AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆಗಟ್ಟಿದ ಚಿಕ್ಕಲ್ಲೂರು ಜಾತ್ರೆ.. ಸಾಂಪ್ರದಾಯಿಕವಾಗಿ ನೆರವೇರಿದ ಚಂದ್ರಮಂಡಲೋತ್ಸವ

ಮಠದ ಸಿಬ್ಬಂದಿ ಹಾಗೂ ಚಂದ್ರಮಂಡಲ ತಂಡದವರು ದವಸ ಧಾನ್ಯ ಹಾಗೂ ಹಣ್ಣು ಮತ್ತು ನಾಣ್ಯಗಳನ್ನು ಮಂಡಲಕ್ಕೆ ಎಸೆದಿದ್ದು, ಯಾವ ದಿಕ್ಕಿಗೆ ಬಾಗಿ ಜ್ಯೋತಿ ಹುರಿಯುತ್ತದೇಯೊ, ಆ ಭಾಗದಲ್ಲಿ ಉತ್ತಮ ಮಳೆ, ಬೆಳೆಯಾಗಿ ಸುಭಿಕ್ಷೆ ಮತ್ತು ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ.

ಕಳೆಗಟ್ಟಿದ ಚಿಕ್ಕಲ್ಲೂರು ಜಾತ್ರೆ.. ಸಾಂಪ್ರದಾಯಿಕವಾಗಿ ನೆರವೇರಿದ ಚಂದ್ರಮಂಡಲೋತ್ಸವ
ಸಿದ್ಧಪ್ಪಾಜಿ ದೇವಾಲಯದ ಚಿತ್ರಣ
preethi shettigar
| Updated By: ಸಾಧು ಶ್ರೀನಾಥ್​|

Updated on: Jan 29, 2021 | 5:36 PM

Share

ಚಾಮರಾಜನಗರ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಬೇಕಿದ್ದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸುಪ್ರಸಿದ್ಧ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರೆ‌ಯ ಮೊದಲನೇ ದಿನದ ಚಂದ್ರಮಂಡಲೋತ್ಸವ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.

ಕೋವಿಡ್ -19 ನಿಂದಾಗಿ ಜಿಲ್ಲಾಡಳಿತ ಚಿಕ್ಕಲ್ಲೂರು ಜಾತ್ರೆಗೆ ಸಾರ್ವಜನಿಕರ ಸಂಪೂರ್ಣ ನಿರ್ಬಂಧ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಜನಜಂಗುಳಿ‌ ನಡುವೆಯೇ‌ ನೆರವೇರುತ್ತಿದ್ದ ಚಿಕ್ಕಲ್ಲೂರಯ್ಯನ ಜಾತ್ರೆ ಈ ಬಾರಿ ಭಕ್ತರಿಲ್ಲದೆ ದೇವಾಲಯದ ಆವರಣ ಕಳೆಗುಂದಿದ್ದು, ದೀಪಾಲಂಕಾರ, ತಳಿರು ತೋರಣ, ಹೂ ಅಲಂಕಾರವೂ ಸಾಮಾನ್ಯವಾಗಿತ್ತು.

ಹಳೇ ಮಠದಿಂದ ತಮಟೆ, ಡೊಳ್ಳು, ಕಂಸಾಳೆ, ಜಾಗಟೆ, ಕೊಂಬು ಕಹಳೆ ಸದ್ದಿನಲ್ಲಿ ನಿಶಾನೆ, ಛತ್ರಿ,ಚಾಮರ, ಸತ್ತಿಗೆ ಸೂರಪಾನಿ, ಚೆನ್ನಯ್ಯ ಲಿಂಗಯ್ಯ ಉರಿ ಕಂಡಾಯಗಳೊಡನೆ ಬಸವನ ಮುಂದೆ ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಜ್ಞಾನಾನಂದ ಚೆನ್ನರಾಜೇ ಅರಸ್ ಅವರು‌ ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಸಿದ್ದಪ್ಪಾಜಿ‌ ಐಕ್ಯ ಗದ್ದುಗೆಗೆ ಪೂಜಾ ಕೈಂಕರ್ಯಗಳನ್ನು ನೇರವೇರಿಸಿದರು.

chikkalluru jathre 1

ದೇವಾಲಯದ ಚಿತ್ರಣ

ಸುತ್ತೇಳು ಗ್ರಾಮಸ್ಥರು ನೀಡಿದ್ದ ಹಚ್ಚೆ, ಬಿದಿರು, ಪಂಜು ಎಣ್ಣೆ ಇನ್ನಿತರ ಸಾಮಾಗ್ರಿಗಳನ್ನು ಸೇರಿಸಿ ಘನನೀಲಿಯ ಗದ್ದುಗೆ ಚಂದ್ರಮಂಡಲ ಕಟ್ಟೆಯಲ್ಲಿ ಸಿದ್ಧವಾಗಿದ್ದ ಸಿದ್ಧಪ್ಪಾಜಿ ಚಂದ್ರಮಂಡಲದ ಸುತ್ತ3ಪ್ರದಕ್ಷಿಣೆ ಹಾಕಿದ ಸ್ವಾಮಿಗಳು ನಂತರ ವಿಶೇಷ ಪೂಜೆ‌ ಸಲ್ಲಿಸಿದರು.

chikkalluru jathre 2

ಸ್ವಾಮೀಜಿ ಶ್ರೀ ಜ್ಞಾನಾನಂದ ಚೆನ್ನರಾಜೇ ಅರಸ್ ಪೂಜೆ ನೆರವೆರಿಸುತ್ತಿರುವ ದೃಶ್ಯ

ಉತ್ತರ ದಿಕ್ಕಿಗೆ ಬಾಗಿದ‌ ಚಂದ್ರ ಮಂಡಲ: ಪ್ರತಿ ವರ್ಷದಂತೆ ಚಿಕ್ಕಲ್ಲೂರು ಜಾತ್ರೆಗೆ ಚಂದ್ರಮಂಡಲದಿಂದ ತೆರೆಬೀಳಲಿದ್ದು. ಶ್ರೀ ಜ್ಞಾನಾನಂದ ಚೆನ್ನರಾಜೇ ಅರಸ್ ಗುರುವಾರ ರಾತ್ರಿ 10.35 ಕ್ಕೆ ಚಂದ್ರಮಂಡಲಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಆಕಾಶಕ್ಕೆ ಮುಖಮಾಡಿ‌ ಪ್ರಜ್ವಲಿಸಿ ಹೊತ್ತಿಹುರಿದ ಚಂದ್ರಮಂಡಲ ಉತ್ತರ ದಿಕ್ಕಿಗೆ ಬಾಗಿ ಉರಿಯಿತು.

chikkalluru jathre 3

ಚಿಕ್ಕಲ್ಲೂರು ಜಾತ್ರೆ‌ಯ ದೃಶ್ಯ

ಮಠದ ಸಿಬ್ಬಂದಿಗಳು ಹಾಗೂ ಚಂದ್ರಮಂಡಲ ತಂಡದವರು ದವಸ ಧಾನ್ಯ ಹಾಗೂ ಹಣ್ಣು ಮತ್ತು ನಾಣ್ಯಗಳನ್ನು ಮಂಡಲಕ್ಕೆ ಎಸೆದಿದ್ದು, ಯಾವ ದಿಕ್ಕಿಗೆ ಬಾಗಿ ಜ್ಯೋತಿ ಹುರಿಯುತ್ತದೇಯೊ, ಆ ಭಾಗದಲ್ಲಿ ಉತ್ತಮ ಮಳೆ, ಬೆಳೆಯಾಗಿ ಸುಭಿಕ್ಷೆ ಮತ್ತು ಸಮೃದ್ಧಿಯಾಗುತ್ತದೆ ಎಂಬುದು ಇಲ್ಲಿನ ನಂಬಿಕೆಯಾಗಿದೆ.

ಕೋವಿಡ್ -19 ಬಿಗಿ ಪೊಲೀಸ್ ಬಂದೋಬಸ್ತ್‌ : ಚಿಕ್ಕಲ್ಲೂರಿಗೆ ತೆರಳುವ ಮಾರ್ಗ‌ ಮಧ್ಯೆ ಸಿಗುವ ಮತ್ತೀಪುರ, ಕೊತ್ತನೂರು‌ ಹಾಗೂ ಬಾಣೂರು ಕ್ರಾಸ್ ಬಳಿ ಚೆಕ್ ಪೋಸ್ಟ್ ತೆರೆಯಲಾಗಿತ್ತು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಆದೇಶದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರ ಥಾಮಸ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗರಾಜು ನೇತೃತ್ವದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗಿತ್ತು. ಜಿಲ್ಲೆ ಹಾಗೂ ಇತರ ಕಡೆಗಳಿಂದ ಭಕ್ತಾದಿಗಳು ಆಗಮಿಸಿದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಿ‌ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಮೊದಲನೇ ದಿನದ ಚಂದ್ರಮಂಡಲೋತ್ಸವ

ಪೋಲಿಸರ‌ ಕಣ್ಣು ತಪ್ಪಿಸಿ ಬಂದ ಭಕ್ತರು ಲಾಕ್ : ಸಾರ್ವಜನಿಕರ ನಿರ್ಬಂಧವಿದ್ದರಿಂದ ದೇವಸ್ಥಾನದ 200 ಮೀ ಸುತ್ತ ಪೊಲೀಸರು ಸರ್ಪಗಾವಲಿತ್ತು. ಸಮೀಪದ ಗ್ರಾಮಸ್ಥರು ಚಂದ್ರಮಂಡಲ ವಿಕ್ಷೀಸಲು ಬರುತ್ತಿದಂತೆ‌ ಅಡ್ಡಗಟ್ಟಿದ ಪೊಲೀಸರು ಸಾರ್ವಜನಿಕರನ್ನು ದೇವಾಲಯದ ಆವರಣಕ್ಕೆ ತೆರಳಲು ಬಿಡಲಿಲ್ಲ.

ಶ್ರೀ ಕ್ಷೇತ್ರ ಚಿಕ್ಕಲ್ಲೂರು

ಐದು ದಿನಗಳ ಜಾತ್ರೆ : ಜನವರಿ 28 ರಿಂದ 5 ದಿನಗಳ ಕಾಲ ನಡೆಯುವ ಚಿಕ್ಕಲ್ಲೂರು ಜಾತ್ರೆ ಸರಳ ಹಾಗೂ ಸಂಪ್ರದಾಯಿಕವಾಗಿ ನಡೆದಿದ್ದು. 28 ರಂದು‌ ಚಂದ್ರಮಂಡಲೋತ್ಸವ, 29 ಹುಲಿವಾಹನೋತ್ಸವ, 30 ರಂದು ರುಧ್ರಾಕ್ಷಿಮಂಟಪೋತ್ಸವ(ಮುಡಿಸೇವೆ), 31 ರಂದು ಗಜವಾಹನೋತ್ಸವ ( ಪಂಕ್ತಿಸೇವೆ) 1 ರಂದು ಮುತ್ತುರಾಯರ ಸೇವೆ ನೆರವೇರಲಿದೆ.

ಒಟ್ಟಾರೆ ಲಕ್ಷಾಂತರ ಜನಸ್ತೊಮದ ನಡುವೆ ವಿಜೃಭಣೆಯಿಂದ ನಡೆಯುತ್ತಿದ್ದ ಚಂದ್ರಮಂಡಲ ಕೊವೀಡ್- 19 ನಿಂದಾಗಿ ಸರಳವಾಗಿ ಆಚರಿಸಲ್ಪಟಿದ್ದು, ಈ ಪ್ರಸಂಗ ಚಿಕ್ಕಲ್ಲೂರು ಜಾತ್ರೆಯ ಪರಂಪರೆಯಲ್ಲಿ ಇದೇ ಮೊದಲು ಎಂದು ತಿಳಿದು ಬಂದಿದೆ.

ಕೊರೊನಾ ನಡುವೆಯೂ ಜನ ಜಾತ್ರೆಯಲ್ಲಿ ಭಾಗಿ, ಅಧಿಕಾರಿಗಳೋ.. ಗಪ್ ಚುಪ್!

ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?