ಬರದ ಎಫೆಕ್ಟ್​; ದನಕರುಗಳಿಗೆ ಮೇವು ಒದಗಿಸಲಾಗದೆ ಕಸಾಯಿಖಾನೆಗೆ ಹಸುಗಳ ಮಾರಾಟ

ರಾಜ್ಯಾದ್ಯಂತ ಭೀಕರ ಬರಗಾಲ ಬಂದಿದ್ದು, ಬರದ ಎಫೆಕ್ಟ್ ಯಾವ ಮಟ್ಟಕ್ಕೆ ಅನ್ನದಾತನನ್ನು ಕಂಗಾಲು ಮಾಡಿದೆಯೆಂದರೆ, ತಮ್ಮ ಜಾನುವಾರುಗಳಿಗೆ ಮೇವುಣಿಸಲಾಗದೆ ಕಸಾಯಿಖಾನೆಗೆ ತಮ್ಮ ದನಕರಗಳನ್ನು ಮಾರಾಟ ಮಾಡುವಂತ ಪರಿಸ್ಥಿತಿ ಎದುರಾಗಿದೆ. 

ಬರದ ಎಫೆಕ್ಟ್​; ದನಕರುಗಳಿಗೆ ಮೇವು ಒದಗಿಸಲಾಗದೆ ಕಸಾಯಿಖಾನೆಗೆ ಹಸುಗಳ ಮಾರಾಟ
ಚಾಮರಾಜನಗರ
Edited By:

Updated on: Oct 12, 2023 | 10:13 PM

ಚಾಮರಾಜನಗರ, ಅ.12: ಜಿಲ್ಲೆಯಲ್ಲಿ ಬರದ ಛಾಯೆ ಎಷ್ಟರ ಮಟ್ಟಿಗೆ ಎಫೆಕ್ಟ್ ನೀಡಿದೆ ಅಂದರೆ, ಹಸು(Cow)ಗಳಿಗೆ ಮೇವನ್ನು ಸಹ ಒದಗಿಸಲಾಗದೆ ರೈತರು ಜಾನುವಾರುಗಳನ್ನು ಸಂತೆಯಲ್ಲಿ ಸಿಕ್ಕ ಸಿಕ್ಕ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಾರೆ. ಹೌದು, ಇದನ್ನೇ ಬಂಡವಾಳವಾಗಿಸಿಕೊಂಡ ಕಸಾಯಿಖಾನೆ ದಂಧೆಕೋರರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.  ರೈತರ ವೇಷದಲ್ಲಿ ಜಿಲ್ಲೆಯ ತೆರಕಣಾಂಬಿ(Terakanambi)  ಸಂತೆಯಿಂದ ಜಾನುವಾರುಗಳನ್ನು ಕೊಂಡು ತಮಿಳುನಾಡಿನ ಅರಳವಾಡಿಗೆ ಕೊಂಡೊಯ್ಯಲಾಗುತ್ತಿದೆ. ಬಳಿಕ ಅಲ್ಲಿಂದ ಕಂಟೈನರ್ ಮೂಲಕ ನೆರೆಯ ಕೇರಳ ಹಾಗೂ ತಮಿಳುನಾಡಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ.

ಇನ್ನು ತೆರಕಣಾಂಬಿ ಸಂತೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ದನಕರುವನ್ನು ಮಾರಾಟ ಮಾಡಿದಾಗ ಸ್ಥಳೀಯ ಪಶು ವೈದ್ಯರಿಂದ ಅದನ್ನು ಸರ್ಟಿಫೈಡ್ ಮಾಡಬೇಕು. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮಾರಾಟ ಮಾಡಲಾಗುತ್ತಿದೆ. ಇನ್ನು ತೆರಕಣಾಂಬಿಯಿಂದ ತಮಿಳುನಾಡು ಅರಳವಾಡಿಗೆ 12ಕಿಲೋ ಮೀಟರ್ ಇದ್ದು, ರೈತರ ವೇಷ ತೊಟ್ಟು ದನಕರಗಳನ್ನು ಕಾಲ್ನಡಿಗೆಯ ಮೂಲಕವೇ ಗಡಿಯನ್ನ ದಾಟಿಸಲಾಗುತ್ತಿದೆ. ತಮಿಳುನಾಡಿನಿಂದ ದೊಡ್ಡ ಕಂಟೈನರ್ ಮೂಲಕ ಹಸುಗಳನ್ನ ಕೇರಳ ಹಾಗೂ ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದೆ.

ಇದನ್ನೂ ಓದಿ:ಅಸ್ಸಾಂನಲ್ಲಿ ಇನ್ಮುಂದೆ ಹಿಂದು ಧಾರ್ಮಿಕ ಪ್ರದೇಶಗಳ 5 ಕಿ.ಮೀ.ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟ, ಖರೀದಿ ಮಾಡುವಂತಿಲ್ಲ

ಕಣ್ಮುಂದೆಯೇ ಕಸಾಯಿಖಾನೆಗೆ ತಮ್ಮ ಜಾನುವಾರುಗಳನ್ನು ಮನಸ್ಸಿಲ್ಲದ ಮನಸ್ಸಿನಲ್ಲಿ ರೈತರು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಈಗ ಎದುರಾಗಿದೆ. ಹೌದು, ಬರದ ಹಿನ್ನಲೆ ಅವುಗಳಿಗೆ ಸರಿಯಾದ ಮೇವು ಸಿಗುತ್ತಿಲ್ಲ. ಹೀಗಿರುವಾಗ ಅವುಗಳಿಗೆ ಆಹಾರ ಎಲ್ಲಿಂದ ತರುವುದು ಎಂಬ ಚಿಂತೆಯಲ್ಲಿದ್ದ ರೈತ, ಇದೀಗ ಮಾರಾಟ ಮಾಡಲು ಮುಂದಾಗಿದ್ದಾನೆ. ಈ ಬರಗಾಲ ಅನ್ನದಾತನ ಪಾಲಿಗೆ ಮುಳುವಾಗಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us