AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಎಫೆಕ್ಟ್​; ದನಕರುಗಳಿಗೆ ಮೇವು ಒದಗಿಸಲಾಗದೆ ಕಸಾಯಿಖಾನೆಗೆ ಹಸುಗಳ ಮಾರಾಟ

ರಾಜ್ಯಾದ್ಯಂತ ಭೀಕರ ಬರಗಾಲ ಬಂದಿದ್ದು, ಬರದ ಎಫೆಕ್ಟ್ ಯಾವ ಮಟ್ಟಕ್ಕೆ ಅನ್ನದಾತನನ್ನು ಕಂಗಾಲು ಮಾಡಿದೆಯೆಂದರೆ, ತಮ್ಮ ಜಾನುವಾರುಗಳಿಗೆ ಮೇವುಣಿಸಲಾಗದೆ ಕಸಾಯಿಖಾನೆಗೆ ತಮ್ಮ ದನಕರಗಳನ್ನು ಮಾರಾಟ ಮಾಡುವಂತ ಪರಿಸ್ಥಿತಿ ಎದುರಾಗಿದೆ. 

ಬರದ ಎಫೆಕ್ಟ್​; ದನಕರುಗಳಿಗೆ ಮೇವು ಒದಗಿಸಲಾಗದೆ ಕಸಾಯಿಖಾನೆಗೆ ಹಸುಗಳ ಮಾರಾಟ
ಚಾಮರಾಜನಗರ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 12, 2023 | 10:13 PM

ಚಾಮರಾಜನಗರ, ಅ.12: ಜಿಲ್ಲೆಯಲ್ಲಿ ಬರದ ಛಾಯೆ ಎಷ್ಟರ ಮಟ್ಟಿಗೆ ಎಫೆಕ್ಟ್ ನೀಡಿದೆ ಅಂದರೆ, ಹಸು(Cow)ಗಳಿಗೆ ಮೇವನ್ನು ಸಹ ಒದಗಿಸಲಾಗದೆ ರೈತರು ಜಾನುವಾರುಗಳನ್ನು ಸಂತೆಯಲ್ಲಿ ಸಿಕ್ಕ ಸಿಕ್ಕ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಾರೆ. ಹೌದು, ಇದನ್ನೇ ಬಂಡವಾಳವಾಗಿಸಿಕೊಂಡ ಕಸಾಯಿಖಾನೆ ದಂಧೆಕೋರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.  ರೈತರ ವೇಷದಲ್ಲಿ ಜಿಲ್ಲೆಯ ತೆರಕಣಾಂಬಿ(Terakanambi)  ಸಂತೆಯಿಂದ ಜಾನುವಾರುಗಳನ್ನು ಕೊಂಡು ತಮಿಳುನಾಡಿನ ಅರಳವಾಡಿಗೆ ಕೊಂಡೊಯ್ಯಲಾಗುತ್ತಿದೆ. ಬಳಿಕ ಅಲ್ಲಿಂದ ಕಂಟೈನರ್ ಮೂಲಕ ನೆರೆಯ ಕೇರಳ ಹಾಗೂ ತಮಿಳುನಾಡಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ.

ಇನ್ನು ತೆರಕಣಾಂಬಿ ಸಂತೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ದನಕರುವನ್ನು ಮಾರಾಟ ಮಾಡಿದಾಗ ಸ್ಥಳೀಯ ಪಶು ವೈದ್ಯರಿಂದ ಅದನ್ನು ಸರ್ಟಿಫೈಡ್ ಮಾಡಬೇಕು. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮಾರಾಟ ಮಾಡಲಾಗುತ್ತಿದೆ. ಇನ್ನು ತೆರಕಣಾಂಬಿಯಿಂದ ತಮಿಳುನಾಡು ಅರಳವಾಡಿಗೆ 12ಕಿಲೋ ಮೀಟರ್ ಇದ್ದು, ರೈತರ ವೇಷ ತೊಟ್ಟು ದನಕರಗಳನ್ನು ಕಾಲ್ನಡಿಗೆಯ ಮೂಲಕವೇ ಗಡಿಯನ್ನ ದಾಟಿಸಲಾಗುತ್ತಿದೆ. ತಮಿಳುನಾಡಿನಿಂದ ದೊಡ್ಡ ಕಂಟೈನರ್ ಮೂಲಕ ಹಸುಗಳನ್ನ ಕೇರಳ ಹಾಗೂ ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದೆ.

ಇದನ್ನೂ ಓದಿ:ಅಸ್ಸಾಂನಲ್ಲಿ ಇನ್ಮುಂದೆ ಹಿಂದು ಧಾರ್ಮಿಕ ಪ್ರದೇಶಗಳ 5 ಕಿ.ಮೀ.ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಖರೀದಿ ಮಾಡುವಂತಿಲ್ಲ

ಕಣ್ಮುಂದೆಯೇ ಕಸಾಯಿಖಾನೆಗೆ ತಮ್ಮ ಜಾನುವಾರುಗಳನ್ನು ಮನಸ್ಸಿಲ್ಲದ ಮನಸ್ಸಿನಲ್ಲಿ ರೈತರು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಈಗ ಎದುರಾಗಿದೆ. ಹೌದು, ಬರದ ಹಿನ್ನಲೆ ಅವುಗಳಿಗೆ ಸರಿಯಾದ ಮೇವು ಸಿಗುತ್ತಿಲ್ಲ. ಹೀಗಿರುವಾಗ ಅವುಗಳಿಗೆ ಆಹಾರ ಎಲ್ಲಿಂದ ತರುವುದು ಎಂಬ ಚಿಂತೆಯಲ್ಲಿದ್ದ ರೈತ, ಇದೀಗ ಮಾರಾಟ ಮಾಡಲು ಮುಂದಾಗಿದ್ದಾನೆ. ಈ ಬರಗಾಲ ಅನ್ನದಾತನ ಪಾಲಿಗೆ ಮುಳುವಾಗಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ