊ ಬೆಳೆ ಹಳೇ ದ್ವೇಷಕ್ಕೆ ನಾಶಗೊಂಡ ಘಟನೆ ಚಾಮರಾಜನಗರ ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ನಡೆದಿತ್ತು. ಈ ಘಟನಾ ಸ್ಥಳಕ್ಕೆ ಆಗಿಮಿಸಿದ ಶ್ವಾನದಳ, ತಪಾಸಣೆ ನಡೆಸುತ್ತಿದೆ.

ಚಾಮರಾಜನಗರದಲ್ಲಿ ಟೊಮೆಟೊ ಬೆಳೆ ನಾಶ ಪ್ರಕರಣ: ಸ್ಥಳಕ್ಕೆ ಆಗಮಿಸಿದ ಶ್ವಾನದಳ
ಗಿಡಗಳಿಂದ ಟೊಮೆಟೊಗಳನ್ನು ಕಿತ್ತೆಸೆದಿರುವುದು
ಸೂರಜ್ ಪ್ರಸಾದ್ ಎಸ್.ಎನ್
| Edited By: Rakesh Nayak Manchi|

Updated on: Aug 03, 2023 | 3:07 PM

Share

ಚಾಮರಾಜನಗರ, ಆಗಸ್ಟ್ 3: ತಾಲೂಕಿನ ಕೆಬ್ಬೇಪುರ ಗ್ರಾಮದಲ್ಲಿ ರಾತ್ರಿ ವೇಳೆ ದುಷ್ಕರ್ಮಿಗಳು ತೋಟಕ್ಕೆ ನುಗ್ಗಿ ಟೊಮೆಟೊ (Tomato) ಬೆಳೆ ನಾಶ ಮಾಡಿದ ಪ್ರಕರಣ ಸಂಬಂಧ ಸ್ಥಳಕ್ಕೆ ಶ್ವಾನದಳ ಆಗಮಿಸಿದ್ದು, ಜಮೀನಿನ ಸುತ್ತಲೂ ಪತ್ತೆ ಕಾರ್ಯ ನಡೆಸುತ್ತಿದೆ. ಆರೋಪಿಗಳ ವಾಸನೆ ಹಿಡಿದು ಪೊಲೀಸ್ ಶ್ವಾನಗಳು ಸಾಗುತ್ತಿವೆ.

ರೈತ ಮಂಜುನಾಥ್ ಚಿನ್ನಾಭರಣಗಳನ್ನು ಅಡವಿಟ್ಟು ಬ್ಯಾಂಕ್​ನಿಂದ ಸಾಲ ಪಡೆದು ಒಂದೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆ ಬೆಳೆದಿದ್ದರು. ಇನ್ನೇನು ಒಂದು ವಾರದಲ್ಲಿ ಬೆಳೆ ಕಟಾವು ಕಾರ್ಯ ನಡೆಸಬೇಕಿತ್ತು. ಭರ್ಜರಿ ಲಾಭಗಳಿಸುವ ಕನಸನ್ನೂ ಮಂಜುನಾಥ್ ಕಾಯುತ್ತಿದ್ದರು. ಆದರೆ ಈ ಟೊಮೆಟೊ ಬಳೆ ಹಳೇ ದ್ವೇಷಕ್ಕೆ ನಾಶಗೊಂಡಿದೆ.

ಇದನ್ನೂ ಓದಿ: Gadag News: ಗದಗ ಜಿಲ್ಲೆಯಲ್ಲಿ ಟೊಮೆಟೊ ಬೆಳೆದ ಏಕೈಕ ರೈತ, ಲಕ್ಷ ಲಕ್ಷ ಹಣ ಗಳಿಸಿದ ಅದೃಷ್ಟವಂತ

ರಾತ್ರೋರಾತ್ರಿ ಜಮೀನಿಗೆ ನುಗ್ಗಿದ ವ್ಯಕ್ತಿಗಳು, ಗಿಡಗಳಿಂದ ಟೊಮೆಟೊಗಳನ್ನು ಕೀಳಿ ಎಸೆದಿದ್ದಾರೆ. ಇತ್ತ ಬೆಳೆಗೆ ಮಾಡಿದ ಸಾಲ ತೀರಿಸಲಾಗದೆ ಅತ್ತ ಹಣವು ಸಿಗದೆ ತ್ರಿಶಂಕು ಸ್ಥಿತಿಯಲ್ಲಿ ರೈತ ಮಂಜುನಾಥ್ ಸಿಲುಕಿದ್ದಾರೆ ಜಮೀನು ಮಾರಾಟ ಮಾಡಬೇಕು, ಇಲ್ಲವೇ ನೇಣು ಹಾಕಿಕೊಳ್ಳಬೇಕಷ್ಟೆ ಎಂದು ಮಂಜುನಾತ್ ಕಣ್ಣೀರು ಹಾಕುತ್ತಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಕಾನೂನು ರೀತಿಯ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!