AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು

ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಬಿಜೆಪಿಯ ಆರು ಮಂದಿ ಸದಸ್ಯರು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದು, ಇದಕ್ಕಾಗಿ ಅವರಿಗೆ ದೊಡ್ಡ ಆಫರ್ ಕೂಡ ದೊರೆತಿದೆ!

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 04, 2024 | 2:15 PM

Share

ಚಾಮರಾಜನಗರ, ಸೆಪ್ಟೆಂಬರ್ 4: ಗಡಿ ನಾಡು ಚಾಮರಾಜನಗರದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. ‘ಆಪರೇಷನ್ ಹಸ್ತ’ದ ಮೂಲಕ 6 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಮಂದಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಆಪರೇಷನ್ ಹಸ್ತದ ಮೂಲಕ ಬಿಜೆಪಿಯ 6 ಮಂದಿ ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್​​ಗೆ ಬೆಂಬಲ ನೀಡಿದ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅದ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿಯಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮಿನೇಷನ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಂಕಷ್ಟದಿಂದ ಪಾರು ಮಾಡುವಂತೆ ಯತೀಂದ್ರ ಬ್ರಿಗೇಡ್​​ನಿಂದ ಮಾದಪ್ಪಗೆ ವಿಶೇಷ ಪೂಜೆ

ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಬಹುತೇಕ ಅಧ್ಯಕ್ಷಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಚುನಾವಣೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?