ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬರದ ಎಫೆಕ್ಟ್ – ಅನ್ನದಾತ ಕಂಗಾಲು, ಮೇವುಣಿಸಲಾಗದೆ ಕಸಾಯಿಖಾನೆಗೆ ದನಕರು ಮಾರಾಟ, ಕಸಾಯಿಖಾನೆ ದಂಧೆಕೋರರಿಗೆ ದುರ್ಲಾಭ

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ತೀವ್ರ ಬರ ಅನ್ನದಾತನ ಪಾಲಿಗೆ ಗಂಟಲಿನ ಮುಳ್ಳಾಗಿದೆ. ಮನಸ್ಸಿಲ್ಲದ ಮನಸ್ಸಿನಲ್ಲಿ ಕಣ್ಮುಂದೆಯೆ ರೈತರು ತಮ್ಮ ರಾಸುಗಳನ್ನ ಕಸಾಯಿಖಾನೆಗೆ ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಆದರೆ ಇದರ ದುರ್ಲಾಭ ಪಡೆಯುತ್ತಿರುವವರು ಮಾತ್ರ ಕಸಾಯಿಖಾನೆ ದಂಧೆಕೋರರು

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಬರದ ಎಫೆಕ್ಟ್ - ಅನ್ನದಾತ ಕಂಗಾಲು, ಮೇವುಣಿಸಲಾಗದೆ ಕಸಾಯಿಖಾನೆಗೆ ದನಕರು ಮಾರಾಟ, ಕಸಾಯಿಖಾನೆ ದಂಧೆಕೋರರಿಗೆ ದುರ್ಲಾಭ
ಚಾಮರಾಜನಗರದಲ್ಲಿ ಬರ ಎಫೆಕ್ಟ್: ಅನ್ನದಾತ ಕಂಗಾಲು, ಕಸಾಯಿಖಾನೆಗೆ ದನಕರು ಸೇಲ್
Edited By:

Updated on: Oct 13, 2023 | 11:15 AM

ಬರದ ಎಫೆಕ್ಟ್ (drought) ಯಾವ ಮಟ್ಟಕ್ಕೆ ಅನ್ನದಾತನನ್ನ ಕಂಗಾಲು (distressed farmers) ಮಾಡಿದೆಯಂದ್ರೆ ತಮ್ಮ ಜಾನುವಾರುಗಳಿಗೆ ಮೇವುಣಿಸಲಾಗದೆ ಕಸಾಯಿಖಾನೆಗೆ ತಮ್ಮ ದನಕರಗಳನ್ನ ಮಾರಾಟ ಮಾಡುವಂತ ಪರಿಸ್ಥಿತಿ ಎದುರಾಗಿದೆ ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ. ಕೈಯಲ್ಲಿ ಕೋಲು.. ಪಂಚೆ ತೊಟ್ಟು ರಾಸುಗಳನ್ನ ತೆಗೆದು ಕೊಂಡು ಹೋಗುತ್ತಿರುವ ವ್ಯಕ್ತಿಗಳು. ಈ ದೃಶ್ಯ ನೋಡಿದ್ರೆ, ಗುರುವಾರದ ತೆರಕಣಾಂಬಿ ಸಂತೆಯಲ್ಲಿ ಜಾನುವಾರುಗಳನ್ನ ಕೊಂಡು ರೈತ ತೆಗೆದುಕೊಂಡು ಹೋಗುತ್ತಿದ್ದಾನೆ ಎಂಬ ಕಲ್ಪನೆ ಮೂಡುತ್ತೆ. ಆದ್ರೆ ಅಸಲಿಯತ್ತೆ ಬೇರೆ. ಮಳೆ ಕೈ ಕೊಟ್ಟ ಹಿನ್ನಲೆ ಚಾಮರಾಜನಗರದಲ್ಲಿ (Chamarajanagar) ಬರದ ಛಾಯೆ ಎಷ್ಟರ ಮಟ್ಟಿಗೆ ಎಫೆಕ್ಟ್ ನೀಡಿದೆ ಎಂದ್ರೆ ರಾಸುಗಳಿಗೆ ಮೇವನ್ನ ಸಹ ಒದಗಿಸಲಾಗದೆ ರೈತರು ಜಾನುವಾರು ಸಂತೆಯಲ್ಲಿ ಸಿಕ್ಕ ಸಿಕ್ಕ ಮೊತ್ತಕ್ಕೆ ಜಾನುವಾರುಗಳನ್ನ ಮಾರಾಟ ಮಾಡುತ್ತಿದ್ದಾನೆ.

ಇದನ್ನೆ ಬಂಡವಾಳವಾಗಿಸಿಕೊಂಡ ಕಸಾಯಿಖಾನೆ ದಂಧೆಕೋರರು ಈ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ತೆರಕಣಾಂಬಿ ಸಂತೆಯಿಂದ ಜಾನುವಾರುಗಳನ್ನ ಕೊಂಡು ರೈತರ ವೇಷದಲ್ಲಿ ತಮಿಳುನಾಡಿನ ಅರಳವಾಡಿಗೆ ಕೊಂಡೊಯ್ಯಲಾಗುತ್ತಿದೆ. ಬಳಿಕ ಅಲ್ಲಿಂದ ಕಂಟೈನರ್ ಮೂಲಕ ನೆರೆಯ ಕೇರಳ ಹಾಗೂ ತಮಿಳುನಾಡಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ.

ಇನ್ನು ತೆರಕಣಾಂಬಿ ಸಂತೆಯಲ್ಲಿ ಎಲ್ಲ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ದನಕರವನ್ನ ಮಾರಾಟ ಮಾಡಿದಾಗ ಸ್ಥಳೀಯ ಪಶು ವೈದ್ಯ ಅದನ್ನ ಸರ್ಟಿಫೈಡ್ ಮಾಡ್ಬೇಕು. ಆದ್ರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮಾರಾಟ ಮಾಡಲಾಗುತ್ತಿದೆ. ಇನ್ನು ತೆರಕಣಾಂಬಿ ಯಿಂದ ತಮಿಳುನಾಡು ಅರಳವಾಡಿಗೆ 12 ಕಿಲೋ ಮೀಟರ್ ಇದ್ದು ರೈತರ ವೇಷ ತೊಟ್ಟು ದನಕರಗಳನ್ನ ಕಾಲ್ನಡಿಗೆಯ ಮೂಲಕವೇ ಗಡಿಯನ್ನ ದಾಟಿಸಲಾಗುತ್ತಿದೆ. ತಮಿಳುನಾಡಿನಿಂದ ದೊಡ್ಡ ಕಂಟೈನರ್ ಮೂಲಕ ರಾಸುಗಳನ್ನ ಕೇರಳ ಹಾಗೂ ತಮಿಳುನಾಡಿನ ಕಸಾಯಿಖಾನೆಗೆ ಸಾಗಾಟ ಮಾಡಲಾಗುತ್ತಿದೆ.

Also Read: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರದಿಂದ ಸರ್ಕಸ್, ಚಿನ್ನದ ಮೊಟ್ಟೆ ಗಣಿ ಇಲಾಖೆಯಲ್ಲಿ ರಾಜಧನ ಸೊರಿಕೆ ತಡೆಗೆ ವಿನೂತನ ಪ್ಲಾನ್!

ಕಣ್ಮುಂದೆಯೆ ಕಸಾಯಿಖಾನೆಗೆ ತಮ್ಮ ಜಾನುವಾರುಗಳನ್ನ ಮನಸ್ಸಿಲ್ಲದ ಮನಸ್ಸಿನಲ್ಲಿ ರೈತರು ತಮ್ಮ ರಾಸುಗಳನ್ನ ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಈಗ ಎದುರಾಗಿದೆ. ಬರದ ಎಫೆಕ್ಟ್ ಅನ್ನದಾತನ ಪಾಲಿಗೆ ಮುಳುವಾಗಿರುವುದಂತು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:15 am, Fri, 13 October 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us