AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದವನ ವಿರುದ್ಧ FIR, ಅಪರಿಚಿತನಿಗಾಗಿ ಹುಡುಕಾಟ

ಪ್ರಧಾನಮಂತ್ರಿ ಕಚೇರಿ ಹೆಸರು ದುರುಪಯೋಗ ಆರೋಪ ಹಿನ್ನೆಲೆ ವಂಚಿಸಲು ಯತ್ನಿಸಿರುವ ಅಪರಿಚಿತ ವ್ಯಕ್ತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದವನ ವಿರುದ್ಧ FIR, ಅಪರಿಚಿತನಿಗಾಗಿ ಹುಡುಕಾಟ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jul 04, 2022 | 12:32 PM

Share

ಚಾಮರಾಜನಗರ: ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದ ನಕಲಿ ಅಧಿಕಾರಿ ವಿರುದ್ಧ FIR ದಾಖಲಾಗಿದೆ. ಚಾಮರಾಜನಗರ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ತನಗೆ ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ, ದೇವರ ದರ್ಶನ, ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ, ಜಂಗಲ್ ಸಫಾರಿಗೆ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಈ ಬಗ್ಗೆ ಅನುಮಾನ ಬಂದ ಕೂಡಲೆ ದೂರ ನೀಡಲಾಗಿದ್ದು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬಿಳಿಗಿರಿರಂಗನ ಬೆಟ್ಟದ ಕೆ.ಗುಡಿಯಲ್ಲಿ ವಾಸ್ತವ್ಯ, ಜಂಗಲ್ ಸಫಾರಿ, ದೇವರ ದರ್ಶನ ದೊಡ್ಡಸಂಪಿಗೆ ಮರದ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ರಾವ್ ಎಂಬ ಹೆಸರಿನಲ್ಲಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದರು. ಈ ವೇಳೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿಖರ ಹುದ್ದೆ ಕೇಳಿದ್ದಾರೆ. ಆಗ ರಾವ್ ಹೆಸರಿನ ವಂಚಿತ ವ್ಯಕ್ತಿ, ಹೆಸರು ಹಾಗೂ ಹುದ್ದೆ ಬಹಿರಂಗಪಡಿಸಬಾರದೆಂದು ತಿಳಿಸಿದ್ದಾರೆ. ಇದನ್ನು ಕೇಳಿ ಅನುಮಾನಗೊಂಡ ಜಿಲ್ಲಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಧಾನಮಂತ್ರಿ ಕಚೇರಿ ಹೆಸರು ದುರುಪಯೋಗ ಆರೋಪ ಹಿನ್ನೆಲೆ ವಂಚಿಸಲು ಯತ್ನಿಸಿರುವ ಅಪರಿಚಿತ ವ್ಯಕ್ತಿ ವಿರುದ್ದ ಎಫ್.ಐ.ಆರ್ ದಾಖಲಾಗಿದೆ. ಅಪರಿಚಿತ ವ್ಯಕ್ತಿಯ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೈಸೂರು ಮೂಲದ ವ್ಯಕ್ತಿ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಶಾಲೆ ಆರಂಭದ ಬೆನ್ನಲ್ಲೆ ಶಿಕ್ಷಕರ ಟಾರ್ಚರ್ ಆರಂಭ; ಶಿಕ್ಷಕನ ಏಟಿಗೆ ಐಸಿಯುಗೆ ದಾಖಲಾದ 6ನೇ ತರಗತಿ ವಿದ್ಯಾರ್ಥಿ!

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು