ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು

ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ಸಂದರ್ಭದಲ್ಲೇ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಬಿಜೆಪಿಯ ಆರು ಮಂದಿ ಸದಸ್ಯರು ಕಾಂಗ್ರೆಸ್​ಗೆ ಬೆಂಬಲ ಸೂಚಿಸಿದ್ದು, ಇದಕ್ಕಾಗಿ ಅವರಿಗೆ ದೊಡ್ಡ ಆಫರ್ ಕೂಡ ದೊರೆತಿದೆ!

ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
ಚಾಮರಾಜನಗರದಲ್ಲಿ ಬಿಜೆಪಿಗೆ ಆಪರೇಷನ್ ಹಸ್ತದ ಶಾಕ್: ‘ಕೈ’ ಹಿಡಿದ 6 ಸದಸ್ಯರು
Edited By:

Updated on: Sep 04, 2024 | 2:15 PM

ಚಾಮರಾಜನಗರ, ಸೆಪ್ಟೆಂಬರ್ 4: ಗಡಿ ನಾಡು ಚಾಮರಾಜನಗರದಲ್ಲಿ ಬಿಜೆಪಿಗೆ ದೊಡ್ಡ ಆಘಾತ ಎದುರಾಗಿದೆ. ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ. ‘ಆಪರೇಷನ್ ಹಸ್ತ’ದ ಮೂಲಕ 6 ಮಂದಿ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಈ ಬೆಳವಣಿಗೆ ನಡೆದಿದೆ.

13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಮಂದಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಆಪರೇಷನ್ ಹಸ್ತದ ಮೂಲಕ ಬಿಜೆಪಿಯ 6 ಮಂದಿ ಕಾಂಗ್ರೆಸ್​​ಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್​​ಗೆ ಬೆಂಬಲ ನೀಡಿದ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ.

ಅದ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿಯಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮಿನೇಷನ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನ ಸಂಕಷ್ಟದಿಂದ ಪಾರು ಮಾಡುವಂತೆ ಯತೀಂದ್ರ ಬ್ರಿಗೇಡ್​​ನಿಂದ ಮಾದಪ್ಪಗೆ ವಿಶೇಷ ಪೂಜೆ

ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಬಹುತೇಕ ಅಧ್ಯಕ್ಷಸ್ಥಾನ ಅವಿರೋಧ ಆಯ್ಕೆ ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಪುರಸಭೆ ಭವನದಲ್ಲಿ ಚುನಾವಣೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us