AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರ್ಜಲ ವೃದ್ಧಿಸಲು ಮಾಸ್ಟರ್ ಪ್ಲ್ಯಾನ್, ಜಲಾಮೃತ ವಿಳಂಬಕ್ಕೆ ರೈತರ ಆಕ್ರೋಶ

ಚಾಮರಾಜನಗರ: ಅದು ಬರದ ನಾಡು ಎಂಬ ಹಣೆಪಟ್ಟಿ ಕಟ್ಟಿಕೊಂಡು ಪರದಾಡುತ್ತಿರುವ ಜಿಲ್ಲೆ. ಮಳೆಯಾದರೆ ಅಲ್ಲಿ ಬೆಳೆ, ಇಲ್ಲವಾದರೆ ರೈತರ ಬದುಕು ಅಕ್ಷರಶಃ ಬೀದಿಪಾಲು. ಪರಿಸ್ಥಿತಿ ಹೀಗಿರುವಾಗ ಆ ಜಿಲ್ಲೆಯ ಅಂತರ್ಜಲ ವೃದ್ಧಿಗೆ ಅಂತಾ ಉಜ್ವಲವಾದ ಯೋಜನೆಯೊಂದನ್ನ ಸರ್ಕಾರ ಜಾರಿಗೆ ತಂದಿತ್ತು. ಆದ್ರೆ ಗಡುವಿನ ಒಳಗೆ ಕೆಲಸ ಮುಗಿಯುವ ಲಕ್ಷಣ ಕಾಣ್ತಿಲ್ಲ. ಚಾಮರಾಜ ನಗರ ಜಿಲ್ಲೆಯಲ್ಲಿ ಮಳೆ ಬಾರದೆ ಕೆರೆಗಳು ಬತ್ತಿ ಹೋಗುತ್ತವೆ. ಹನಿ ಹನಿ ನೀರಿಗೂ ಜನ ಪರದಾಡುವಂತಹ ಪರಿಸ್ಥಿತಿ ಉಂಟಾಗುತ್ತದೆ. ಅಕಸ್ಮಾತ್ ಉತ್ತಮ ರೀತಿಯಲ್ಲಿ ಮಳೆ […]

ಅಂತರ್ಜಲ ವೃದ್ಧಿಸಲು ಮಾಸ್ಟರ್ ಪ್ಲ್ಯಾನ್, ಜಲಾಮೃತ ವಿಳಂಬಕ್ಕೆ ರೈತರ ಆಕ್ರೋಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 22, 2020 | 1:33 PM

Share

ಚಾಮರಾಜನಗರ: ಅದು ಬರದ ನಾಡು ಎಂಬ ಹಣೆಪಟ್ಟಿ ಕಟ್ಟಿಕೊಂಡು ಪರದಾಡುತ್ತಿರುವ ಜಿಲ್ಲೆ. ಮಳೆಯಾದರೆ ಅಲ್ಲಿ ಬೆಳೆ, ಇಲ್ಲವಾದರೆ ರೈತರ ಬದುಕು ಅಕ್ಷರಶಃ ಬೀದಿಪಾಲು. ಪರಿಸ್ಥಿತಿ ಹೀಗಿರುವಾಗ ಆ ಜಿಲ್ಲೆಯ ಅಂತರ್ಜಲ ವೃದ್ಧಿಗೆ ಅಂತಾ ಉಜ್ವಲವಾದ ಯೋಜನೆಯೊಂದನ್ನ ಸರ್ಕಾರ ಜಾರಿಗೆ ತಂದಿತ್ತು. ಆದ್ರೆ ಗಡುವಿನ ಒಳಗೆ ಕೆಲಸ ಮುಗಿಯುವ ಲಕ್ಷಣ ಕಾಣ್ತಿಲ್ಲ.

ಚಾಮರಾಜ ನಗರ ಜಿಲ್ಲೆಯಲ್ಲಿ ಮಳೆ ಬಾರದೆ ಕೆರೆಗಳು ಬತ್ತಿ ಹೋಗುತ್ತವೆ. ಹನಿ ಹನಿ ನೀರಿಗೂ ಜನ ಪರದಾಡುವಂತಹ ಪರಿಸ್ಥಿತಿ ಉಂಟಾಗುತ್ತದೆ. ಅಕಸ್ಮಾತ್ ಉತ್ತಮ ರೀತಿಯಲ್ಲಿ ಮಳೆ ಬಂದರೂ ಬೇಸಿಗೆ ಬರುವಷ್ಟರಲ್ಲೇ ನೀರಿನ ಮೂಲಗಳೆಲ್ಲಾ ಬಾಯಿತೆರೆದು ನಿಲ್ಲುತ್ತವೆ. ಹೀಗಾಗಿ ಜನ ಜಾನುವಾರುಗಳಿಗೆ ನೀರು ಒದಗಿಸಲು ಜಿಲ್ಲೆಯ ಜನ ಪರದಾಡುತ್ತಾರೆ.

ನೀರು ಇಂಗಿಸಿ ಅಂತರ್ಜಲ ವೃದ್ಧಿಸಲು ಮಾಸ್ಟರ್ ಪ್ಲ್ಯಾನ್! ಅಂದಹಾಗೆ ಜಲಾಮೃತ ಯೋಜನೆಯಡಿ ಚಾಮರಾಜನಗರದ ಹಲವು ಕೆರೆಗಳಿಗೆ ನೀರು ತುಂಬಿಸಲು ಪ್ಲ್ಯಾನ್ ಸಿದ್ಧವಾಗಿತ್ತು. ಪ್ರತಿ ವರ್ಷ ಸರಾಸರಿ 800 ಎಂಎಂ ಮಳೆಯಾಗುವುದರಿಂದ ಜಿಲ್ಲೆಯ 500ಕ್ಕೂ ಕೆರೆಕಟ್ಟೆಗಳು ತುಂಬಿ ಅಂತರ್ಜಲ ವೃದ್ಧಿಸುವುದು ಅಸಾಧ್ಯ.

ಹೀಗಾಗಿ, 5 ವರ್ಷಗಳ ಹಿಂದೆ ಜಿಲ್ಲೆಯ 20 ಕೆರೆಗಳಿಗೆ ನೀರು ತುಂಬಿಸಿ ಜನರ ದಾಹ ನೀಗಿಸಲು ಯೋಜನೆ ರೂಪಿಸಲಾಗಿತ್ತು. ಇದು ಯಶಸ್ಸು ಕಂಡಿತ್ತು. ಆದ್ರೆ ಕೆರೆಗೆ ನೀರು ತುಂಬಿಸುವ ಯೋಜನೆ ಕೆಲವೇ ಕ್ಷೇತ್ರಗಳಿಗೆ ಸೀಮೀತವಾಗಿದ್ದರಿಂದ ಎಲ್ಲೆಡೆ ಅನುಕೂಲ ಆಗಿರಲಿಲ್ಲ.

ಜಿಲ್ಲೆಯ ಎಲ್ಲಾ ಭಾಗಗಳಿಗೂ ಅನುಕೂಲ ಕಲ್ಪಿಸಲು ಅಧಿಕಾರಿಗಳು ಜಿಲ್ಲೆಯಾದ್ಯಂತ ಜಲಾಮೃತ ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದಾರೆ. 29 ಕೆರೆಗಳನ್ನ ಈ ಯೋಜನೆ ವ್ಯಾಪ್ತಿಗೆ ಒಳಪಡಿಸಲಾಗಿದೆ. 5 ಕೋಟಿ ವೆಚ್ಚದಲ್ಲಿ ಬ್ಲೂಪ್ರಿಂಟ್ ತಯಾರಿಸಲಾಗಿದೆ. ಆದರೆ ಈ ಯೋಜನೆ ಅಂದುಕೊಂಡಿದ್ದಕ್ಕಿಂತ ಹೆಚ್ಚು ಕಾಲ ತೆಗೆದುಕೊಳ್ಳುತ್ತಿರುವುದಕ್ಕೆ ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ಹೇಳೋದೆ ಬೇರೆ. ಯೋಜನೆಗೆ ಬೇಕಾದ ಅನುದಾನಕ್ಕೆ ಕೊರತೆ ಇಲ್ಲ, ಹೀಗಾಗಿ ಇನ್ನು 40 ದಿನಗಳಲ್ಲಿ ಯೋಜನೆಯನ್ನ ಪೂರ್ಣಗೊಳಿಸುತ್ತೇವೆ ಅನ್ನೋ ಭರವಸೆ ನೀಡುತ್ತಿದ್ದಾರೆ.

ಒಟ್ನಲ್ಲಿ ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಅನ್ನೋ ಹಾಗೆ ಅಧಿಕಾರಿಗಳು ಬೇಗ ಬೇಗ ಕೆಲಸವನ್ನ ಮುಗಿಸದೇ ಇರೋದು ರೈತರ ಚಿಂತೆಗೆ ಕಾರಣವಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನ ಯೋಜನೆ ಪೂರ್ಣಗೊಂಡರೆ ನೀರು ಶೇಖರಣೆ ಸುಲಭವಾಗುತ್ತದೆ. ಹಾಗೆ ಮುಂದಿನ ಬೇಸಿಗೆಗೆ ಉಪಯೋಗಕ್ಕೆ ಬರುತ್ತದೆ ಎಂಬ ಆಶಯ ರೈತರದ್ದು. ಆದ್ರೆ ಯೋಜನೆ ನಿಧಾನಗತಿಯಲ್ಲಿ ಸಾಗಿರೋದು ವಿಪರ್ಯಾಸ.

Published On - 1:28 pm, Sat, 22 February 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್