AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹದೇಶ್ವರ ಬೆಟ್ಟದಲ್ಲಿ ಮದ್ಯಪಾನ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಾಹಿತಿ ನೀಡಿದ ಅಬಕಾರಿ ಡಿಸಿ, ಪ್ರಕರಣ ದಾಖಲಿಸಿದ್ದೇವೆ ಎಂದು ಉತ್ತರಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ, ಪ್ರಕರಣ ದಾಖಲಿಸಿದರೆ ಏನು ಪ್ರಯೋಜನವಾಗುತ್ತದೆ? ಎಲ್ಲದಕ್ಕು ಕಡಿವಾಣ ಹಾಕಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ‌ ಎಂದು ಎಚ್ಚರಿಕೆ ನೀಡಿದರು.

ಮಹದೇಶ್ವರ ಬೆಟ್ಟದಲ್ಲಿ ಮದ್ಯಪಾನ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಸಿಎಂ ಸಿದ್ದರಾಮಯ್ಯ
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 27, 2023 | 8:40 PM

Share

ಚಾಮರಾಜನಗರ, ಸೆಪ್ಟೆಂಬರ್ 23: ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ಯಾರೂ ಮದ್ಯಪಾನ ಮಾಡಬಾರದು. ಆದರೆ, ಅಲ್ಲಿ‌ ಕುಡಿಯುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲಿ ಯಾವುದೇ ಮದ್ಯದಂಗಡಿ ಇಲ್ಲ. ಆದರೂ ಅಲ್ಲಿ ಮದ್ಯ ಹೇಗೆ ಸಿಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚಾಮರಾಜನಗರದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಿದ್ದರಾಮಯ್ಯ, ಇನ್ನು ಇಂತಹ ಪ್ರಕರಣಗಳು ಕಂಡು ಬಂದರೆ ಪೊಲೀಸರು ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಅಲ್ಲಿ ಕುಡಿಯಲು ಯಾರಿಗೂ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಮಾಹಿತಿ ನೀಡಿದ ಅಬಕಾರಿ ಡಿಸಿ, ಪ್ರಕರಣ ದಾಖಲಿಸಿದ್ದೇವೆ ಎಂದು ಉತ್ತರಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ, ಪ್ರಕರಣ ದಾಖಲಿಸಿದರೆ ಏನು ಪ್ರಯೋಜನವಾಗುತ್ತದೆ? ಎಲ್ಲದಕ್ಕು ಕಡಿವಾಣ ಹಾಕಬೇಕು, ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ‌ ಎಂದು ಎಚ್ಚರಿಕೆ ನೀಡಿದರು.

ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ಪ್ರಮಾಣ ಶೂನ್ಯ; ಸಿದ್ದರಾಮಯ್ಯ ಅಚ್ಚರಿ

ಎಸ್​ಸಿ, ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್​ನಲ್ಲಿ ಶಿಕ್ಷೆ ಪ್ರಮಾಣ ಶೂನ್ಯ ಇರುವ ಬಗ್ಗೆ ಕೆಡಿಪಿ ಸಭೆಯಲ್ಲಿ ಮಾಹಿತಿ ಕೇಳಿ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದರು. ಎಸ್ಪಿ ಪದ್ಮಿನಿ ಸಾಹು ಉದ್ದೇಶಿಸಿ ಮಾತನಾಡಿದ ಅವರು, ನೀನು ಹೊಸಬಳು ಇರಬಹುದು. ಸುಮ್ಮನೆ ವಾದ ಮಾಡಬೇಡ ಎಂದು ಸೂಚನೆ ನೀಡಿದರು.

ಪ್ರತಿ ವರ್ಷ 20- 25 ಕೇಸ್ ದಾಖಲಾಗುತ್ತಿವೆ. ಮೂರು ವರ್ಷಗಳಿಂದ ಒಂದೇ ಒಂದು ಕೇಸ್‌ನಲ್ಲಿ ಶಿಕ್ಷೆ ಆಗಿಲ್ಲ. 5 ಕೇಸ್ ವಜಾ ಆಗಿವೆ ಎಂದು ಎಸ್ಪಿ ವಿವರಿಸಿದರು. ಇದರಿಂದ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಅಲ್ಲಮ್ಮ, ಶಿಕ್ಷೆ ಆಗಲ್ಲ ಅಂದ್ರೆ ಭಯ ಹೇಗೆ ಬರುತ್ತೆ ? ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದರು. ಜತೆಗೆ, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯಗೆ ಸೂಚನೆ ನೀಡಿದರು.

ಇದನ್ನೂ ಓದಿ: ಕೃಷಿಗೆ ನಿಗದಿತ ಪ್ರಮಾಣದ ನೀರು ಬಿಟ್ಟಿಲ್ಲ; ಸಿಎಂ ಸಿದ್ದರಾಮಯ್ಯ ಎದುರು ಸತ್ಯ ಒಪ್ಪಿದ ಕಾವೇರಿ ನೀರಾವರಿ ನಿಗಮದ ಇಂಜಿನಿಯರ್‌

ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದ ಆಕ್ಸಿಜನ್ ದುರಂತ

ಕೋವಿಡ್ ಸಂಕ್ರಾಮಿಕದ ಸಂದರ್ಭದಲ್ಲಿ ಆಕ್ಸಿಜನ್ ದುರಂತದಿಂದ ಮೃತಪಟ್ಟವರ ಕುಟುಂಬದವರಿಗೆ ಖಾಯಂ ಉದ್ಯೋಗಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಕ್ಸಿಜನ್ ದುರಂತದಲ್ಲಿ 32 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಲು ಸೂಚಿಸಲಾಗಿತ್ತು. ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡುವುದು ಬೇಡ, ಖಾಯಂ ಉದ್ಯೋಗ ನೀಡೋಣ ಎಂದು ಪ್ರಯತ್ನ ಮಾಡುತ್ತಿದ್ದೇವೆ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?