ಸಿಎಂ ಕ್ಷೇತ್ರ ವರುಣಾದಲ್ಲೇ ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದಲ್ಲೇ ಚೆಸ್ಕಾಂ ಅಧಿಕಾರಿಗಳು ಅಂಧ ವೃದ್ಧೆಯ ಮೇಲೆ ದರ್ಪ ತೋರಿದ್ದಾರೆ. ಭಾಗ್ಯಜ್ಯೋತಿ ಯೋಜನೆ ಫಲಾನುಭವಿ ವೃದ್ಧೆಗೆ ತಪ್ಪಾಗಿ ವಿದ್ಯುತ್ ಬಿಲ್ ನೀಡಿದ ಚೆಸ್ಕಾಂ ಸಿಬ್ಬಂದಿ, ಬಿಲ್ ಪಾವತಿ ಮಾಡಿಲ್ಲವೆಂದು ಫ್ಯೂಸ್ ತೆಗೆಯಲು ಯತ್ನಿಸಿದ್ದಾರೆ. ಇದಕ್ಕೆ ಪ್ರತಿರೋಧ ತೋರಿದಾಗ ವೃದ್ಧೆಯನ್ನು ತಳ್ಳಾಡಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಿಎಂ ಕ್ಷೇತ್ರ ವರುಣಾದಲ್ಲೇ ವಿದ್ಯುತ್ ಬಿಲ್ ಕಟ್ಟಿಲ್ಲವೆಂದು ವೃದ್ಧೆಯ ಮೇಲೆ ಚೆಸ್ಕಾಂ ಸಿಬ್ಬಂದಿ ದೌರ್ಜನ್ಯ
ಚಾಮರಾಜನಗರ ಸಿಮ್ಸ್‌ ಆಸ್ಪತ್ರೆಯಲ್ಲಿ ಮಹದೇವಮ್ಮ
Edited By:

Updated on: Oct 30, 2025 | 11:47 AM

ಬೆಂಗಳೂರು, ಅಕ್ಟೋಬರ್ 30: ಸಿಎಂ ಸಿದ್ದರಾಮಯ್ಯ (Siddaramaiah) ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ (CHESCOM) ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ ವೃದ್ಧೆಯನ್ನು ತಳ್ಳಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹದೇವಮ್ಮ ಎಂಬ 80 ವರ್ಷದ ಅಂಧ ವೃದ್ಧೆಯ ಮನೆಗೆ ಚೆಸ್ಕಾಂ ಸಿಬ್ಬಂದಿ ಬಂದು 5,000 ರೂ. ಕರೆಂಟ್ ಬಿಲ್‌ ಪಾವತಿಸಲು ಒತ್ತಾಯಿಸಿದ್ದಾರೆ. ಈ ವೇಳೆ, ತಾವು ಭಾಗ್ಯಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವುದಾಗಿಯೂ, ತಪ್ಪು ಬಿಲ್ ಬಂದಿದ್ದು, ಅದನ್ನು ಕಟ್ಟಲು ಸಾಧ್ಯವಿಲ್ಲವೆಂದು ಅವರು ತಿಳಿಸಿದ್ದರು. ಆದರೂ ಸಿಬ್ಬಂದಿ ಬಲವಂತವಾಗಿ ಫ್ಯೂಸ್ ಮತ್ತು ಮೀಟರ್ ಬೋರ್ಡ್ ತೆಗೆದುಹಾಕಲು ಯತ್ನಿಸಿದ್ದಾರೆ. ಈ ವೇಳೆ ವೃದ್ಧೆ ಮಹದೇವಮ್ಮ ವಿರೋಧ ವ್ಯಕ್ತಪಡಿಸಿದಾಗ, ‘ನಮ್ಮ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದ್ದೀಯಾ’ ಎಂದು ಸಿಬ್ಬಂದಿ ಕೋಪಗೊಂಡು ತಳ್ಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!

ಈ ಘಟನೆ ವೇಳೆ ಅಂಧ ವೃದ್ಧೆ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಚಾಮರಾಜನಗರ ಸಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಮಹದೇವಮ್ಮ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಅಂಧ ವೃದ್ಧೆಯ ಮೇಲೆ ದೌರ್ಜನ್ಯ ಎಸಗಿದ ಚೆಸ್ಕಾಂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 am, Thu, 30 October 25

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us