AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು

ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಬಿಜೆಪಿಯ ಆರು ಮಂದಿ ಸದಸ್ಯರು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದು, ಇದಕ್ಕಾಗಿ ಅವರಿಗೆ ದೊಡ್ಡ ಆಫರ್ ಕೂಡ ದೊರೆತಿದೆ!

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 04, 2024 | 2:15 PM

Share

ಚಾಮರಾಜನಗರ, ಸೆಪ್ಟೆಂಬರ್ 4: ಗಡಿ ನಾಡು ಚಾಮರಾಜನಗರದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. ‘ಆಪರೇಷನ್ ಹಸ್ತ’ದ ಮೂಲಕ 6 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಮಂದಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಆಪರೇಷನ್ ಹಸ್ತದ ಮೂಲಕ ಬಿಜೆಪಿಯ 6 ಮಂದಿ ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್​​ಗೆ ಬೆಂಬಲ ನೀಡಿದ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅದ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿಯಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮಿನೇಷನ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಂಕಷ್ಟದಿಂದ ಪಾರು ಮಾಡುವಂತೆ ಯತೀಂದ್ರ ಬ್ರಿಗೇಡ್​​ನಿಂದ ಮಾದಪ್ಪಗೆ ವಿಶೇಷ ಪೂಜೆ

ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಬಹುತೇಕ ಅಧ್ಯಕ್ಷಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಚುನಾವಣೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?