ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ

ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆಗಳಲ್ಲಿ ರಾತ್ರಿಯ ಸಮಯದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ಗ್ರೀನ್ ಟ್ಯಾಕ್ಸ್ ಮತ್ತು ಅಕ್ರಮ ಸಾಗಾಟದ ವಿರುದ್ಧವೂ ಪ್ರತಿಭಟನೆ ನಡೆದಿದೆ. ವನ್ಯಜೀವಿಗಳ ರಕ್ಷಣೆ ಮತ್ತು ಪ್ರಯಾಣಿಕರ ಸುರಕ್ಷತೆಗಾಗಿ ರಾತ್ರಿ ಸಂಚಾರ ನಿಷೇಧಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ
ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಭಾರಿ ಗಾತ್ರದ ಲಾರಿ ಸಂಚಾರಕ್ಕೆ ರೈತರ ತೀವ್ರ ವಿರೋಧ
Edited By:

Updated on: Nov 26, 2024 | 7:26 PM

ಚಾಮರಾಜನಗರ, ನವೆಂಬರ್​ 26: ಬಂಡೀಪುರ (Bandipur) ಹುಲಿ ಸಂರಕ್ಷಿತಾರಣ್ಯ ಪ್ರದೇಶದ ರಸ್ತೆಗಳಲ್ಲಿ ಅಧಿಕ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾತ್ರಿ 10 ಗಂಟೆ ನಂತರ ಅಕ್ರಮವಾಗಿ ಕೇರಳ, ತಮಿಳುನಾಡಿಗೆ ಲಾರಿಗಳ ಸಂಚಾರ ಆರೋಪ ಮಾಡಿದ್ದು, ಹೀಗಾಗಿ ಅರಣ್ಯ ಇಲಾಖೆ, ಆರ್​ಟಿಒ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ಮಾಡಿದ್ದಾರೆ. ವನ್ಯಜೀವಿಗಳ ಸುರಕ್ಷತೆ ಮತ್ತು ಈ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಅಧಿಕ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ವಿರೋಧಿಸಗುತ್ತಿದೆ.

ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್​ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕೆಲಕಾಲ ರಸ್ತೆ ತಡೆದು  ಪ್ರತಿಭಟಿಸಲಾಗಿದೆ. ಅರಣ್ಯ ಇಲಾಖೆಯ ಗ್ರೀನ್ ಟ್ಯಾಕ್ಸ್ ವಿರುದ್ಧವೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿಯ ಚರ್ಚೆ; ವನ್ಯ ಪ್ರಾಣಿಗಳ ಜೀವಕ್ಕೆ ಕಂಟಕ?

ರಾತ್ರಿ ಸಂಚಾರದಿಂದ ಪ್ರಾಣಿಗಳ ಪ್ರಾಣಕ್ಕೆ ಕುತ್ತು ಬರುತ್ತೆ, ಅಪಘಾತ ಪ್ರಕರಣ ಹಾಗೂ ಟಿಂಬರ್ ಮಾಫಿಯಾದಂತಹ ವಿಚಾರಗಳು ಹೆಚ್ಚುತ್ತೆ ಎನ್ನುವ ನಿಟ್ಟಿನಲ್ಲಿ ಈಗಾಗಲೇ ಬಂಡೀಪುರದಲ್ಲಿ ರಾತ್ರಿ ಸಂಚಾರವನ್ನು ನಿರ್ಬಂಧ ಮಾಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ರವರೆಗೂ ತುರ್ತು ಸೇವೆ ವಾಹನಗಳು ಬಿಟ್ಟು ಉಳಿದೆಲ್ಲ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ಯಾವುದೇ ಕಾರಣಕ್ಕೂ ಕೂಡ ರಾತ್ರಿ ಸಂಚಾರಕ್ಕೆ ಅವಕಾಶ ಕೊಡಬಾರದು. ಅವಕಾಶ ಮಾಡಿಕೊಟ್ಟರೆ ಗಡಿಯನ್ನು ಬಂದ್ ಮಾಡಿ ಉಗ್ರ ಹೋರಾಟ ಮಾಡುವುದಾಗಿ ಇತ್ತೀಚೆಗೆ ರೈತರು ಎಚ್ಚರಿಕೆ ಕೊಟ್ಟಿದ್ದರು.

ಇದನ್ನೂ ಓದಿ: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಬಂಡೀಪುರ; ತುಂಬಿದ ಕೆರೆ ಕಟ್ಟೆಗಳು, ಸ್ವಚ್ಛಂದದಿಂದ ವನ್ಯ ಜೀವಿಗಳ ಓಡಾಟ, ಫೋಟೋಸ್ ನೋಡಿ

ಇನ್ನು ಇತ್ತೀಚೆಗೆ ವಯನಾಡು ಲೋಕಸಭಾ ಉಪ ಚುನಾವಣೆ ಪ್ರಚಾರದ ವೇಳೆ ಡಿಸಿಎಂ ಡಿಕೆ ಶಿವಕುಮಾರ್​ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ನಿರ್ಬಂಧ ವಾಪಾಸ್ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ ಎಂದಿದ್ದರು. ಇದಕ್ಕೆ ಪರಿಸರವಾದಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us